NEWSನಮ್ಮಜಿಲ್ಲೆ

ನಿರಾಶ್ರಿತರಿಗೆ ಅನ್ನ ನೀಡಿದ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ಪದಾಧಿಕಾರಿಗಳು

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮೈಸೂರು ಜಿಲ್ಲಾ ಶಾಖೆ ವತಿಯಿಂದ ಇಸ್ಕಾನ್ ಅಕ್ಷಯ ಪಾತ್ರೆಯ ನೆರವಿನೊಂದಿಗೆ ನಗರದ ವೃದ್ಧಾಶ್ರಮ ಹಾಗೂ ನಿರ್ಗತಿಕ ಕೇಂದ್ರಗಳಲ್ಲಿ ವಾಸಿಸುವ 1,200 ಜನರಿಗೆ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ಶುಕ್ರವಾರ ಕಚೇರಿಯಲ್ಲಿ ಸಾಂಕೇತಿಕವಾಗಿ ದಾರಿಹೋಕರಿಗೆ ಊಟ ಬಡಿಸುವ ಮೂಲಕ ಚಾಲನೆ ನೀಡಲಾಯಿತು.

ನಿಕಟಪೂರ್ವ ರಾಜ್ಯಾಧ್ಯಕ್ಷ ಹಾಗೂ ಜಿಲ್ಲಾಧ್ಯಕ್ಷ ಎಚ್.ಕೆ.ರಾಮು ಮಾತನಾಡಿ, ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಜಾರಿಮಾಡಿರುವ ಲಾಕ್‍ಡೌನ್ ಕ್ರಮವನ್ನು ನಾವು ಪಾಲಿಸಬೇಕಿದೆ. ಈ ಹಿನ್ನೆಲೆಯಲ್ಲಿ ನಿರಾಶ್ರಿತರು ಹಾಗೂ ಗಂಜಿಕೇಂದ್ರಗಳಲ್ಲಿ ವಾಸಿಸುತ್ತಿರುವ ಜನರಿಗೆ ಸಂಘದ ವತಿಯಿಂದ ಊಟದ ವ್ಯವಸ್ಥೆ ಮಾಡಲಾಗಿದೆ ಎಂದರು.

ಕೆ.ಆರ್.ಅಸ್ಪತ್ರೆಯ ರೋಗಿಗಳು ಹಾಗೂ ವೈದ್ಯಕೀಯ ಸಿಬ್ಬಂದಿಗಳಿಗೆ ಊಟದ ವ್ಯವಸ್ಥೆಗೆ  ಅನುಕೂಲವಾಗುವಂತೆ ಸಂಘದ ವತಿಯಿಂದ ದಿನಸಿ ಪದಾರ್ಥಗಳನ್ನು ಆಸ್ಪತ್ರೆಯ ನಿರ್ದೇಶಕ ಡಾ.ನಂಜರಾಜು ಅವರಿಗೆ ಹಸ್ತಾಂತರಿಸಲಾಗಿದೆ ಎಂದು ಹೇಳಿದರು.

ಕೊರೊನಾ ಸೋಂಕು ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರು ಮನೆಯಲ್ಲಿಯೇ ಇದ್ದು ಸಹಕರಿಸಬೇಕು. ಕೊರೊನಾ ವಿರುದ್ಧ ಹೋರಾಡಲು ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗಳು, ಪೆÇಲೀಸರು ಅವಿರತವಾಗಿ ಶ್ರಮಿಸುತ್ತಿದ್ದಾರೆ. ಆದ್ದರಿಂದ ಸರ್ಕಾರ ಆದೇಶಿಸುವ ಸೂಚನೆಗಳನ್ನು ಪಾಲಿಸಬೇಕು ಎಂದು ಮನವಿ ಮಾಡಿದರು.

ಕೆ.ಆರ್.ಆಸ್ಪತ್ರೆಯ ಸೂಪಡೆಂಟ್ ಡಾ.ನಂಜುಂಡಸ್ವಾಮಿ, ಡಾ.ಶಶಿ, ಸಂಘದ ಗೌರವ ಅಧ್ಯಕ್ಷ ಬಾಲಕೃಷ್ಣ, ಉಪಾಧ್ಯಕ್ಷ ಉದಯ್ ಕುಮಾರ್, ಆನಂದ್, ಕಾರ್ಯದರ್ಶಿ ಜೆ.ಗೋವಿಂದರಾಜ್, ಉಮೇಶ್, ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ ನಿರಂತರ ಮಳೆ- BBMP ಎಲ್ಲ ಅಧಿಕಾರಿಗಳು ಸನ್ನದ್ಧರಾಗಿ: ತುಷಾರ್ ಗಿರಿನಾಥ್