ಆರೋಗ್ಯ

ಯೋಜನೆ ಅನುಷ್ಠಾನಕ್ಕೆ ಶ್ರಮಿಸಿ: ಸಿಇಒ ಪರಮೇಶ್

ವಿಜಯಪಥ ಸಮಗ್ರ ಸುದ್ದಿ

ಹಾಸನ: ಎಚ್.ಐ.ವಿ. ಪೀಡಿತರು, ಸೋಂಕಿತರು ಮತ್ತು ತೃತೀಯ ಲಿಂಗಿಗಳಿಗೆ ಇರುವ ಯೋಜನೆಗಳನ್ನು ಸಂಬಂಧಿಸಿದ ಇಲಾಖೆಗಳು ಸಮರ್ಪಕವಾಗಿ ಅನುಷ್ಠಾನ ಮಾಡುವಲ್ಲಿ ಶ್ರಮಿಸಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಬಿ.ಎ. ಪರಮೇಶ್   ಸೂಚನೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‍ಷನ್ ಸೊಸೈಟಿ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ಪ್ರತಿಬಂಧಕ ಘಟಕ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿಂದು ನಡೆದ ಜಿಲ್ಲಾ ಮಟ್ಟದ ವಿವಿಧ ಇಲಾಖಾ ಅಧಿಕಾರಿಗಳಿಗೆ ಸಾಮಾಜಿಕ ಸವಲತ್ತುಗಳ ಕುರಿತು ಸಮನ್ವಯ ಸಭೆಯಲ್ಲಿ ಮಾತನಾಡಿದರು.

ಜಿಲ್ಲೆಯಲ್ಲಿರುವ ಎಚ್.ಐ.ವಿ. ಪಾಸಿಟಿವಿ ಇರುವ ಸಮುದಾಯ, ಮಹಿಳಾ  ಲೈಂಗಿಕ ಕಾರ್ಯಕರ್ತೆಯರ ಸಮಿತಿ, ತೃತೀಯ ಲಿಂಗಿಗಳ ಸಮುದಾಯದವರು ಸಭೆಗಳನ್ನು ನಡೆಸಲು ಜಿಲ್ಲಾಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಕಚೇರಿಗಾಗಿ ಕೊಠಡಿ ಸೌಲಭ್ಯ ಕಲ್ಪಿಸುವಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಹಾಗೂ ಜಿಲ್ಲಾ ಶಸ್ತ್ರಚಿಕಿತ್ಸಕರು ಕ್ರಮವಹಿಸಬೇಕೆಂದು ತಿಳಿಸಿದರು.

ಜಿಲ್ಲೆಯಲ್ಲಿರುವ ಎಚ್.ಐ.ವಿ. ಬಾದಿತರು ಮತ್ತು ಸೋಂಕಿತರಿಗೆ, ತೃತೀಯ ಲಿಂಗಿಗಳಿಗೆ ಇರುವ ಯೋಜನೆಗಳ ಬಗ್ಗೆ ಆಯಾ ಸಮುದಾಯದ ಅರ್ಹ ಫಲಾನುಭವಿಗಳಿಗೆ ಮಾಹಿತಿ ನೀಡಿ ಸೌಲಭ್ಯ ಪಡೆಯುವಂತೆ ಅರಿವು ಮೂಡಿಸಿರೆಂದು ಹೇಳಿದರಲ್ಲದೆ, ಫಲಾನುಭವಿಗಳಿರುವ ಪ್ರದೇಶಗಳಲ್ಲೇ ಸ್ಥಳವಿದ್ದರೆ ಅಲ್ಲಿಯೇ ವಸತಿ ಯೋಜನೆಯಡಿ ಸೌಲಭ್ಯ ಕಲ್ಪಿಸಿರೆಂದು ಸಂಬಂಧಿತ ಅಧಿಕಾರಿಗಳಿಗೆ ಜಿಪಂ  ಸಿಇಒ  ಬಿ.ಎ. ಪರಮೇಶ್ ಹೇಳಿದರು.

ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ನಾಗೇಶ್ ಆರಾಧ್ಯ  ಮಾತನಾಡಿ, ಜಿಲ್ಲೆಯಲ್ಲಿ ಸ್ವಯಂ ಸೇವಾ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯ್ತಿಗಳ ಸಹಕಾರದಿಂದ ಇವರೆಗೂ 100 ಹಳ್ಳಿಗಳಲ್ಲಿ 18 ಆರೋಗ್ಯ ತಪಾಸಣಾ ಶಿಬಿರಗಳನ್ನು ನಡೆಸಲಾಗಿದೆ. 2019ರಲ್ಲಿ ಶಿಬಿರಗಳಲ್ಲಿ 1494 ಜನರಲ್ಲಿ ಎಚ್.ಐ.ವಿ., ತಪಾಸಣೆಯನ್ನು ಮಾಡಲಾಗಿದ್ದು, ಕೇವಲ 4 ಎಚ್.ಐ.ವಿ. ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಮಾಹಿತಿ ನೀಡಿದರು.

ಸಾಮಾನ್ಯವಾಗಿ 100 ಜನರಲ್ಲಿ ಎಚ್.ಐ.ವಿ. ತಪಾಸಣೆ ಮಾಡಿದರೆ ಪಾಸಿಟಿವ್ ಇರುವ ಪ್ರಕರಣಗಳು 0.5% ಮತ್ತು ಗರ್ಭಿಣಿ ಮಹಿಳೆಯರಲ್ಲಿ 0.03% ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಜಿಲ್ಲೆಯು ಎಚ್.ಐ.ವಿ. ಪಾಸಿಟಿವ್ ಪ್ರಕರಣಗಳು ಬಹುತೇಕ ಕಡಿಮೆಯಾಗಿವೆ ಎಂದು ಹೇಳಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸತೀಶ್ ಕುಮಾರ್, ಆರ್.ಸಿ.ಎಚ್. ಅಧಿಕಾರಿ ಡಾ. ಕಾಂತರಾಜ್, ಎಚ್.ಆರ್.ಟಿ. ಆರೋಗ್ಯಾಧಿಕಾರಿ ಡಾ. ಪೂರ್ಣಿಮಾ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕರಾದ ಸವಿತ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಪಾಪಬೋವಿ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸ್ವಯಂ ಸೇವಾ ಸಂಸ್ಥೆಯ ಸದಸ್ಯರು  ಇದ್ದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ