CrimeNEWSನಮ್ಮರಾಜ್ಯ

ಲೈಂಗಿಕ ಕಿರುಕುಳ ನೀಡಿ ಓಡುತ್ತಿದ್ದವನ ಸಿನಿಮೀಯ ರೀತಿಯಲ್ಲಿ ಹಿಡಿದ ಯುವತಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:ತರಕಾರಿ ತರಲು ಮನೆಯಿಂದ ಹೊರ ಬಂದ ಯುವತಿಗೆ ಲೈಂಗಿಕ ಕಿರುಕುಳ ನೀಡಿ ಓಡಿಹೋಗುತ್ತಿದ್ದ ಕಾಮುಕನ ಬೆನ್ನಟ್ಟಿ ಸಿನಿಮೀಯ ರೀತಿಯಲ್ಲಿ ಹಿಡಿದ ಯುವತಿ ಪೊಲೀಸರಿಗೆ ಒಪ್ಪಿಸಿದ್ದು ಸದ್ಯ ಆತ ಈಗ ಕಂಬಿ ಎಣಿಸುತ್ತಿದ್ದಾನೆ.

ನಡೆದ ಘಟನೆ: ಏಪ್ರಿಲ್‌ 25ರಂದು ತರಕಾರಿ ತರುವ ಸಲುವಾಗಿ ಮನೆಯಿಂದ ಹೊರ ಬರುತ್ತಿದ್ದ ಯುವತಿಯನ್ನು ಹಿಂಬಾಲಿಸಿಕೊಂಡು ಬಂದ ಕಾಮುಕ ಆಕೆಗೆ ಲೈಂಗಿಕ ಕಿರುಕುಳ ನೀಡಿ ಓಡಿಹೋಗುತ್ತಿದ್ದ ಆದರೆ ಆತನನನ್ನು ಯುವತಿ ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

25 ವರ್ಷದ ಯುವತಿ ತರಕಾರಿ ತರಲು ಮನೆಯಿಂದ ಒಂಟಿಯಾಗಿ ಹೋಗುತ್ತಿದ್ದರು. ಆಗ ಆರೋಪಿ ಯುವಕ ಯುವತಿಯ ಬಳಿ ಬಂದು ಗುಪ್ತಾಂಗ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಈವೇಳೆ ರಕ್ಷಣೆ ಗಾಗಿ ಆಕೆ ಕೂಗಾಡಿದ್ದಾರೆ. ಅಷ್ಟರಲ್ಲಿ ಜನ ಕೇಳಿಸಿಕೊಂಡು ಸಹಾಯಕ್ಕೆ ಧಾವಿಸುತ್ತಿದ್ದನ್ನು ತಿಳಿದ ಆರೋಪಿ ಓಡಿಹೋಗಲು ಶುರುಮಾಡಿದ್ದಾನೆ. ಈ ವೇಳೆ ಆಕೆಯಿಂದ ಬಿಡಿಸಿಕೊಳ್ಳಲು ಆಕೆಯ ಕೈಯನ್ನು ಕಚ್ಚಿಬಿಡಿಸಿಕೊಂಡು ಓಡಿದ್ದಾನೆ. ಆದರೂ ಆತನ ಬೆನ್ನಟ್ಟಿದ ಯುವತಿ ತಾನೇ ಆರೋಪಿಯನ್ನು ಹಿಡಿದುಕೊಂಡು ಮುಖ್ಯರಸ್ತೆಗೆ ಎಳೆದು ತಂದಿದ್ದಾರೆ. ಅಷ್ಟರಲ್ಲೇ ಸ್ಥಳೀಯರು ರಕ್ಷಣೆಗೆ ಬಂದಿದ್ದಾರೆ. ನಂತರ ಸ್ಥಳೀಯರು ಆತನನ್ನು ಥಳಿಸಿದ್ದರು ಎಂದು ಪೊಲೀಸರು ತಿಳಿಸಿದರು.

ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಕಾಟನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಕಾಟನ್‌ ಪೇಟೆಯ ಸಿದ್ದಾರ್ಥ ನಗರದ ನಿವಾಸಿ ಮುಹಮ್ಮದ್ ಫಯಾಝ್ (21) ಬಂಧಿತ ಆರೋಪಿಯಾಗಿದ್ದಾನೆ.

ಈತ ಪ್ಲಂಬರ್ ಕೆಲಸ ಮಾಡುತ್ತಿದ್ದ, ಅಲ್ಲದೇ ಸರ ಕಳವು ಪ್ರಕರಣದಲ್ಲೂ ಭಾಗಿಯಾಗಿದ್ದ. ಈತನ ವಿರುದ್ಧ ಕೆಂಗೇರಿ ಸೇರಿ ಹಲವು ಠಾಣೆಗಳಲ್ಲಿ ಹಲವು ಕಳವು ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ