NEWSದೇಶ-ವಿದೇಶ

ರಾಷ್ಟ್ರಪತಿ ಭವನಕ್ಕೂ ನುಗ್ಗಿದ ವಿಶ್ವಮಾರಿ ಕೊರೊನಾ ?

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ರಾಷ್ಟ್ರಪತಿ ಭವನಕ್ಕೂ ಕೊರೊನಾ ಮಹಾಮಾರಿ ದಾಳಿ ಇಟ್ಟಿದ್ದು, ಒಬ್ಬರಲ್ಲಿ ಸೋಂಕು ಪಾಸಿಟಿವ್‌ ಇರುವುದು ತಿಳಿದು ಬಂದಿದೆ.

ಇದರಿಂದ ರಾಷ್ಟ್ರಪತಿ ಭವನದಲ್ಲಿ ಕೆಲಸ ಮಾಡುತ್ತಿದ್ದ 125 ಕುಟುಂಬಗಳನ್ನು ಕ್ವಾರಂಟೈನ್ ಗೆ ಕಳುಹಿಸಲಾಗಿದೆ ಎಂದು ವರದಿಯಾಗಿದೆ.

ರಾಷ್ಟ್ರಪತಿ ಭವನದಲ್ಲಿ ಸ್ವಚ್ಛತೆ ನೌಕರನಾಗಿದ್ದ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿದೆ ಎಂದು ಮೂಲಗಳು ತಿಳಿಸಿವೆ. ಈ ವ್ಯಕ್ತಿಯ ತಾಯಿ ಈ ಹಿಂದೆ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದರು. ಹೀಗಾಗಿ ಅವರ ಮನೆಯನ್ನು ಕಳೆದ ಶನಿವಾರದಿಂದ ಸೀಲ್ ಮಾಡಲಾಗಿದ್ದು, ಇಡೀ ಕುಟುಂಬವನ್ನು ಕ್ವಾರಂಟೈನ್ ನಲ್ಲಿಡಲಾಗಿದೆ.

ಅದೇ ದಿನ ಆ ಸಿಬ್ಬಂದಿಯ ಅಕ್ಕಪಕ್ಕದ 30 ಮನೆಗಳ ನಿವಾಸಿಗಳನ್ನು ತೀವ್ರ ಕ್ವಾರಂಟೈನ್ ನಲ್ಲಿರಿಸಿ ಸರ್ಕಾರದಿಂದಲೇ ಆಹಾರ ಪೂರೈಸಲಾಗುತ್ತಿದೆ. ಇತ್ತೀಚಿನ ಬೆಳವಣಿಗೆಯ ನಂತರ ಮತ್ತೆ 95 ಕುಟುಂಬಗಳನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿದ್ದು, ಯಾರೊಬ್ಬರನ್ನೂ ಮನೆಯಿಂದ ಹೊರಬರದಂತೆ ಕಟ್ಟು ನಿಟ್ಟಿನ ಸೂಚನೆ ನೀಡಲಾಗಿದೆ.

ನೌಕರನ ಮನೆಯ ಅಕ್ಕಪಕ್ಕದಲ್ಲಿರುವ ನಿವಾಸಿಗಳಷ್ಟೇ ಅಲ್ಲದೇ ರಾಷ್ಟ್ರಪತಿ ಭವನದಲ್ಲಿರುವ 125 ಕುಟುಂಬಗಳ ಸುಮಾರು 500 ಮಂದಿಯೂ ಕೂಡ ಈಗ ಸ್ವ ನಿರ್ಬಂಧದಲ್ಲಿದ್ದಾರೆ. ಆದರೆ ಈ ಕುರಿತು ರಾಷ್ಟ್ರಪತಿ ಭವನದಿಂದ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ.

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ ನಿರಂತರ ಮಳೆ- BBMP ಎಲ್ಲ ಅಧಿಕಾರಿಗಳು ಸನ್ನದ್ಧರಾಗಿ: ತುಷಾರ್ ಗಿರಿನಾಥ್