NEWSನಮ್ಮಜಿಲ್ಲೆ

ರೇಷ್ಮೆ ಗೂಡಿನ ಮಾರುಕಟ್ಟೆ ವ್ಯಾಪಾರ ವಹಿವಾಟು ಇಂದಿನಿಂದ ಬಂದ್‌

ಮುಂದಿನ ಆದೇಶದ ವರೆಗೂ ಮಾರುಕಟ್ಟೆ ತೆರೆಯದಂತೆ ರಾಮನಗರ ಡಿಸಿ ಎಚ್ಚರಿಕೆ

ವಿಜಯಪಥ ಸಮಗ್ರ ಸುದ್ದಿ

ರಾಮನಗರ: ಮಾ.25ರಿಂದ ಮುಂದಿನ ಆದೇಶದ ವರೆಗೆ ಸರ್ಕಾರಿ ರೇಷ್ಮೆಗೂಡಿನ ಮಾರುಕಟ್ಟೆ, ರಾಮನಗರ, ಕನಕಪುರ ಮತ್ತು ಚನ್ನಪಟ್ಟಣ ತಾಲೂಕುಗಳಲ್ಲಿ ವ್ಯಾಪಾರ ವಹಿವಾಟುಗಳನ್ನು ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ  ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಅಧ್ಯಕ್ಷೆ ಎಂ.ಎಸ್. ಅರ್ಚನಾ  ಆದೇಶ ಹೊರಡಿಸಿದ್ದಾರೆ.

ರಾಮಗನರ ಸರ್ಕಾರಿ ರೇಷ್ಮೆಗೂಡಿನ ಮಾರುಕಟ್ಟೆಗೆ ಪ್ರತಿದಿನ 2000 ರಿಂದ 3000 ಜನರು ಗೂಡಿನ ಮಾರಾಟಕ್ಕಾಗಿ ಮತ್ತು ಗೂಡು ಖರೀದಿಗಾಗಿ ಜನರು ಆಗಮಿಸುತ್ತಿದ್ದಾರೆ. ಕೊರೊನಾ ವೈರಸ್ ಹರಡದಂತೆ ಮುಂಜಾಗೃತ ಕ್ರಮವಾಗಿ ಮಾರುಕಟ್ಟೆ ಒಳ ಹಾಗೂ ಹೊರ ಆವರಣವನ್ನು ಬ್ಲೀಚಿಂಗ್ ಪೌಡರ್ ದೋಳಿಕರಿಸಿ, ಸ್ವಚ್ಛತೆಯನ್ನು ಕಾಪಾಡಲಾಗುತ್ತಿದೆ ಎಂದರು.

ಪ್ರತಿ ಎರಡು ದಿನಗಳಿಗೊಮ್ಮೆ ಪ್ರತಿ ಘಟಕವನ್ನು ಸ್ವಚ್ಛಗೊಳಿಸಿ ಸೋಂಕು ನಿವಾರಕದಿಂದ ಸೋಂಕು ನಿವಾರಣೆ ಮಾಡಲಾಗುತ್ತಿದೆ. ಈ ಮಾರುಕಟ್ಟೆಗೆ ರೇಷ್ಮೆಗೂಡಿನ ವಹಿವಾಟಿಗಾಗಿ ಬರುವರೈತರು ಹಾಗೂ ರೀಲರ್‌ಗಳಿಗೆ ಸೋಂಕಿನ ಬಗ್ಗೆ ಜಾಗೃತಿ ಮೂಡಿಸುತ್ತಿದ್ದರೂ ಸಹ ನಿರ್ಲಕ್ಷ್ಯ ವನ್ನು ತೋರುತ್ತಿರುವುದು ಗಮನಿಸಲಾಗಿದೆ ಎಂದು ತಿಳಿಸಿದ್ದಾರೆ.

ಸೋಂಕು ಪೀಡಿತ ಜಿಲ್ಲೆಗಳಿಂದ ರೈತರು ಗೂಡು ತರುತ್ತಿರುತ್ತಾರೆ. ಇಂತವರು ಮಾರುಕಟ್ಟೆ ಗೂಡಿನ ವಹಿವಾಟಿಗಾಗಿ ಆಗಮಿಸುತ್ತಿರುವುದರಿಂದ ಸೋಂಕು ಹರಡುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಮಾರುಕಟ್ಟೆಯ ಗೂಡಿನ ವಹಿವಾಟನ್ನು ತಾತ್ಕಾಲಿಕವಾಗಿ ಸ್ಥಳಿತಗೊಳಿಸಲಾಗಿದೆ ಅವರು ಆದೇಶದಲ್ಲಿ ತಿಳಿಸಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ