NEWS

ದೇಶದಲ್ಲಿ ಕೊರೊನಾ ರಣಕೇಕೆ, 40 ಸಾವಿರ ಸಮೀಪದಲ್ಲಿ ಸೋಂಕಿತರ ಸಂಖ್ಯೆ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಚೀನಾದಲ್ಲಿ ಹುಟ್ಟಿ ಇದೀಗ ಇಡೀ ವಿಶ್ವಕ್ಕೇ ಕಂಟಕವಾಗಿ ಪರಿಣಮಿಸಿರುವ ಕೊರೊನಾ ಭಾರತದಲ್ಲಿಯೂ ರಣಕೇಕೆ ಹಾಕುತ್ತಿದೆ.

ಈ ವಿಶ್ವಮಹಾಮಾರಿಗೆ ಇಲ್ಲಿಯವರೆಗೂ 1,218 ಮಂದಿ ಬಲಿಯಾಗಿದ್ದು, 37,336 ಮಂದಿ ಸೋಂಕಿಗೊಳಗಾಗಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ.

37,336 ಮಂದಿ ಸೋಂಕಿತರ ಪೈಕಿ ಈ ವರೆಗೂ 9,950 ಮಂದಿ ಗುಣಮುಖರಾಗಿದ್ದು, ಪ್ರಸ್ತುತ ದೇಶದಲ್ಲಿ ಇನ್ನೂ 26,167 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕೊರೊನಾ ಮಟ್ಟಹಾಕಲು ಈ ಹಿಂದೆ ಕೇಂದ್ರ ಸರ್ಕಾರ 21 ದಿನಗಳ ಕಾಲ ದೇಶದಾದ್ಯಂತ ಲಾಕ್’ಡೌನ್’ಗೆ ಆದೇಶ ನೀಡಿತ್ತು. ಲಾಕ್’ಡೌನ್ ನಡುವಲ್ಲೂ ಈ ಹೆಮ್ಮಾರಿ ತನ್ನ ಆರ್ಭಟ ಮುಂದುವರಿಸಿದೆ. ಇದರಿಂದ ಮತ್ತೆ  ಕೇಂದ್ರ ಸರ್ಕಾರ 14 ದಿನಗಳಿಗೆ ಲಾಕ್’ಡೌನ್ ವಿಸ್ತರಣೆ ಮಾಡಿದೆ. ಆದರೆ, ಕೊರೊನಾ ವಿರುದ್ದದ ಹೋರಾಟದ ಜೊತೆಗೇ ಆರ್ಥಿಕ ಚಟುವಟಿಕೆಗಳನ್ನೂ ಹಂತಹಂತವಾಗಿ ಆರಂಭಿಸುವ ಉದ್ದೇಶದೊಂದಿಗೆ ಕೇಂದ್ರ ಸರ್ಕಾರ ಹೆಚ್ಚಿನ ವಿನಾಯಿತಿಗಳನ್ನು ಪ್ರಕಟಿಸಿದೆ.

ಇದು ದೇಶದ ಜನತೆಗೆ ಮಾರಕವಾಗುವುದೋ ಅಥವಾ ವರವಾಗುವುದೋ ಎಂದು  ಸದ್ಯ ಇರುವ ಕುತೂಹಲವಾಗಿದೆ. ಈ ನಡುವೆ ಆತಂಕವು ನಾಗರಿಕರ ಮನದಲ್ಲಿ ಮನೆಮಾಡಿದೆ. ಅದು ಏನೇಆಗಲಿ ಈ ಮಹಾಮಾರಿಗೆ ಕಡಿವಾಣಹಾಕುವ ಮೂಲಕ ದೇಶದ ಜನರು ನಿಟ್ಟುಸಿರು ಬಿಡುವಂತಾಗಬೇಕು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ