NEWSನಮ್ಮರಾಜ್ಯ

ಮೇ 1- ರಾಜ್ಯದಲ್ಲಿ 11 ಹೊಸ ಕೊರೊನಾ ಪಾಸಿಟಿವ್‌ ಪ್ರಕರಣ ಪತ್ತೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಇಂದು ರಾಜ್ಯದಲ್ಲಿ ಹೊಸದಾಗಿ 11 ಕೊರೊನಾ ಪಾಸಿಟಿವ್‌ ಪ್ರಕರಣಗಳು ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 576ಕ್ಕೆ ಏರಿಕೆಯಾಗಿದೆ.  ಇವುಗಳಲ್ಲಿ 22 ಜನರು ಮೃತಪಟ್ಟಿದ್ದು, 223 ಜನರು ರೋಗದಿಂದ ಮುಕ್ತಗೊಂಡು ಮನೆಗೆ ಮರಳಿದ್ದಾರೆ.

ಮಂಡ್ಯ ಜಿಲ್ಲೆಯಲ್ಲಿ ಅತಿ ಹೆಚ್ಚು ಅಂದರೆ 8 ಪ್ರಕರಣಗಳು ಪತ್ತೆಯಾಗಿದ್ದು,  ಮಂಡ್ಯ ನಗರದಲ್ಲಿ ಮೂರು, ಕೆ.ಆರ್‌.ಪೇಟೆಯಲ್ಲಿ ಒಂದು ಮತ್ತು ಮಳವಳ್ಳಿಯಲ್ಲಿ ನಾಲ್ಕು ಪ್ರಕರಣಗಳು ಮತ್ತೆಯಾಗಿದೆ.

ಇನ್ನು ಬೆಳಗಾವಿಯ ರಾಯಭಾಗ್‌ನಲ್ಲಿ ಮೂರು ಹೊಸ ಸೋಂಕಿತರು ಪತ್ತೆಯಾಗಿದ್ದು, ಇಂದು ರಾಜ್ಯದಲ್ಲಿ ಒಟ್ಟಾರೆ 576 ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ 225 ಮಂದಿ ಗುಣಮುಖರಾಗಿದ್ದಾರೆ. ಇನ್ನು 318  ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಇದುವರೆಗೂ 22 ಮಂದಿ ಮೃತಪಟ್ಟಿದ್ದಾರೆ. ಆದರೆ ಮಂಡ್ಯದಲ್ಲಿ ಎಂಟು ಹೊಸ ಪ್ರಕರಣಗಳು ಪತ್ತೆಯಾಗುವ ಮೂಲಕ  ತನ್ನ ರುದ್ರನರ್ತನವನ್ನು ಕೊರೊನಾ ವೈರಸ್‌ ಮುಂದುವರಿಸಿದೆ. ಈ ನಡುವೆ ಮೈಸೂರಿನಲ್ಲಿ ಯಾವುದೇ ಪಾಸಿಟಿವ್‌ ಪ್ರಕರಣ ವರದಿಯಾಗಿಲ್ಲ.

ದೇಶದಲ್ಲಿ 35,043 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 35,043 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 1,154 ಮಂದಿ ಮೃತಪಟ್ಟಿದ್ದಾರೆ. 9,068 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 33,10,039  ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 2,34,143 ಜನರು ಮೃತಪಟ್ಟಿದ್ದಾರೆ. 10,43,245 ಮಂದಿ ರೋಗದಿಂದ ಗುಣಮುಖರಾಗಿದ್ದಾರೆ.

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ ನಿರಂತರ ಮಳೆ- BBMP ಎಲ್ಲ ಅಧಿಕಾರಿಗಳು ಸನ್ನದ್ಧರಾಗಿ: ತುಷಾರ್ ಗಿರಿನಾಥ್