NEWSಆರೋಗ್ಯನಮ್ಮಜಿಲ್ಲೆ

ಧಾರವಾಡದಲ್ಲೂ ಓರ್ವ ವ್ಯಕ್ತಿಯಲ್ಲಿ ಕೊರೊನಾ ದೃಢ

ರಾಜ್ಯದಲ್ಲಿ 21ಕ್ಕೇರಿದ ಕೊರೊನಾ ಪೀಡಿತರ ಸಂಖ್ಯೆ l ಮನೆಲೇ ಇದ್ದು ರೋಗ ಓಡಿಸಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಧಾರವಾಡ: ಆಸ್ಟ್ರೇಲಿಯಾ, ದುಬೈ,ಮಸ್ಕತ್ ಹಾಗೂ ಗೋವಾ ಮೂಲಕ ಧಾರವಾಡ ನಗರಕ್ಕೆ ಆಗಮಿಸಿದ್ದ   ಓರ್ವ ವ್ಯಕ್ತಿಯಲ್ಲಿ  ಕೋವಿಡ್ 19  ಪಾಸಿಟಿವ್ ಇರುವುದು, ಪ್ರಯೋಗಾಲಯ ವರದಿಯಿಂದ ದೃಢಪಟ್ಟಿದೆ  ಎಂದು ಧಾರವಾಡ ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.

ವಿದೇಶ ಪ್ರವಾಸದಿಂದ ಆಗಮಿಸಿದ್ದ ಈ ವ್ಯಕ್ತಿಯು ಮಾ.12 ರಂದು ಧಾರವಾಡ ನಗರಕ್ಕೆ ಆಗಮಿಸಿದ್ದರು.ಶಂಕಿತ ಕೋವಿಡ್ 19 ರ ರೋಗಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಮಾ.18 ರಂದು ಅವರು ಖಾಸಗಿ ಆಸ್ಪತ್ರೆಯೊಂದಕ್ಕೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ರೋಗ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ರೋಗ ಲಕ್ಷಣಗಳಿಗೆ ಅನುಗುಣವಾಗಿ ಅದೇ ದಿನ ಅವರ ಗಂಟಲು ಮತ್ತು ಮೂಗಿನ ದ್ರವದ ಮಾದರಿಯನ್ನು ತಪಾಸಣೆಗಾಗಿ ಶಿವಮೊಗ್ಗದ VDRL ಪ್ರಯೋಗಾಲಯಕ್ಕೆ ಕಳುಹಿಸಿ ಕೊಡಲಾಗಿತ್ತು. ಇದೀಗ ಪ್ರಯೋಗಾಲಯ ವರದಿ ಕೋವಿಡ್ 19 ಪಾಸಿಟಿವ್ ಎಂದಿ  ಬಂದಿದೆ.

ಹೊಸಯಲ್ಲಾಪುರ ಸುತ್ತಮುತ್ತ ಕಂಟೈನಮೆಂಟ್ ಪ್ರದೇಶ ಘೋಷಣೆ

ಸೋಂಕು ದೃಢಪಟ್ಟಿರುವ ವ್ಯಕ್ತಿಯು ಧಾರವಾಡ ನಗರದ ಹೊಸಯಲ್ಲಾಪುರ ಪ್ರದೇಶಕ್ಕೆ ಸೇರಿದ 33 ವರ್ಷ ವಯಸ್ಸಿನ ಪುರುಷನಾಗಿದ್ದಾರೆ. ಹೊಸಯಲ್ಲಾಪುರ ಪ್ರದೇಶವನ್ನು ಕಂಟೈನಮೆಂಟ್ ಎಂದು ಘೋಷಿಸಲಾಗಿದ್ದು, ಅಲ್ಲಿಂದ ಸುತ್ತಮುತ್ತಲಿನ 3 ಕಿಮೀ ವ್ಯಾಪ್ತಿಯಲ್ಲಿ ಸಾರ್ವಜನಿಕರ ಆಗಮನ ಮತ್ತು ನಿರ್ಗಮನವನ್ನು ನಿರ್ಬಂಧಿಸಲಾಗಿದೆ.

ಈ  ವ್ಯಕ್ತಿಗೆ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಈಗಾಗಲೇ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣ ಕಂಡು ಬಂದ ಸ್ಥಳದ ಸುತ್ತಮುತ್ತ ನಿಯಮಾನುಸಾರ ಸರ್ವೇ ಕಾರ್ಯ  ಕೈಗೊಳ್ಳಲಾಗಿದೆ. ಈ ವ್ಯಕ್ತಿಯ ಸಂಪರ್ಕಕ್ಕೆ ಬಂದವರ ಮಾಹಿತಿ ( Contact Tracing) ಸಂಗ್ರಹಿಸಲಾಗುತ್ತಿದೆ.

ಸಾಮಾಜಿಕ ಅಂತರ, ಶುಚಿತ್ವ ಪಾಲನೆಗೆ ಒತ್ತು ನೀಡಿ

ಜಿಲ್ಲೆಯಾದ್ಯಂತ ಈಗಾಗಲೇ ಕೊರೊನಾ ವೈರಸ್ ನಿಯಂತ್ರಣಕ್ಕೆ ಎಲ್ಲಾ ಅಗತ್ಯ ಕ್ರಮ ಕೈಗೊಳ್ಳಲಾಗಿದೆ.ಜನತೆ ಭಯಕ್ಕೆ ಒಳಗಾಗಬಾರದು, ಸಾಮಾಜಿಕ ಅಂತರ ಹಾಗೂ ಶುಚಿತ್ವಕ್ಕೆ ಹೆಚ್ಚು ಒತ್ತು ನೀಡಬೇಕು.ಸಾರ್ವಜನಿಕರು ಸಾಧ್ಯವಾದಷ್ಟು  ತಮ್ಮ  ಮನೆಗಳಲ್ಲಿಯೇ ಇರುವುದರ ಮೂಲಕ ವೈರಾಣು ತಡೆಯಲು ತಮ್ಮ ಸಹಕಾರ ನೀಡಬೇಕು  ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Leave a Reply

error: Content is protected !!
LATEST
ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ