NEWSದೇಶ-ವಿದೇಶ

ಭಾರತದ ಎಫ್‌ಡಿಐ ಮಾನದಂಡ ಮುಕ್ತ ವ್ಯಾಪಾರಕ್ಕೆ ವಿರುದ್ಧ

ಚೀನಾದ ರಾಯಭಾರ ಕಚೇರಿಯ ವಕ್ತಾರ ಜಿ ರಾಂಗ್ ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ವಿದೇಶಿ ನೇರ ಬಂಡವಾಳ ಹೂಡಿಕೆಗಾಗಿ (ಎಫ್‌ಡಿಐ) ಭಾರತ ಮಾಡಿರುವ ಹೊಸ ಮಾನದಂಡಗಳು ವಿಶ್ವ ವ್ಯಾಪಾರ ಸಂಘಟನೆಯ ತಾರತಮ್ಯ ರಹಿತ ತತ್ವಗಳು ಹಾಗೂ ಮುಕ್ತ ವ್ಯಾಪಾರದ ಸಾಮಾನ್ಯ ಪ್ರವೃತ್ತಿಗಳಿಗೆ ವಿರುದ್ಧವಾಗಿವೆ ಎಂದು ಚೀನಾದ ರಾಯಭಾರ ಕಚೇರಿಯ ವಕ್ತಾರ ಜಿ ರಾಂಗ್ ಟೀಕಿಸಿದ್ದಾರೆ.

ಸೋಮವಾರ ಈ ಕುರಿತು ಹೇಳಿಕೆ ನೀಡಿರುವ ಚೀನಾ ಅಧಿಕಾರಿ ನಿರ್ದಿಷ್ಟ ದೇಶಗಳಿಂದ ವಿದೇಶಿ ನೇರ ಹೂಡಿಕೆಗಾಗಿ ಭಾರತ ಹೊಸದಾಗಿ ಪರಿಚಯಿಸಿರುವ ‘ಹೆಚ್ಚುವರಿ ಅಡೆತಡೆಗಳು’ ನೀತಿಗಳು ಮುಕ್ತ, ನ್ಯಾಯ ಸಮ್ಮತ, ತಾರತಮ್ಯ ರಹಿತ, ಪ್ರಾಮಾಣಿಕ ವಾತಾವರಣ ಸೃಷ್ಟಿಸಬೇಕು ಆದರೆ ಇವು ಜಿ-20 ಗುಂಪಿನಿಂದ ಹೊರಬಂದ ಒಮ್ಮತದ ನಿರ್ಣಯಗಳಿಗೂ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

ಕೊರೊನಾ ಸಾಂಕ್ರಾಮಿಕ ರೋಗ ಉಲ್ಬಣದ ನಂತರ  ಭಾರತದೊಂದಿಗೆ ಭೂ ಗಡಿಯನ್ನು ಹಂಚಿಕೊಳ್ಳುವ ದೇಶಗಳಿಂದ ವಿದೇಶಿ ಹೂಡಿಕೆಗಳಿಗೆ ಅನುಮತಿಯನ್ನು ಭಾರತ ಕಳೆದ ವಾರ ಕಡ್ಡಾಯಗೊಳಿಸಿದೆ. ಇದರಿಂದ ಡಬ್ಲ್ಯುಟಿಒ ತತ್ವಗಳು ಉಲ್ಲಂಘನೆಯಾಗಿವೆ ಎಂದು ತಿಳಿಸಿದ್ದಾರೆ.

ನಿರ್ದಿಷ್ಟ ರಾಷ್ಟ್ರಗಳಿಂದ ವಿದೇಶಿ ನೇರ ಹೂಡಿಕೆಗಾಗಿ ಭಾರತ ರೂಪಿಸಿರುವ ಹೆಚ್ಚುವರಿ ಅಡೆತಡೆಗಳು ನೀತಿಯಿಂದಾಗಿ ಉದಾರೀಕರಣ ಮತ್ತು ವ್ಯಾಪಾರ ಮತ್ತು ಹೂಡಿಕೆಯ ಅನುಕೂಲತೆಯ ಸಾಮಾನ್ಯ ಪ್ರವೃತ್ತಿಗೆ ವಿರುದ್ಧವಾಗಿದೆ ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ