NEWSನಮ್ಮರಾಜ್ಯರಾಜಕೀಯ

ಪರಿಸರ ಸ್ನೇಹಿ ವಾಹನಗಳ ಖರೀದಿಗೆ ಚಿಂತನೆ: ಸಚಿವ ಲಕ್ಷ್ಮಣ ಸವದಿ

 ಮೊಬೈಲ್‍ನಲ್ಲಿ ಮಾತನಾಡಿಕೊಂಡು ವಾಹನ ಚಾಲನೆ ಮಾಡಿದರೆ ದಂಡ    

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ನಗರದಲ್ಲಿ ವಾಯುಮಾಲಿನ್ಯ ಹೆಚ್ಚಾಗುತ್ತಿದ್ದು, ಮಾಲಿನ್ಯ ತಡೆಗಟ್ಟಲು ಪರಿಸರ ಸ್ನೇಹಿ ವಾಹನಗಳು – ಬಿ.ಎಸ್. 6 ಮಾದರಿಯ ವಾಹನಗಳನ್ನು ಖರೀದಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸಂಗಪ್ಪ ಸವದಿ ತಿಳಿಸಿದರು.

ವಿಧಾನಪರಿಷತ್ತಿನಲ್ಲಿ ನಡೆದ ಪ್ರಶ್ನೋತ್ತರ ವೇಳೆ ಪಿ.ಆರ್. ರಮೇಶ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಎಲ್ಲಾ ಸರ್ಕಾರಿ ಹಾಗೂ ಖಾಸಗಿ ವಾಹನಗಳನ್ನು ಕಡ್ಡಾಯವಾಗಿ ತಪಾಸಣೆಗೆ ಒಳಪಡಿಸಲು ಕ್ರಮ ವಹಿಸಲಾಗಿದೆ. ಕೆ.ಎಸ್.ಆರ್.ಟಿ.ಸಿ ಮತ್ತು ಬಿಎಂಟಿಸಿ ಬಸ್ಸುಗಳ ವಾಹನದ ಇಂಜಿನ್‍ಗಳು ಬಿ.ಎಸ್. 4 ರ ಮಾದರಿಯಾಗಿವೆ. ಇವುಗಳನ್ನು ನಿಲ್ಲಿಸುವ ಸಂಬಂಧ ಏಪ್ರಿಲ್ 1ರಿಂದ ಬಿ.ಎಸ್. 6 ಮಾದರಿಯ ವಾಹನಗಳ ಖರೀದಿಗೆ ಕ್ರಮ ವಹಿಸಲಾಗಿದೆ. ಬಿ.ಎಂ.ಟಿ.ಸಿ. ಸಂಸ್ಥೆಗೆ ಹೊಸ 400 ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಈಗಾಗಲೇ ಟೆಂಡರ್ ಕರೆಯಲಾಗಿದೆ. 100 ಕಡೆ ಚಾರ್ಜಿಂಗ್ ಪಾಯಿಂಟ್ ಅಳವಡಿಸಲು ಗುರುತಿಸಲಾಗಿದ್ದು, ಈಗಾಗಲೇ ಇವುಗಳ ಅನುಷ್ಠಾನಕ್ಕಾಗಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.

ನಿಗದಿತ ಪ್ರಮಾಣಕ್ಕಿಂತ ಹೆಚ್ಚು ಹೊಗೆ ಹೊರಸೂಸುವ ಕೆ.ಎಸ್.ಆರ್.ಟಿ.ಸಿ ಮತ್ತು ಬಿ.ಎಂ.ಟಿ.ಸಿ. ವಾಹನಗಳನ್ನು ಸಹ ಪ್ರವರ್ತನ ಸಮಯದಲ್ಲಿ ತಪಾಸಣೆ ನಡೆಸಿ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಕನಾಟಕ ಮೋಟಾರು ವಾಹ ನಿಯಮಾವಳಿ 1989ರ 231 ಬಿ ಪ್ರಕಾರ ಬೆಂಗಳೂರು ನಗರದಲ್ಲಿ 415 ವಾಯುಮಾಲಿನ್ಯ ತಪಾಸಣಾ ಕೇಂದ್ರಗಳನ್ನು ತೆರೆಯಲು ಅನುಮತಿಸಲಾಗಿದೆ. ಹೊಸದಾಗಿ ನೋಂದಣಿಯಾದ ವಾಹನಗಳಿಗೆ ಒಂದು ವರ್ಷ ಅವಧಿಗೆ ವಾಯುಮಾಲಿನ್ಯ ನಿಯಂತ್ರಣ ಪ್ರಮಾಣ ಪತ್ರದಿಂದ ವಿನಾಯಿತಿ ಇದೆ. ನಂತರ ಎಲ್ಲಾ ಬಿ.ಎಸ್. 3 ಮತ್ತು ಬಿ.ಎಸ್. 4 ಮಾದರಿಯ ವಾಹನಗಳ ಪಿಯುಸಿ ಪ್ರಮಾಣ ಪತ್ರ ಪಡೆಯುವುದು ಕಡ್ಡಾಯವಾಗಿದೆ ಎಂದು ತಿಳಿಸಿದರು.

ಬಿ.ಎಸ್. 4 ಮಾದರಿಯ ವಾಹನಗಳು 12 ತಿಂಗಳ ಅವಧಿಗೆ ವಾಯು ಮಾಲಿನ್ಯ ತಪಾಸಣಾ ಪ್ರಮಾಣ ಪತ್ರಗಳನ್ನು ವಿಸ್ತಿರಿಸಲಾಗುತ್ತಿದೆ ಇದಲ್ಲದೆ, ಬೆಂಗಳೂರು ನಗರದಲ್ಲಿ ಸಂಚರಿಸುವ 2-ಸ್ಟ್ರೋಕ್ ಆಟೋರಿಕ್ಷಾಗಳಿಗೆ 2020, ಮಾರ್ಚ್ ಅಂತ್ಯದ ಅವಧಿಗೆ ಮಾತ್ರ ರಸ್ತೆಗಳಲ್ಲಿ ಸಂಚರಿಸಲು ಅನುಮತಿಸಲಾಗಿದೆ ಎಂದರು.

ಸಾರ್ವಜನಿಕ ವಾಹನಗಳಾದ ಕೆ.ಎಸ್.ಆರ್.ಟಿ.ಸಿ, ಬಿ.ಎಂ.ಟಿ.ಸಿ. ಆಟೋ, ಟ್ಯಾಕ್ಸಿ ಮುಂತಾದ ವಾಹನಗಳ ಚಾಲಕರು ಮೊಬೈಲ್‍ನಲ್ಲಿ ಮಾತನಾಡಿಕೊಂಡು ಚಾಲನೆ ಮಾಡುತ್ತಿರುವ ಬಗ್ಗೆ ಪ್ರವರ್ತನ ಸಮಯದಲ್ಲಿ ತಪಾಸಣೆ ನಡೆಸಿ ದಂಡ ವಸೂಲಿ ಮಾಡಲು ನಿಯಮಾನುಸಾರ ಕ್ರಮ ವಹಿಸಲಾಗಿದೆ ಎಂದು ಸಚಿವರು ತಿಳಿಸಿದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ