NEWSನಮ್ಮಜಿಲ್ಲೆ

ನಿಮ್ಮ ಮನೆ ಬಳಿಗೆ ಅಗತ್ಯ ವಸ್ತುಗಳ ಡೆಲಿವರಿ

ಸಹಾಯ ವಾಣಿ 080-61914960ಗೆ ಚಾಲನೆ ನೀಡಿದ ಸಚಿವ ಆರ್‌. ಅಶೋಕ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೋವಿಡ್-19 ಸಂಬಂಧ ಅಗತ್ಯ ವಸ್ತುಗಳ ಹೋಮ್ ಡೆಲಿವರಿ ಸಹಾಯವಾಣಿಗೆ   ಮೇಯರ್‌ ಗೌತಮ್‌ ಕುಮಾರ್‌, ಸಚಿವ ಆರ್.ಅಶೋಕ್, ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಪಾಲಿಕೆ ಕೇಂದ್ರ ಕಚೇರಿ ಮಹಾಪೌರರ ಕೊಠಡಿಯಲ್ಲಿ ಚಾಲನೆ ನೀಡಿದರು.

ಕೋವಿಡ್-19 ಸಂಬಂಧ ಅಗತ್ಯ ವಸ್ತುಗಳನ್ನು ಮನೆ ಮೆನೆಗೆ ತಲುಪಿಸುವ ಉದ್ದೇಶದಿಂದ ಈಗಾಗಲೇ ಪ್ರಾಯೋಗಿಕವಾಗಿ ಕತ್ರಿಗುಪ್ಪೆ ವಾರ್ಡ್ ನಲ್ಲಿ ‘ಹೋಮ್ ಡೆಲಿವರಿ’ ಸಹಾಯವಾಣಿಯನ್ನು ಆರಂಭಿಸಲಾಗಿದ್ದು, ಇದೀಗ ಬೆಂಗಳೂರು ದಕ್ಷಿಣ ಲೊಕಸಭಾ ಕ್ಷೇತ್ರ ವ್ಯಾಪ್ತಿಯ ಬಸವನಗುಡಿ, ಜಯನಗರ, ಪದ್ಮನಾಭನಗರ ಹಾಗೂ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರಗಳಿಗೂ ಈ ಸೇವೆಯನ್ನು ವಿಸ್ತಿರಿಸಲಾಗುತ್ತಿದೆ ಎಂದು ಸಚಿವ ಆರ್‌. ಅಶೋಕ್‌  ತಿಳಿಸಿದರು.

ಅಗತ್ಯ ದಿನಬಳಕೆಯ ಸಾಮಗ್ರಿಗಳು, ದಿನಸಿ, ತರಕಾರಿ, ಔಷಧ ಸಾಮಗ್ರಿಗಳನ್ನು ನೇರವಾಗಿ ಮನೆ ಬಾಗಿಲಿಗೆ ತಲುಪಿಸುವ ಹೋಮ್ ಡೆಲಿವರಿ ಸೇವೆ ಇದಾಗಿದೆ. ಸಹಾಯವಾಣಿ ಸಂಖ್ಯೆ 080-61914960ಗೆ ಕರೆ ಮಾಡಿ ಅಗತ್ಯ ವಸ್ತುಗಳನ್ನು ಪಡೆಯಬಹುದಾಗಿದೆ ಎಂದು ಮಾಹಿತಿ ನೀಡಿದರು.

ಈ ಭಾಗದಲ್ಲಿ 7.5 ಲಕ್ಷ ಜನಸಂಖ್ಯೆ, 2.5 ಲಕ್ಷ ಮನೆಗಳು ಹಾಗೂ ದಿನಸಿ ಅಂಗಡಿ, ತರಕಾರಿ ಮಳಿಗೆ, ಔಷಧಿ ಮಳಿಗೆ, ಮಾಂಸದಗಡಿಗಳು ಸೇರಿದಂತೆ ಒಟ್ಟು 1926 ಮಳಿಗೆಗಳನ್ನು ಮ್ಯಾಪಿಂಗ್ ಮಾಡಲಾಗಿದ್ದು, ಉಚಿತವಾಗಿ ಡಿಲಿವರಿ ವ್ಯವಸ್ಥೆಯನ್ನು ಮಾಡಲಾಗಿದೆ ಎಂದರು.

ಪ್ರಸ್ತುತ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಮಾತ್ರ ಈ ಸೇವೆ ಇರಲಿದ್ದು, ಇದು ಯಶಸ್ವಿಯಾದರೆ ಮುಂದಿನ ದಿನಗಳಲ್ಲಿ ನಗರಾದ್ಯಂತ ಇದನ್ನು ವಿಸ್ತರಿಸಲಾಗುವುದು ಎಂದು ತಿಳಿಸಿದರು.

ಈ ವೇಳೆ ಉಪಮಹಾಪೌರ ರಾಮಮೋಹನ ರಾಜು, ದಕ್ಷಿಣ ವಲಯ ಜಂಟಿ ಆಯುಕ್ತ ವೀರಭದ್ರ ಸ್ವಾಮಿ, ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ರೋಹಿಣಿ ಕಟೋಚ್ ಸೆಪಟ್, ಮುಖ್ಯ ಆರೋಗ್ಯಾಧಿಕಾರಿ ಡಾ. ವಿಜೇಂದ್ರ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ ನಿರಂತರ ಮಳೆ- BBMP ಎಲ್ಲ ಅಧಿಕಾರಿಗಳು ಸನ್ನದ್ಧರಾಗಿ: ತುಷಾರ್ ಗಿರಿನಾಥ್