NEWSದೇಶ-ವಿದೇಶಸಿನಿಪಥ

ಬಾಲಿವುಡ್‌ ನಟ ಇಫಾರ್ನ್‌ ಖಾನ್‌ ಇನ್ನಿಲ್ಲ

ವಿಜಯಪಥ ಸಮಗ್ರ ಸುದ್ದಿ

ಮುಂಬೈ: ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಬಾಲಿವುಡ್ ಖ್ಯಾತ ನಟ ಇರ್ಫಾನ್ ಖಾನ್ (53) ಬುಧವಾರ ಬೆಳಗ್ಗೆ ನಿಧನರಾಗಿದ್ದಾರೆ.

ಖಾನ್ ನಿಧನ ಬಾಲಿವುಡ್ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಸಿನಿಮಾ, ರಂಗಭೂಮಿ, ರಾಜಕೀಯ ಮತ್ತುಉದ್ಯಮಿಗಳು ಸೇರಿದಂತೆ ಎಲ್ಲಾ ರಂಗದ ಗಣ್ಯರು  ಕಂಬನಿ ಮಿಡಿದಿದ್ದಾರೆ.

ದೊಡ್ಡ ಕರುಳು ಸಮಸ್ಯೆಯಿಂದ ಬಳಲುತ್ತಿದ್ದ ಇರ್ಫಾನ್ ಖಾನ್ ಅವರನ್ನು ಮಂಗಳವಾರ ಮಧ್ಯಾಹ್ನ ಮುಂಬೈನ ಕೋಕಿಲಾ ಬೆನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.  ಆದರೆ ಚಿಕಿತ್ಸೆ ಫಲಕಾರಿಯಾಗಿದೆ ಇಂದು ಬೆಳಗ್ಗೆ ಅಸುನೀಗಿದ್ದಾರೆ ಎಂದು ಕುಟುಂಬ ಮೂಲಗಳು ಖಚಿತಪಡಿಸಿವೆ.

ಇತ್ತೀಚೆಗೆ ಇರ್ಫಾನ್ ತಾಯಿ ಸಯೀದಾ ಬೇಗಂ(95ವರ್ಷ) ಅವರು ವಯೋಸಹಜ ಕಾಯಿಲೆಯಿಂದ ಜೈಪುರದಲ್ಲಿ ನಿಧನರಾಗಿದ್ದರು. ಆದರೆ ಪುತ್ರ ಇರ್ಫಾನ್‌ಗೆ ಲಾಕ್ ಡೌನ್‌ನಿಂದಾ ಮುಂಬೈನಲ್ಲಿ ಇದ್ದಿದ್ದು, ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿರಲಿಲ್ಲ. ಆದ್ದರಿಂದ ವಾಟ್ಸ್‌ಆಪ್‌ ವೀಡಿಯೋ ಮೂಲಕ ತನ್ನ ಮೃತ ತಾಯಿಯ ಅಂತಿಮ ದರ್ಶನ ಪಡೆದಿದ್ದರು.

ಈ ಹಿಂದೆ ನಟ ಇರ್ಫಾನ್ ಖಾನ್ ನ್ಯೂರೋಎಂಡೋಕ್ರೈನ್ ಸಮಸ್ಯೆಯಿಂದ ಬಳಲುತ್ತಿದ್ದು, ಇದಕ್ಕಾಗಿ ತಾನು ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು 2018ರಲ್ಲಿ ಘೋಷಿಸಿದ್ದರು. ಅದಕ್ಕಾಗಿ ಅವರು ವಿದೇಶಕ್ಕೆ ತೆರಳಿ ಚಿಕಿತ್ಸೆಯನ್ನು ಪಡೆದಿದ್ದರು.

ಬಾಲಿವುಡ್ ನ ವಾರಿಯರ್, ಮಕ್ಬೂಲ್, ಹಾಸಿಲ್, ಪಾನ್ ಸಿಂಗ್ ತೋಮರ್, ರೋಗ್. ಲೈಫ್ ಆಫ್ ಪೈ, ನೇಮ್ ಸೇಕ್, ಸೇರಿದಂತೆ ಹಲವು ಚಿತ್ರಗಳ ಮೂಲಕ ಇರ್ಫಾನ್ ಚಿತ್ರಪ್ರೇಮಿಗಳ ಮನಗೆದ್ದಿದ್ದರು.

ಇರ್ಫಾನ್ ಖಾನ್ ನಿಧನಕ್ಕೆ ಗಣ್ಯರ ಸಂತಾಪ

ನಟನ ಅಗಲಿಕೆಯ ಸುದ್ದಿ ತಿಳಿದ ಸಿನಿಮಾ ತಾರೆಯರು, ರಾಜಕೀಯ ವ್ಯಕ್ತಿಗಳು, ಉದ್ಯಮಿಗಳು ಸೇರಿ ಎಲ್ಲಾ ರಂಗದ ಗಣ್ಯರು ಇರ್ಫಾನ್ ಖಾನ್ ಅವರ ಅಗಲಿಕೆಯ ನೋವನ್ನು ಸಹಿಸಿಕೊಳ್ಳುವಂತ ಶಕ್ತಿಯನ್ನು ದೇವರು ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸುವ ಮೂಲಕ ಸಂತಾಪ ಸೂಚಿಸಿದ್ದಾರೆ.

#IrrfanKhan.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ