NEWS

ಬೆಂಗಳೂರಿನ 11ಮಂದಿ ಸೇರಿ ಇಂದು 18 ಜನರಿಗೆ ಕೊರೊನಾ ಸೋಂಕು

 ರಾಜಧಾನಿಯಲ್ಲಿ 110ಕ್ಕೇರಿದ ಪೀಡಿತರ ಸಂಖ್ಯೆ l ಅಟ್ಟಹಾಸ ಮೆರೆಯುತ್ತಿದೆ ಕೋವಿಡ್‌-19

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:  ಇಂದು ಬೆಳಗ್ಗೆ 18 ಮಂದಿಗೆ ಕೊರೊನಾ ಪಾಸಿಟಿವ್‌ ಇರುವುದು ತಿಳಿದು ಬಂದಿದ್ದು, ಈ ಮೂಲಕ  ರಾಜ್ಯದಲ್ಲಿ ಸೋಂಕಿತರ  463ಕ್ಕೆ ಏರಿಕೆ ಕಂಡಿದೆ.

ಶುಕ್ರವಾರ ಮಧ್ಯಾಹ್ನದವರೆಗಿನ ಮಾಹಿತಿಯಂತೆ ಬೆಂಗಳೂರಿನ 11, ಬೆಳಗಾವಿಯಲ್ಲಿ 2, ಬಾಗಲಕೋಟೆಯಲ್ಲಿ ಎರಡು, ವಿಜಯಪುರದಲ್ಲಿ, ತುಮಕೂರು, ಚಿಕ್ಕಬಳ್ಳಾಪುರದಲ್ಲೂ ತಲಾ ಒಂದೊಂದು ಪ್ರಕರಣ ಪತ್ತೆಯಾಗಿದೆ.

ಪಾದರಾಯನಪುರದಲ್ಲಿ ಇತ್ತೀಚೆಗೆ ಗಲಾಟೆ ಮಾಡಿದ್ದ 121 ಮಂದಿಯನ್ನು ರಾಮನಗರದ ಜೈಲಿನಲ್ಲಿ ಇರಿಸಲಾಗಿತ್ತು. ಅವರಲ್ಲಿ 5 ಮಂದಿಗೆ ಕೊರೊನಾ ಪಾಸಿಟಿವ್‌ ಇರುವುದು ದೃಢಪಟ್ಟಿದೆ. ಜತೆಗೆ ಬೆಂಗಳೂರಿನ ಹನ್ನೊಂದು ಮಂದಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, ಈಗ ಅಲ್ಲಿನ ನಿವಾಸಿಗಳಲ್ಲಿ ಆತಂಕ ಹೆಚ್ಚಿಸಿದೆ. ರಾಜ್ಯದಲ್ಲಿ ಕೊರೊನಾ ತನ್ನ ಅಟ್ಟಹಾಸ ಮೆರೆಯುತ್ತಿದ್ದು ಇದರೊಂದಿಗೆ ರಾಜ್ಯದಲ್ಲಿ ಸಾವಿನ ಸಂಖ್ಯೆ 18ಕ್ಕೆ ಏರಿಕೆಯಾಗಿದೆ. ಈವರೆಗೆ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 463ಕ್ಕೆ ಏರಿಕೆಯಾಗಿದೆ.

ಕೊರೊನಾ ಪರಿಸ್ಥಿತಿಯನ್ನು ನಿಯಂತ್ರಿಸಲು ಸರ್ಕಾರ ಮತ್ತು ಅಧಿಕಾರಿಗಳು ಹಗಲಿರುಳು ಶ್ರಮಿಸುತ್ತಿದ್ದಾರೆ. ಇನ್ನು ನಾಗರಿಕರು ಕೂಡ ಅವರ ಶ್ರಮಕ್ಕೆ ಕೈಜೋಡಿಸುವ ಮೂಲಕ ಈ ವಿಶ್ವಮಾರಿ ಕೊರೊನಾವನ್ನು ದೇಶದಿಂದ ಬಡಿದೋಡಿಸಲು ಮುಂದಾಗಬೇಕು.

ದೇಶದಲ್ಲಿ 23077ಕ್ಕೇರಿದ ಸೋಂಕಿತರ ಸಂಖ್ಯೆ

ಇನ್ನು ದೇಶದಲ್ಲಿ ಈವರೆಗೆ 23077 , ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 718 ಮಂದಿ ಮೃತಪಟ್ಟಿದ್ದಾರೆ. 4,258 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 27,45,469  ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 1,91,791 ಜನರು ಮೃತಪಟ್ಟಿದ್ದಾರೆ. 7,55,462 ಮಂದಿ ರೋಗದಿಂದ ಗುಣಮುಖರಾಗಿದ್ದಾರೆ.

ಹಜ್‌ ಭವನಕ್ಕೆ ಪಾದರಾಯನಪುರ ಪುಂಡರು ಶಿಫ್ಟ್‌

ಬೆಂಗಳೂರಿನ ಹಜ್‌ ಭವನಕ್ಕೆ ಪಾದರಾಯನಪುರದ ಪುಂಡರನ್ನು ಇಂದು ಮಧ್ಯಾಹ್ನ 7 KSRTC ಬಸ್‌ಗಳ ಮೂಲಕ ರಾಮನಗರದಿಂದ ಕರೆದುಕೊಂಡು ಹೋಗಲಾಗಿದೆ. ಮೊನ್ನೆತಾನೆ ಕೊರೊನಾ ವಾರಿಯರ್ಸ್‌ ಮೇಲೆ 121ಜನ ಹಲ್ಲೆ ಮಾಡಿದ್ದರು. ಬಳಿಕ ಅವರನ್ನು ಬಂಧಿಸಿ ರಾಮನಗರ ಜೈಲಿನಲ್ಲಿ ಇಡಲಾಗಿತ್ತು. ಆದರೆ ಇಂದು ಪುಂಡರಲ್ಲಿ 5 ಮಂದಿಗೆ ಕೊರೊನಾ ಪಾಸಿಟಿವ್‌ ದೃಢಪಟ್ಟ ಹಿನ್ನೆಲೆಯಲ್ಲಿ 117 ಮಂದಿಯನ್ನು ಬೆಂಗಳೂರಿನ ಹಜ್‌ ಭಮವನಕ್ಕೆ ಭಾರಿ ಪೊಲೀಸ್‌ ಬದೋಬಸ್ತ್‌ನೊಂದಿಗೆ ಸ್ಥಳಾಂತರಿಸಲಾಗಿದೆ.

 

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ