NEWSವಿಜ್ಞಾನ

ವಿಶೇಷ ಮಕ್ಕಳ ಹಾರೈಕೆಯಲ್ಲಿ ಕಾಳಜಿ ವಹಿಸಿ : ಡಾ.ಎಂ.ಪುಷ್ಪಾವತಿ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಆಯೋಜಿಸಿದ್ದ ಫೇಸ್‌ಬುಕ್ ಪೇಜ್ ಲೈವ್‌ನಲ್ಲಿ ಸಲಹೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ ನಿಷೇಧಾಜ್ಞೆ ಜಾರಿಮಾಡಲಾಗಿದ್ದು, ಈ 21 ದಿನಗಳಲ್ಲಿ ವಿಶೇಷ ಮಕ್ಕಳನ್ನು ನಿಭಾಯಿಸಲು ಪೋಷಕರು ಸಹಕರಿಸಬೇಕೆಂದು ಮೈಸೂರಿನ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯ ನಿರ್ದೇಶಕಿ ಡಾ.ಎಂ.ಪುಷ್ಪಾವತಿ ತಿಳಿಸಿದ್ದಾರೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಆಯೋಜಿಸಿದ್ದ ಫೇಸ್‌ಬುಕ್ ಪೇಜ್ ಲೈವ್‌ನಲ್ಲಿ ಮಾತನಾಡಿದ ಅವರು, ಮನೆಯಲ್ಲಿಯೇ ವಿಶೇಷ ಮಕ್ಕಳ ಹಾರೈಕೆಯನ್ನು ಪೋಷಕರು ಜವಾಬ್ದಾರಿಯುತವಾಗಿ ಮಾಡಬೇಕು ಎಂದು ಸಲಹೆ ನೀಡಿದರು.

ದೇಶಾದ್ಯಂತ ನಿಷೇಧಾಜ್ಞೆ ಜಾರಿಮಾಡಿರುವ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ಮನೆಯಲ್ಲೇ ಇರುವುದು ಅನಿವಾರ್ಯವಾಗಿದೆ. ಈ ಸಮಯದಲ್ಲಿ ವಿಶೇಷ ಮಕ್ಕಳನ್ನು ಮನೆಯಲ್ಲಿ ನಿಭಾಯಿಸುವುದು ಪೋಷಕರ ಕರ್ತವ್ಯ. ಮನೆಯಲ್ಲಿನ ಎಲ್ಲಾ ಸದಸ್ಯರು ವಿಶೇಷ ಮಗುವಿನೊಂದಿಗೆ ಕಾಲ ಕಳೆಯುವುದು ಮುಖ್ಯ ಎಂದರು.

ಮಕ್ಕಳಿಗೆ ಭಾಷೆಯ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಮನೆಯಲ್ಲಿನ ಕೆಲವು ವಸ್ತುಗಳನ್ನು ಉಪಯೋಗಿಸಿಕೊಳ್ಳಬೇಕು. ಟೂತ್‌ಬ್ರಶ್‌ಗೆ ಪೇಸ್ಟ್ ಹಾಕುವುದರಿಂದ ಹಿಡಿದು ರಾತ್ರಿ ಮಲಗುವಾಗ ಮಾಡಬೇಕಾದ ಸಣ್ಣಪುಟ್ಟ ಕೆಲಸಗಳನ್ನು ನಿಧಾನವಾಗಿ ಹೇಳಿಕೊಡುವುದು ಅಗತ್ಯವಾಗಿರುತ್ತದೆ. ಪ್ರತಿಯೊಂದು ವಿಷಯವನ್ನು ಸ್ಪಷ್ಟವಾಗಿ ನಿಧಾನವಾಗಿ ಮಗುವಿಗೆ ಅರ್ಥಮಾಡಿಸಲು ಮನೆಯ ಸದಸ್ಯರು ಸಹಕರಿಸಿಬೇಕು ಎಂದು ಹೇಳಿದರು.

ಮಕ್ಕಳಿಗೆ ಕೇವಲ ಮೊಬೈಲ್ ಅಥವಾ ಟಿ.ವಿ ಮುಂದೆ ಕೂರಿಸುವುದು ಸೂಕ್ತವಲ್ಲ. ಬದಲಿಗೆ ಅವರಿಗೆ ಭೌದ್ಧಿಕ ಬೆಳವಣಿಗೆ ಆಗುವಂತಹ ಚಟುವಟಿಕೆಗಳಲ್ಲಿ ತೊಡಗಿಸಬೇಕು. ಎಲ್ಲವನ್ನು ತಾಳ್ಮೆಯಿಂದ ಅರ್ಥಮಾಡಿಸುವ ಪ್ರಯತ್ನ ಮಾಡಬೇಕು. ಮನೆಯಲ್ಲಿರುವ ವಸ್ತುಗಳನ್ನು ಬಳಸಿ ಆಟಿಕೆಯಾಗಿ ನೀಡಿ ಅದಕ್ಕೆ ವಿನೂತನ ರೂಪ ನೀಡುವಂತೆ ಹೇಳಬೇಕು. ಇದರಿಂದ ಅವರ ಮೆದುಳು ಚುರುಕುಗೊಳ್ಳುತ್ತದೆ ಎಂದು ಸಲಹೆ ನೀಡಿದರು.

ಎಲ್ಲರಿಗೂ ರಜೆ ಇರುವ ಹಿನ್ನೆಲೆ ಸದಸ್ಯರೆಲ್ಲಾ ಮನೆಯಲ್ಲಿಯೇ ಇರುವುದರಿಂದ ತಾಯಿಗೆ ಅಡಿಗೆ, ಮನೆ ಕೆಲಸ ಹೀಗೆ ಹಲವು ಕೆಲಸಗಳು ಇರುತ್ತದೆ. ಇದರ ಮಧ್ಯೆ ತನ್ನ ಮಗುವನ್ನು ನಿಗಾ ವಹಿಸಿ ನೋಡಿಕೊಳ್ಳುವುದು ಕಷ್ಟವಾಗಿರುತ್ತದೆ. ಹೀಗಾಗಿ  ವಿಶೇಷ ಮಗುವನ್ನು ನಿಭಾಯಿಸುವುದರಲ್ಲಿ ತಂದೆ ಪಾತ್ರ ಅತೀ ಮುಖ್ಯವಾಗಿರುತ್ತದೆ. ಸಾಕಷ್ಟು ಸಮಯ ಇರುವುದರಿಂದ ತಂದೆಯೇ ಮಗುವಿನೊಂದಿಗೆ ಸದಾಕಾಲ ಇದ್ದು, ಪ್ರತಿಯೊಂದು ವಸ್ತು ಅಥವಾ ದಿನನಿತ್ಯದ ಸಣ್ಣಸಣ್ಣ ಕೆಲಸವನ್ನು ಆಗಾಗ್ಗೆ ಹೇಳುತ್ತಾ ಪ್ರಾಯೋಗಿಕವಾಗಿ ಕಲಿಸುವಂತೆ ಹೇಳಿದರು.

ಒಂದುವೇಳೆ ವಿಶೇಷ ಮಕ್ಕಳನ್ನು ನಿಭಾಯಿಸುವಲ್ಲಿ ಕಷ್ಟವಾಗುತ್ತಿದ್ದಲ್ಲಿ ವ್ಯಾಟ್ಸ್ಆಪ್ ಮೂಲಕ ಸಂಪರ್ಕಿಸಿ ಸಲಹೆ ಪಡೆಯಿರಿ. ಯಾವ ರೀತಿಯಲ್ಲಿ ಮಕ್ಕಳನ್ನು ಸಮಾಧಾನ ಪಡಿಸಬಹುದೆಂದು ಕೆಲವು ಮಾಹಿತಿಯನ್ನು ವಿವರವಾಗಿ ನೀಡುವುದಾಗಿ ತಿಳಿಸಿದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ