NEWSನಮ್ಮರಾಜ್ಯ

ಸರ್ಕಾರಿ ನೌಕರರ ಮಾರ್ಚ್‌ ಮಾಸದ ವೇತನದಲ್ಲಿ ಕಡಿತವಿಲ್ಲ?

ಅಧಿಕಾರಿಗಳ ಸಂಬಳದಲ್ಲೂ ಯಾವುದೇ ತಡೆಯಿಲ್ಲ ಎಂದು ಹೇಳಲಾಗಿದೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ ವೈರಸ್‌ ಸಮಸ್ಯೆಯಿಂದ ಉಂಟಾಗಿರುವ ಆರ್ಥಿಕ ನಷ್ಟವನ್ನು ಸರಿದೂಗಿಸಿಕೊಳ್ಳಲು ಸರ್ಕಾರಿ ನೌಕರರು ಹಾಗೂ ಅಧಿಕಾರಿಗಳ ವೇತನದಲ್ಲಿ ಯಾವುದೇ ಕಡಿತಗೊಳಿಸದಿರಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಹಲವು ರಾಜ್ಯಗಳ ಸರ್ಕಾರಗಳು ಈಗಾಗಲೇ ತಮ್ಮ ನೌಕರರು ಹಾಗೂ ಅಧಿಕಾರಿಗಳ ಸಂಬಳ ಕಟ್ ಮಾಡಿ ಆದೇಶ ಹೊರಡಿಸಿವೆ. ಆದರೂ ರಾಜ್ಯ ಸರ್ಕಾರ ಅಂತಹ ಚಿಂತನೆ ಮಾಡಿಲ್ಲ ಎಂದು ಹೇಳಲಾಗಿದೆ.

ಲಾಕ್‌ಡೌನ್‌ ವಿಸ್ತರಣೆ ಆಗದೇ ನಿಗದಿತ ದಿನದಂದೇ ಕೊನೆಗೊಂಡರೇ ಏನೂ ತೊಂದರೆ ಇಲ್ಲ. ವಿಸ್ತರಣೆ ಆದಲ್ಲಿ ಸಂಬಳ ಕಡಿತದ ಬಗ್ಗೆ ಯೋಚನೆ ಮಾಡಬೇಕಾಗುತ್ತದೆ ಎಂಬ ಆಲೋಚನಯಲ್ಲೂ ಮುಳುಗಿದೆ ಎನ್ನಲಾಗಿದೆ. ಆದರೆ, ಮುಂದಿನ ಪರಿಸ್ಥಿತಿಯನ್ನು ಅರಿತು ಎಚ್ಚರಿಕೆ ಹೆಜ್ಜೆ ಹಾಕಲು ತೀರ್ಮಾನಿಸಿದೆ.

ಏನೆ ಆದರೂ ಸದ್ಯದ ಈ ಮಟ್ಟಿಗಂತು ನೌಕರರ ಜೇಬಿಗೆ ಕತ್ತರಿ ಹಾಕುವಂತಹ ಯಾವುದೇ ಪ್ರಸ್ತಾಪ ಇಲ್ಲ ಎಂದು ಹಣಕಾಸು ಇಲಾಖೆ ಮೂಲಗಳು ಸ್ಪಷ್ಟಪಡಿಸಿವೆ ಎಂದು ಹೇಳಲಾಗಿದೆ.

ಈಗಾಗಲೇ ತೆಲಂಗಾಣ, ಆಂಧ್ರ ಪ್ರದೇಶ, ಮಹಾರಾಷ್ಟ್ರ, ಒಡಿಶಾ, ರಾಜಾಸ್ಥಾನಗಳಲ್ಲಿ ಕೊರೋನಾ ತಂದಿರುವ ಆರ್ಥಿಕ ಸಂಕಷ್ಟದಿಂದ ಪಾರಾಗಲು ತಮ್ಮ ನೌಕರರು ಮತ್ತು ಅಧಿಕಾರಿಗಳ ಜೇಬಿಗೆ ಭಾರಿ ಕೈಯನ್ನೇ ಹಾಕಿವೆ. ಮುಖ್ಯಮಂತ್ರಿಯಾದಿಯಾಗಿ ಎಲ್ಲ ಜನ ಪ್ರತಿನಿಧಿಗಳು ಆಡಳಿತ ಸೇವೆಯ ವಿವಿಧ ಇಲಾಖೆಯ ಅಧಿಕಾರಿಗಳು, ಎ,ಬಿ,ಸಿ ದರ್ಜೆ ನೌಕರರ ವೇತನವನ್ನು ಕಡಿತಗೊಳಿಸಿ ಆದೇಶ ಜಾರಿ ಮಾಡಲಾಗಿದೆ. ಆದರೆ ಕರ್ನಾಟಕದಲ್ಲಿ ಅಂಥ ಯಾವುದೇ ಸ್ಥಿತಿ ಬಂದಿಲ್ಲ ಎಂದು ಹೇಳಲಾಗುತ್ತಿದೆ.

 

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ