NEWSದೇಶ-ವಿದೇಶ

ಬಡವರ ಹಸಿವು ನೀಗಿಸಲು 1.70 ಲಕ್ಷ ಕೋಟಿ ರೂ. ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ಕೇಂದ್ರ ಸರ್ಕಾರದ ನಿರ್ಧಾರವನ್ನು ಮುಕ್ತವಾಗಿ ಸ್ವಾಗತಿಸಿದ ಸಿಎಂ ಯಡಿಯೂರಪ್ಪ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಕೋವಿಡ್-19 ಪಿಡುಗಿನಿಂದ ಜನಜೀವನದ ಮೇಲೆ ಆಗುವ ದುಷ್ಪರಿಣಾಮಗಳನ್ನು ತಡೆಯಲು ಕೇಂದ್ರ ಸರ್ಕಾರವು ರೂ.1.70 ಲಕ್ಷ ಕೊಟಿ ರೂ. ಬಿಡುಗಡೆ ಮಾಡಿದೆ.

ಸಂಕಷ್ಟದ ಈ ಸಮಯದಲ್ಲಿ ಕೇಂದ್ರ ಸರಕಾರದ ಈ ನಿರ್ಧಾರ ಬಡವರು, ರೈತರು, ಮಹಿಳೆಯರನ್ನು ಮತ್ತು ಕೂಲಿ ಕಾರ್ಮಿಕರು ನೆಮ್ಮದಿಯಾಗಿ ಬದುಕಲು ಇದು ಅನುವು ಮಾಡಿಕೊಡುವುದರ ಜತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೋವಿಡ್-19 ರ ವಿರುದ್ಧ ತೆಗೆದುಕೊಂಡ ಕ್ರಮಗಳನ್ನು ಹೆಚ್ಚು ಗಂಭೀರವಾಗಿ ಮತ್ತು ಚುರುಕಾಗಿ ಅನುಷ್ಠಾನಗೊಳಿಸುವಲ್ಲಿ ಈ ಹಣ ಸಹಕಾರಿಯಾಗುತ್ತದೆ. 1.70 ಲಕ್ಷ ಕೋಟಿ ಆರ್ಥಿಕ ಪರಿಹಾರ ಘೋಷಿಸುವ ಮೂಲಕ  ಕೇಂದ್ರ ಸರ್ಕಾರ ಬಡವರ ಹಸಿವನು ಅರಿತು 80 ಕೋಟಿ ಜನರಿಗೆ ಪ್ರತಿ ತಿಂಗಳು 5 ಕೆ.ಜಿ. ಹೆಚ್ಚುವರಿ ಗೋಧಿ ಅಥವಾ ಅಕ್ಕಿ ಮತ್ತು 1 ಕೆ.ಜಿ. ಬೇಳೆಯನ್ನು ಕೊಡಲು ನಿರ್ಧರಿಸಿದ್ದು ಒಂದು ದೊಡ್ಡ ಅಸಾಧಾರಣ ನಿರ್ಧಾರ ಎನ್ನಬಹುದಾಗಿದೆ.

ಮಹಿಳೆಯರ ಜನಧನ್ ಖಾತೆಗೆ ಪ್ರತಿ ತಿಂಗಳು 500 ರೂ. ನಂತೆ 3 ತಿಂಗಳಿಗೆ 1500 ರೂ. ಗಳನ್ನು ಮುಂಗಡವಾಗಿ ಮತ್ತು ನೇರವಾಗಿ ವರ್ಗಾವಣೆ ಮಾಡುವುದಾಗಿ ತಿಳಿಸಿದೆ. ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿನ 2,000 ಹಣವನ್ನು ಮುಂಗಡವಾಗಿ ಕೊಡುವುದು, ಮಹಿಳಾ ಸ್ವಸಹಾಯ ಸಂಘಗಳಿಗೆ ಸಾಲ ಯೋಜನೆ 10 ಲಕ್ಷ ರೂಪಾಯಿಯಿಂದ 20 ಲಕ್ಷಕ್ಕೆ ಏರಿಸಿದ್ದು ಇದರಿಂದ 63 ಲಕ್ಷ ಮಹಿಳಾ ಸ್ವಸಹಾಯ ಸಂಘಗಳಿಗೆ ಲಾಭವಾಗಲಿದೆ.

8.3 ಕೋಟಿ ಗೃಹಿಣಿಯರಿಗೆ ಉಜ್ವಲ್ ಯೋಜನೆ ಅಡಿ 3 ಉಚಿತ ಗ್ಯಾಸ್ ಸಿಲಿಂಡರ್ಗಳನ್ನು ನೀಡುವುದು, ಸಂಘಟಿತ ವಲಯದ ಕಾರ್ಮಿಕರಿಗೆ ಇ.ಪಿ.ಎಫ್. ಮೇಲೆ ಸಾಲ ಸೌಲಭ್ಯ ಮತ್ತು ಉದ್ಯೋಗ ಖಾತರಿ ಯೋಜನೆಯಡಿ ಅಡಿ ಕೂಲಿ ದರವನ್ನು 249 ರಿಂದ ರೂ.302 ಏರಿಸಿದ್ದು, ದೇಶದ ಬಡವರು ಇಂತಹ ಸಂದಿಗ್ಧ ಸಮಯದಲ್ಲಿ ಹಸಿವಿನಿಂದ ಬಳಲದಂತೆ ಮಾಡುತ್ತದೆ.” ”ಇದರ ಜೊತೆಗೆ ವಯೋವೃದ್ಧರಿಗೆ, ವಿಧವೆಯರಿಗೆ 1000 ರೂ.  ಗೌರವಧನವನ್ನು 3 ತಿಂಗಳವರೆಗೆ ಕೊಡಲು ನಿರ್ಧರಿಸಿರುವುದು ಒಳ್ಳೆಯ ನಿರ್ಧಾರ.

ಇದಲ್ಲದೇ ಕೇಂದ್ರ ಸರ್ಕಾರದಿಂದ ಉದ್ಯಮ ವಲಯಕ್ಕೆ ಹಲವಾರು ಹಣಕಾಸು ಸಹಾಯಕ ಯೋಜನೆಗಳನ್ನು ಕೊಡಮಾಡಿ ಕೋವಿಡ್-19 ಮಹಾಮಾರಿಯ ಪರಿಣಾಮದಿಂದ ಉಂಟಾದ ಆರ್ಥಿಕ ಬಿಕ್ಕಟ್ಟನ್ನು ಸರಿದೂಗಿಸುವಲ್ಲಿ ಸಹಕಾರಿಯಾಗುತ್ತಿದೆ.

ಈ ಬಗ್ಗೆ ಮಾತನಾಡಿವರ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಬಡವರಿಗೆ ಇಷ್ಟೊಂದು ದೊಡ್ಡಮಟ್ಟದ ಹಣಕಾಸು ಸಹಾಯ ಮಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ನಿರಧಾರವನ್ನು ಸ್ವಾಗತಿಸಿದ್ದು, ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ