NEWSನಮ್ಮರಾಜ್ಯಸಂಸ್ಕೃತಿ

ಡಾ. ಬಾಬು ಜಗಜೀವನ ರಾಮ್ ಆದರ್ಶ ಪಾಲಿಸಿ

ಯುವಕರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕರೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಹಸಿರು ಕ್ರಾಂತಿಯ  ಹರಿಕಾರ , ಮಾಜಿ ಉಪಪ್ರಧಾನ ಮಂತ್ರಿ ದಿ. ಡಾ. ಬಾಬು ಜಗಜೀವನ ರಾಮ್ ಅವರ ಆದರ್ಶಗಳು, ವಿಚಾರಧಾರೆಗಳು ಎಂದೆಂದೂ ಮಾದರಿಯಾಗಿದ್ದು,  ಅವರ ವಿಚಾರಧಾರೆಗಳನ್ನು ಯುವಪೀಳಿಗೆಯು ಅಧ್ಯಯನ ಮಾಡಿ, ಪಾಲಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಯುವಕರಿಗೆ ಕರೆ ನೀಡಿದರು.

ಇಂದು ಡಾ. ಬಾಬು ಜಗಜೀವನ ರಾಮ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಗೌರವ ಸಮರ್ಪಿಸಿ ಸುದ್ದಿಗಾರೊಂದಿಗೆ ಮಾತನಾಡಿದರು.

ಸ್ವಾತಂತ್ರ್ಯಾ ನಂತರ ದೇಶದಲ್ಲಿ ಆಹಾರ ಸಮಸ್ಯೆ ತಲೆದೂರಿ ಜನತೆ ತಲ್ಲಣಗೊಂಡ ಸಂದರ್ಭದಲ್ಲಿ ಸುಧಾರಿತ ಬಿತ್ತನೆ ಬೀಜಗಳ ತಳಿಗಳನ್ನು ಬಳಕೆ ಮಾಡುವ ಮೂಲಕ ಕೃಷಿ ವಲಯದಲ್ಲಿ ಪ್ರಗತಿ ಸಾಧಿಸಿ, ಹಸಿರು ಕ್ರಾಂತಿ ಮಾಡಿದರು ಎಂದರು.

ಆಹಾರ ಉತ್ಪಾದನೆಯಲ್ಲಿ ಅಪರಿಮಿತ ಸಾಧನೆಗೈದರು. ಇದರಿಂದ ಜನತೆಯ ಹಸಿವನ್ನು ನೀಗಿಸಲಾಯಿತು. ಡಾ. ಬಾಬು ಜಗಜೀವನ ರಾಮ್ ಅವರು  ಹಸಿರು ಕ್ರಾಂತಿಯ ಹರಿಕಾರರೆಂದೇ ಹೆಸರುವಾಸಿಯಾದರು.  ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕೃಷಿ ಸಚಿವರಾಗಿ ಅಮೋಘ ಸೇವೆ ಸಲ್ಲಿಸಿದ್ದಾರೆ. ಕೇಂದ್ರ  ರಕ್ಷಣಾ ಸಚಿವರಾಗಿ ಮಾಡಿದ ಸಾಧನೆ  ಉಲ್ಲೇಖನೀಯವಾದುದು. ರೈತ ಮತ್ತು ಯೋಧ ಇವರ ಸಲುವಾಗಿ ಅವರು ಶ್ರಮಿಸಿದ ಶ್ರಮ ಅಪರಿಮಿತವಾದುದು.  ಕೃಷಿ, ರಕ್ಷಣಾ ವಲಯದಲ್ಲಿ ಅವರ  ಮಾರ್ಗದರ್ಶನ, ನಾಯಕತ್ವ ಅವಿಸ್ಮರಣೀಯವಾದುದು ಎಂದರು.

ಅವರು ದೇಶ ಕಂಡ ಅಪರೂಪದ ರಾಷ್ಟ್ರ ನಾಯಕರಾಗಿದ್ದಾರೆ. ಶೋಷಿತರ ಹಕ್ಕಿಗಾಗಿ ನಿರಂತರ ಶ್ರಮವಹಿಸಿ, ಶೋಷಿತರ ಏಳಿಗಾಗಿ ಅಪಾರವಾಗಿ ಶ್ರಮಿಸಿ ಶೋಷಿತರ ಆಶಾಕಿರಣವಾಗಿದ್ದಾರೆ. ಯುವ ಪೀಳಿಗೆಯು ಡಾ. ಬಾಬು ಜಗಜೀವನ ರಾಮ್ ಅವರ ಕುರಿತು ಅಧ್ಯಯನ ಮಾಡಿ, ಅವರ ಆದರ್ಶಗಳನ್ನು ಅನುಸರಿಸಬೇಕು. ಅವರ ಸಾಮಾಜಿಕ ಮತ್ತು ರಾಜಕೀಯ ವಿಚಾರಧಾರೆಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ, ವಸತಿ ಸಚಿವರಾದ ವಿ. ಸೋಮಣ್ಣ ಡಾ. ಬಾಬು ಜಗಜೀವನ ರಾಮ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ಸಂಸದ  ನಾರಾಯಣ ಸ್ವಾಮಿ, ಮಾಜಿ ಸಚಿವ ಎಚ್. ಆಂಜನೇಯ,  ಸರ್ಕಾರದ ಮುಖ್ಯಕಾರ್ಯದರ್ಶಿ ಟಿ.ಎಂ. ವಿಜಯಬಾಸ್ಕರ್,  ಪ್ರಗತಿ ಪರ  ಸಂಘಟನೆಗಳ  ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ