NEWSನಮ್ಮಜಿಲ್ಲೆ

ನಾನು ರಾಜಕಾರಣ ಮಾಡಲು ಬಂದಿಲ್ಲ

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ನಾನು ಇಲ್ಲಿಗೆ ಬಂದಿರುವುದು ಅಭಿವೃದ್ಧಿಗಾಗಿ ಮಾತ್ರ. ರಾಜಕಾರಣ ಮಾಡಲು ಇದು ನನ್ನ ಕ್ಷೇತ್ರವಲ್ಲ. ಯಾರಿಗೋ ಒಬ್ಬರಿಗೆ ಅನುಕೂಲವಾಗುಂತೆ ಕೆಲಸ ಮಾಡುವವನು ನಾನಲ್ಲ. ಮುಖ್ಯಮಂತ್ರಿಗಳು ಜಿಲ್ಲಾ ಉಸ್ತುವಾರಿ ಹೊಣೆಯನ್ನು ನನಗೆ ವಹಿಸಿದ್ದು, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಕೆಲಸವನ್ನು ನಾನು ಮಾಡುತ್ತಿದ್ದೇನೆ ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ಮೈಸೂರು ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪ ಮೇಯರ್ ನಿಯೋಗವು ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದರು. ಸಭೆಯಲ್ಲಿ ಸಮಸ್ಯೆಗಳನ್ನು ಪಾಲಿಕೆ ನಿಯೋಗವು ಸಚಿವರ ಗಮನಕ್ಕೆ ತಂದಿದ್ದು, ಈ ಎಲ್ಲ ಸಮಸ್ಯೆಗಳಿಗೂ ಶೀಘ್ರವಾಗಿ ಪರಿಹಾರ ಕಲ್ಪಿಸುವುದಾಗಿ ಸಚಿವರು ಭರವಸೆ ನೀಡಿದರು.

ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಅವರು ಮೇ 7ರಂದು ಜಿಲ್ಲೆಗೆ ಭೇಟಿ ನೀಡಲಿದ್ದು, ಅವರ ಜೊತೆ ಸಭೆ ನಡೆಸಿ ತೀರ್ಮಾನವನ್ನು ತೆಗೆದುಕೊಳ್ಳಲಿದ್ದೇವೆ. ಸಚಿವ ಬಸವರಾಜ್ ಅವರೊಂದಿಗೆ ಚರ್ಚಿಸಿ ಪ್ರತಿ ವಾರ್ಡ್‍ಗಳಿಗೆ ಕಾರ್ಪೋರೇಟರ್‍ಗಳ ನಿಧಿಯಿಂದ ಅನುದಾನ ನೀಡುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ತಿಳಿಸಿದರು.

ಎಪಿಎಲ್ ಹಾಗೂ ಬಿಪಿಎಲ್ ಕಾರ್ಡ್‍ದಾರರಿಗೆ 2 ತಿಂಗಳಿಗೆ ಆಹಾರ ಪದಾರ್ಥ ಕೊಡಬೇಕು. ಬಿಪಿಎಲ್ ಕಾರ್ಡ್‍ಗೆ ಅರ್ಜಿ ಹಾಕಿದವರಿಗೂ ಪಡಿತರ ತಲುಪಿಸಬೇಕೆಂಬ ನಿಯಮ ಸರ್ಕಾರದಿಂದ ಜಾರಿಗೆ ಬಂದಿದೆ. ಹೀಗಾಗಿ ಅಂತಹವರಿಗೂ ಪಡಿತರವನ್ನು ಇನ್ನೆರೆಡು ತಿಂಗಳು ವಿತರಣೆ ಮಾಡಲೇಬೇಕು. ಇದರಲ್ಲಿ ಏನಾದರೂ ಸಮಸ್ಯೆಯಾಗಿದ್ದರೆ ನನ್ನ ಗಮನಕ್ಕೆ ತನ್ನಿ ಪರಿಹರಿಸುತ್ತೇವೆ ಎಂದು ಭರವಸೆ ನೀಡಿದರು.

ಪಾಲಿಕೆ ಬಜೆಟ್ ಮಂಡನೆ ವಿಚಾರವಾಗಿ ಮಾತನಾಡಿದ ಸಚಿವರು,  ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಬಜೆಟ್ ಮಂಡಿಸಬೇಕು. ಇಲ್ಲವೇ ಬೆಂಗಳೂರಿನಲ್ಲಿ ಬಿಬಿಎಂಪಿ ಮಂಡಿಸಿದ ಬಜೆಟ್ ಮಾದರಿ ಅನುಸರಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕವೂ ಮಂಡಿಸಬಹುದು ಎಂದು ಸಲಹೆ ನೀಡಿದರು.

ಸಮನ್ವಯತೆ ಕೊರತೆ ಇಲ್ಲ

ಮೈಸೂರು ಮೇಯರ್ ಹಾಗೂ ಕಮೀಷನರ್ ಅವರ ಜೊತೆ ಯಾವುದೇ ಸಮಸ್ಯೆ ಇಲ್ಲ. ಹೀಗಾಗಿ ಸಮನ್ವಯತೆಯಿಂದ ಕೆಲಸ ಮಾಡುವಂತೆ ನಾನೂ ಸಹ ಅಧಿಕಾರಿಗಳಲ್ಲಿ ಮನವಿ ಮಾಡಿದ್ದೇನೆ. ಹೀಗಾಗಿ ಮೇಯರ್-ಉಪಮೇಯರ್ ಹಾಗೂ ಪಕ್ಷಗಳ ಜಿಲ್ಲಾಧ್ಯಕ್ಷರಿಗೆ ಅವರವರ ವ್ಯಾಪ್ತಿಗೆ ಸಂಬಂಧಪಟ್ಟ ಸರ್ಕಾರಿ ಕಾರ್ಯಕ್ರಮಗಳ ಮಾಹಿತಿಯನ್ನು ನೀಡಬೇಕೆಂದು ಆಯುಕ್ತರು ಸೇರಿದಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ