NEWSನಮ್ಮರಾಜ್ಯ

ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆಗೆ ನಿರ್ಬಂಧ

ಎಲ್ಲಾ ಮಸೀದಿಗಳಲ್ಲೂ ಶುಕ್ರವಾರ ಸೇರಿದಂತೆ ಪ್ರತಿದಿನದ ಪ್ರಾರ್ಥನೆ ಮಾಡುವಂತಿಲ್ಲ

ವಿಜಯಪಥ ಸಮಗ್ರ ಸುದ್ದಿ

ಮಡಿಕೇರಿ: ವಿಶ್ವದಾದ್ಯಂತ ಹರಡಿರುವ ಕೊವಿಡ್–19 ಕೊರೋನಾ ವೈರಸ್ ಸೋಂಕು ಹರಡುವಿಕೆ ಹಿನ್ನೆಲೆಯಲ್ಲಿ ಮಾರ್ಚ್ 31 ರ ವರೆಗೆ ಜಿಲ್ಲೆಯ ಮಸೀದಿಗಳಲ್ಲಿ ಶುಕ್ರವಾರದ ಪ್ರಾರ್ಥನೆಯನ್ನು ಒಳಗೊಂಡಂತೆ ದೈನಂದಿನ ಸಾಮೂಹಿಕ ನಮಾಜ್ ಪ್ರಾರ್ಥನೆ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾ ವಕ್ಫ್‌ ಸಲಹಾ ಸಮಿತಿ ತಿಳಿಸಿದೆ.

ಸರ್ಕಾರ ಹೊರಡಿಸಿರುವ ನಿರ್ದೇಶನದಂತೆ ಜಿಲ್ಲೆಯ ಎಲ್ಲಾ ಮಸೀದಿಗಳ ಆಡಳಿತ ಸಮಿತಿಗಳು ಎಲ್ಲಾ ಮಸೀದಿಗಳಲ್ಲಿ ಕಡಿಮೆ ಧ್ವನಿಯಲ್ಲಿ ಆಝಾನ್ ನಿರ್ವಹಿಸುವುದು ಹಾಗೂ ಪೇಶ್ ಇಮಾಮ್ ಮತ್ತು ಮೌಝನ್ ಅವರನ್ನು ಹೊರತುಪಡಿಸಿ ಯಾವುದೇ ಸಾರ್ವಜನಿಕರನ್ನು ಮಸೀದಿಯಲ್ಲಿ ಸಾಮೂಹಿಕ ನಮಾಜ್‌ ನಿರ್ವಹಣೆಗೆ ಅವಕಾಶ ನೀಡಬಾರದು ಎಂದು ಜಿಲ್ಲಾ ವಕ್ಫ್ ಮಂಡಳಿ ತಿಳಿಸಿದೆ.

ಜೊತೆಗೆ ಮಾರ್ಚ್ 31 ರ ವರೆಗೆ ಯಾರೂ ಮನೆಯಿಂದ ಹೊರಗೆ ಬರಬಾರದೆಂದು ಹಾಗೂ ಸರ್ಕಾರದ ಮತ್ತು ಜಿಲ್ಲಾಡಳಿತದ ನಿಯಮವನ್ನು ಕಡ್ಡಾಯವಾಗಿ ಪ್ರತಿಯೊಬ್ಬರೂ ಪಾಲಿಸಬೇಕು ಎಂದು ಕೋರಿದ್ದಾರೆ. ಯಾವುದೇ ಮದುವೆ ಸಮಾರಂಭಗಳು ಹಾಗೂ ಇತರ ಧಾರ್ಮಿಕ ಕಾರ್ಯಕ್ರಮಗಳನ್ನು ಮಾರ್ಚ್ 31 ರ ತನಕ ಕಡ್ಡಾಯವಾಗಿ ನಡೆಸುವಂತಿಲ್ಲ ಎಂದು ತಿಳಿಸಿದ್ದಾರೆ.

ಜೊತೆಗೆ ಹೊರ ದೇಶಗಳಿಂದ ಆಗಮಿಸಿದ ಎಲ್ಲಾ ಜನರನ್ನು ಕೂಡಲೇ ತಪಾಸಣೆಗೆ ಒಳಪಡಿಸಿ 14 ದಿನಗಳ ಕಾಲ ಮನೆಯಿಂದ ಹೊರ ಕಳುಹಿಸದಂತೆ ಮನೆಯಲ್ಲೇ ಇರಲು ಸೂಚನೆ ನೀಡಲಾಗಿದೆ. ಇದನ್ನು ಚಾಚು ತಪ್ಪದೆ ಪಾಲಿಸಬೇಕು ಎಂದು ಕೊಡಗಿನ ಎಲ್ಲಾ ಜಮಾಯತ್ತಿನ ಆಡಳಿತ ಮಂಡಳಿಯವರಿಗೆ ಜಿಲ್ಲಾ ವಕ್ಫ್ ಅಧಿಕಾರಿ ನಿರ್ದೇಶನ ನೀಡಿದ್ದಾರೆ.

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ ನಿರಂತರ ಮಳೆ- BBMP ಎಲ್ಲ ಅಧಿಕಾರಿಗಳು ಸನ್ನದ್ಧರಾಗಿ: ತುಷಾರ್ ಗಿರಿನಾಥ್