NEWSಸಂಸ್ಕೃತಿ

ಸಂಕಷ್ಟದಲ್ಲಿರುವ ಕಲಾವಿದರು, ಸಾಹಿತಿಗಳಿಗೆ ಆರ್ಥಿಕ ಸಹಾಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪ್ರಸ್ತುತ ಕೋವಿಡ್ 19 ಕೊರೋನಾ ರೋಗಾಣುವಿನಿಂದ ಇಡೀ ರಾಜ್ಯ ಲಾಕ್‍ಡೌನ್ ಆಗಿದ್ದು ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರು, ಸಾಹಿತಿಗಳಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆರ್ಥಿಕ ಸಹಾಯ ಮಾಡಲು ನಿರ್ಧರಿಸಿದೆ.

ಆರ್ಥಿಕವಾಗಿ ಸಂಕಷ್ಟದಲ್ಲಿರುವ ಎಲ್ಲಾ ಕಲಾ ಪ್ರಕಾರದ ಕಲಾವಿದರು, ಸಾಹಿತಿಗಳು ಅರ್ಜಿ ಸಲ್ಲಿಸಬಹುದಾಗಿದೆ.  ವೃತ್ತಿನಿರತ ಕಲಾವಿದರಾಗಿದ್ದು ಕನಿಷ್ಠ 10 ವರ್ಷ ಕಲಾಸೇವೆ ಮಾಡಿರಬೇಕು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಮಾಸಾಶನ ಪಡೆಯುತ್ತಿರಬಾರದು ಮತ್ತು ಯಾವುದೇ ಸರ್ಕಾರಿ ನೌಕರರಾಗಿರಬಾರದು (ರಾಜ್ಯ, ಕೇಂದ್ರ, ನಿಗಮ ಮಂಡಳಿ, ಸರ್ಕಾರಿ ಅನುದಾನಿತ ಸಂಸ್ಥೆಗಳು ಮತ್ತು ಅರೆ ಸರ್ಕಾರಿ ಸಂಸ್ಥೆಗಳು). ಈ ವ್ಯಾಪ್ತಿಗೆ ಒಳಪಡುವ ಕಲಾವಿದರು, ಸಾಹಿತಿಗಳು ತಮ್ಮ ಹೆಸರು ವಿಳಾಸ, ಕಲಾಪ್ರಕಾರ, ಆಧಾರ್ ಸಂಖ್ಯೆ, ದೂರವಾಣಿ ಸಂಖ್ಯೆ ಮತ್ತು ಬ್ಯಾಂಕ್ ಖಾತೆ (ಬ್ಯಾಂಕ್ ಪುಸ್ತಕದ ಜೆರಾಕ್ಸ್ ಪ್ರತಿ ಲಗತ್ತಿಸಿ).

ವಿವರಗಳನ್ನೊಳಗೊಂಡ ಅರ್ಜಿಯನ್ನು ಬಿಳಿಹಾಳೆಯ ಮೇಲೆ ಸ್ವವಿವರದೊಂದಿಗೆ ಸಂಬಂಧಪಟ್ಟ ಜಿಲ್ಲಾ ಸಹಾಯಕ ನಿರ್ದೇಶಕರು, ಅಕಾಡೆಮಿ, ಪ್ರಾಧಿಕಾರಗಳ ರಿಜಿಸ್ಟ್ರಾರ್‌ಗಳಿಗೆ  ಇಮೇಲ್ ವ್ಯಾಟ್ಸ್‌ ಆಪ್ ಹಾಗೂ ಖುದ್ದಾಗಿ ಅರ್ಜಿಯನ್ನು ದಿನಾಂಕ 27-04-2020 ರ ಒಳಗಾಗಿ ಸಲ್ಲಿಸಲು ತಿಳಿಸಲಾಗಿದೆ.

ಇದನ್ನೂ ಓದಿರಿ ರಂಗಭೂಮಿ ಸೇರಿ ಕಲೆಗಾಗಿ ಶ್ರಮಿಸುತ್ತಿರುವವರ ಸಂಕಷ್ಟ ನೀಗಿಸಿ

ಹೆಚ್ಚಿನ ವಿವರಕ್ಕಾಗಿ ಆಯಾ ಜಿಲ್ಲಾ ಸಹಾಯಕ ನಿರ್ದೇಶಕರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಅಕಾಡೆಮಿ, ಪ್ರಾಧಿಕಾರಗಳ ರಿಜಿಸ್ಟ್ರಾರ್ ಇವರನ್ನು ಸಂಪರ್ಕಿಸಲು ತಿಳಿಸಿದೆ.

1 Comment

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ ನಿರಂತರ ಮಳೆ- BBMP ಎಲ್ಲ ಅಧಿಕಾರಿಗಳು ಸನ್ನದ್ಧರಾಗಿ: ತುಷಾರ್ ಗಿರಿನಾಥ್