ದೇಶ-ವಿದೇಶ

ನೆಗಡಿ, ಕೆಮ್ಮು ಇರುವವರ ಚಿಕಿತ್ಸೆಗೆ ಫ್ಲೂ ಕಾರ್ನರ್ ಸ್ಥಾಪಿಸಿ: ಡಿಸಿ ದೀಪಾ ಚೋಳನ್

ವಿಜಯಪಥ ಸಮಗ್ರ ಸುದ್ದಿ

ಧಾರವಾಡ: ಕರೋನಾದ ಲಕ್ಷಣಗಳು ಇಲ್ಲದಿದ್ದರು ಸಹ ನೆಗಡಿ, ಕೆಮ್ಮು, ಸೀನಿನಿಂದ ಬಳಲುತ್ತಿರುವವರ ಚಿಕಿತ್ಸೆಗಾಗಿ ಪ್ರತ್ಯೇಕ ಫ್ಲೂ ಕಾರ್ನರ್ ಸ್ಥಾಪಿಸಬೇಕು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಇಂದು ನಡೆದ ಆರೋಗ್ಯ ಕಾರ್ಯಪಡೆಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರೋಗದ ಬಗ್ಗೆ ಸಾರ್ವಜನಿಕರಿಗೆ ತಿಳುವಳಿಕೆ ಮೂಡಿಸಿ ಭಯ ನಿವಾರಿಸಬೇಕು. ರೋಗ ಲಕ್ಷಣ ಇರುವವರು ಮತ್ತು ಚಿಕಿತ್ಸೆ ನೀಡುವ ನರ್ಸಿಂಗ್ ಮತ್ತು ವೈದ್ಯಕೀಯ ಸಿಬ್ಬಂದಿ ಹೊರತುಪಡಿಸಿ ಸಾಮಾನ್ಯ ಜನರಿಗೆ ಮಾಸ್ಕ್ ಬಳಕೆಯ ಅಗತ್ಯವಿಲ್ಲ ಎಂಬುದನ್ನು ಮನವರಿಕೆ ಮಾಡಿಕೊಡಬೇಕು ಎಂದು ಹೇಳಿದರು.

ರೈಲು, ವಿಮಾನ ನಿಲ್ದಾಣಗಳಲ್ಲಿ ದೂರದ ಪ್ರದೇಶಗಳಿಂದ ಬರುವ ಎಲ್ಲ ಪ್ರಯಾಣಿಕರನ್ನು ಥರ್ಮಲ್ ಸ್ಕ್ರೀನಿಂಗ್ ಮಾಡುವ ಕಾರ್ಯ ತ್ವರಿತವಾಗಿ ಆರಂಭಿಸಬೇಕು. ಶಿಕ್ಷಿತರು ಮತ್ತು ಅನಕ್ಷರಸ್ಥರಿಗೆ ಕರೋನಾ ವೈರಸ್ ಕುರಿತು ಸಮಾನವಾಗಿ ತಿಳುವಳಿಕೆ ನೀಡಬೇಕು. ಐಇಸಿ ಚಟುವಟಿಕೆಗಳನ್ನು ಸಂವಹನದ ವರ್ತನೆ ಬದಲಾಯಿಸಿಕೊಳ್ಳುವ (Behavioural changing communication) ತಿಳುವಳಿಕೆ ನೀಡುವ ಕಾರ್ಯಕ್ರಮವಾಗಿ ಜಾರಿಗೊಳಿಸಬೇಕು ಎಂದು ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಬಿ.ಸಿ. ಸತೀಶ ಮಾತನಾಡಿ, ಸಾರ್ವಜನಿಕ ಆರೋಗ್ಯ ಹಿತದೃಷ್ಠಿಯಿಂದ ಎಲ್ಲ ಜಾತ್ರೆ, ಉರುಸು, ಧಾರ್ಮಿಕ ಆಚರಣೆಗಳು ರದ್ದುಗೊಂಡಿವೆ. ಧಾರ್ಮಿಕ ಮುಖಂಡರು ಸ್ವಯಂಪ್ರೇರಿತರಾಗಿ ಇವುಗಳ ಆಚರಣೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಸಹಕರಿಸಲು ಕೋರಬೇಕು. ವಿದೇಶಗಳಿಂದ ಬಂದಿರುವ ನಿವಾಸಿಗಳ ಬಗ್ಗೆ ಮಾಹಿತಿ ಕ್ರೋಢಿಕರಿಸಬೇಕು ಎಂದು ಸಲಹೆ ನೀಡಿದರು.

ಹುಬ್ಬಳ್ಳ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ಸುರೇಶ ಇಟ್ನಾಳ, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಯಶವಂತ ಮದೀನಕರ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಶಿವಕುಮಾರ ಮಾನಕರ, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ. ಸುಜಾತಾ ಹಸವಿಮಠ, ಕಿಮ್ಸ್ ವೈದ್ಯಕೀಯ ನಿರ್ದೇಶಕ ಡಾ. ಅರುಣಕುಮಾರ, ರೈಲ್ವೆ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ರವಿ, ಎಸ್‍ಡಿಎಮ್ ಆಸ್ಪತ್ರೆಯ ಡಾ. ವಿಜಯ ಕುಲಕರ್ಣಿ, ಡಾ. ಬಲರಾಮ ನಾಯಕ್, ಡಾ.ಕಿರಣ ಹೆಗಡೆ, ಡಾ. ಎಸ್.ಎಮ್. ಹೊನಕೇರಿ, ಡಾ. ಎಸ್.ಎಮ್. ನಿಂಬಣ್ಣವರ, ಡಾ. ತನುಜಾ, ಡಾ. ಶ್ರೀನಿವಾಸ, ಡಾ. ಭಾರತಿ ಕೊರ್ಲಹಳ್ಳಿ, ಜಿಲ್ಲಾ ಆಯುಷ್ ಅಧಿಕಾರಿ ಡಾ. ಸಂಗಮೇಶ ಕಲಹಾಳ, ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ ಸದಾಶಿವ ಮರ್ಜಿ ಮತ್ತಿತರರು ಇದ್ದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ