NEWSನಮ್ಮರಾಜ್ಯ

ವರುಣನ ಆರ್ಭಟಕ್ಕೆ ನಲುಗಿದ ರಾಜಧಾನಿ

ರಾಜ್ಯದ ಹಲವೆಡೆ ಪೂರ್ವ ಮುಂಗಾರಿನ ನರ್ತನ l  ಜನಜೀವನ ಅಸ್ತವ್ಯಸ್ತ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜಧಾನಿ ಸೇರಿದಂತೆ ರಾಜ್ಯದ ಹಲವು ಕಡೆ ಭಾರಿ ಮಳೆ ಸುರಿಯುತ್ತಿರುವ ಪರಿಣಾಮ ರಸ್ತೆ ಕುಸಿತ ಮನೆಗೆ ನೀರು ನುಗಿರುವುದು ಸೇರಿ ಹಲವು ಅವಂತರಗಳು ಸೃಷ್ಟಿಯಾಗಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ.

ಪೂರ್ವ ಮುಂಗಾರಿನಲ್ಲಿ ಅಬ್ಬರಿಸುತ್ತಿರುವ ವರುಣನ ಆರ್ಭಟಕ್ಕೆ ಬೆಂಗಳೂರಿನ ಕೋರಮಂಗಲ, ಕೊಟ್ಟಿಗೆಪಾಳ್ಯ, ಸುಂಕನಕಟ್ಟೆ, ಮಲ್ಲೇಶ್ವರಂ ಸೇರಿ ಹಲವೆಡೆ ಮನೆಗಳಿಗೆ ನೀರು ನುಗ್ಗಿದ್ದು, ಮರಗಳು ಧರೆಗುರುಳಿವೆ.

ಇನ್ನು ಹಲವೆಡೆ ಕಾರುಗಳು ಮುಳುಗಡೆಯಾಗಿರುವ ವರದಿಯೂ ಆಗಿದೆ. ಮಲ್ಲೇಶ್ವರಂನ 8ನೇ ಕ್ರಾಸ್‌ನಲ್ಲಿ ಮರವೊಂದು ಬಿದ್ದಿದ್ದು, ಇದರಿಂದ ನಾಲ್ಕು ಕಾರುಗಳು ಜಖಂಗೊಂಡಿವೆ. ಇನ್ನು ಪಟ್ಟೇಗಾರನ ಪಾಳ್ಯದಲ್ಲಿ ರಸ್ತೆ ಕುಸಿದಿದ್ದು, ಸಂಚಾರಕ್ಕೆ ತೊಂದರೆಯಾಗಿದೆ.

ರಾಜಕಾಲುವೆ ಮೂಲಕ ಬಂದ ಮಳೆನೀರು ಮನೆಗಳಿಗೆ ನುಗ್ಗಿರುವ ಪರಿಣಾಮ ಬೆಂಗಳೂರಿನ ಹೊಂಗಸಂದ್ರ ಸೇರಿ ತಗ್ಗು ಪ್ರದೇಶದ ಮನೆಗಳಲ್ಲಿ ವಾಸುತ್ತಿರುವ  ಜನರು ಭಾರಿ ತೊಂದರೆ ಅನುಭವಿಸುವಂತಾಗಿದೆ.

ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಬೇರೆ ಮನೆಯವರು ಸಹಾಯಕ್ಕೆ ಬಾರದಿರುವುದರಿಂದ ಬೆಂಗಳೂರಿನ ಹಲವು ತಗ್ಗು ಪ್ರದೇಶದ ನಿವಾಸಿಗಳು ಯಾತನೆಪಡುವಂತಾಗಿದೆ.

ಹೀಗೆಯೇ ಮಳೆ ತನ್ನ ಆರ್ಭಟವನ್ನು ಮುಂದುವರಿಸಿದ್ದೇ ಆದಲ್ಲಿ ಕೊರೊನಾ ತನ್ನ ಅಟ್ಟಹಾಸವನ್ನು ನಾಗಲೋಟದಲ್ಲಿ ಮುಂದುವರಿಸಲಿದ್ದು, ಲಕ್ಷಾಂತರ ಭಾರತೀಯರು ಈ ಯಮಸ್ವವರೂಪಿ ಕೋವಿಡ್‌-19ಗೆ ಬಲಿಯಾಗಲಿದ್ದಾರೆ ಎಂದು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ.

ಇನ್ನು ಮೈಸೂರಿನ ಹಲವೆಡೆ ಭಾರಿ ಮಳೆಯಾಗಿದ್ದು, ಅಲ್ಲಲ್ಲಿ ಹಾನಿಯಾಗಿದೆ. ಅಲ್ಲದೇ ಕೆಲವೆಡೆ ಬಿದ್ದ ಧಾರಾಕಾರ ಮಳೆಗೆ ಹಲವು ಅವಂತರಗಳು ಉಂಟಾಗಿದ್ದು, ಜನರು ಮನೆಯಿಂದ ಹೊರಬರಲು ಹೆದರುವಂತಾಗಿದೆ. ಕರಾವಳಿ ಮತ್ತು ಮಲೆನಾಡಿನ ಹಲವೆಡೆ ಭಾರಿ ಮಳೆಯಾಗಿದ್ದು, ಮರಗಳು ಧರೆಗಳಿವೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ