NEWSನಮ್ಮಜಿಲ್ಲೆ

ಸಾಲ ವಸೂಲಿಗೆ ಒತ್ತಡ ಹೇರಿದರೆ ಕಠಿಣ ಕ್ರಮ

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಎಚ್ಚರಿಕೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಖಾಸಗಿ ಬ್ಯಾಂಕುಗಳು ಹಾಗೂ ಲೇವಾದೇವಿದಾರರು ನೀಡಿರುವ ಸಾಲವನ್ನು ಮರುಪಾವತಿ ಮಾಡುವಂತೆ ಒತ್ತಾಯಿಸಿದರೆ ಸರ್ಕಾರದ ಗಮನಕ್ಕೆ ತರಬೇಕೆಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.

ತಿ.ನರಸೀಪುರ ತಾಲೂಕಿನಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಮೂರು ತಿಂಗಳ ವರೆಗೆ ಸಾಲವನ್ನು ಯಾರೂ ಮರುಪಾವತಿಸುವಂತೆ ಒತ್ತಾಯಿಸಬಾರದೆಂದು ಸರ್ಕಾರ ಆದೇಶಿಸಿದೆ. ಈ ನಿಟ್ಟಿನಲ್ಲಿ ಸರ್ಕಾರದ ಆದೇಶ ಉಲ್ಲಂಘಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ರೈತರು ಸಹಕಾರ ಬ್ಯಾಂಕುಗಳಲ್ಲಿ ಪಡೆದಿರುವ ಸಾಲವನ್ನು ಮನ್ನಮಾಡಲಾಗಿದೆ. ಇನ್ನೂ ಕೆಲವು ರೈತರ ಸಾಲ ಮನ್ನ ಆಗಬೇಕಿದೆ. ಆದಾಯ ತೆರೆಗೆ ಪಾವತಿಸುವ ರೈತರ ಸಾಲವನ್ನು ಮನ್ನ ಮಾಡಿಲ್ಲ ಎಂದು ಹೇಳಿದರು.

ಲಾಕ್‍ಡೌನ್ ಕ್ರಮದಿಂದಾಗಿ ತಾಲ್ಲೂಕು ಗಡಿಭಾಗಗಳಲ್ಲಿ ವಾಸಿಸುವ ರೈತರು ಕೃಷಿಕಾರ್ಯಕ್ಕಾಗಿ ತೋಟದ ಬಳಿ ತೆರಳಲು ಸಮಸ್ಯೆ ಉಂಟಾಗಿದೆ. ಇದು ಇಡೀ ರಾಜ್ಯದಲ್ಲೇ ಸಮಸ್ಯೆ ಎದುರಾಗಿದ್ದು ಈಗಾಗಲೇ ಗೃಹ ಸಚಿವರ ಜೊತೆ ಮಾತನಾಡಿ ರೈತರಿಗೆ ಅನುಕೂಲವಾಗುವಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ತಿಳಿಸಲಾಗಿದೆ ಎಂದರು.

ಜಿಲ್ಲೆಯ ರೈತರು ತಾವು ಬೆಳೆದ ಹಣ್ಣು, ತರಕಾರಿಗಳನ್ನು ಸರಾಗವಾಗಿ ಮಾರುಕಟ್ಟೆಗೆ ತಲುಪಿಸಲು ಆತಂಕ ಪಡುವ ಅಗತ್ಯವಿಲ್ಲ. ಈ ಸಂಬಂಧ ಅಧಿಕಾರಿಗಳ ಜೊತೆ ಮಾತನಾಡಿ ರೈತರಿಗೆ ತೊಂದರೆ ಉಂಟಾಗದಂತೆ ಕ್ರಮಕೈಗೊಳ್ಳಲಾಗಿದೆ ಎಂದು ಭರವಸೆ ನೀಡಿದರು.

ಶಾಸಕರಾದ ಅಶ್ವಿನ್ ಕುಮಾರ್, ನಿರಂಜನ್ ಕುಮಾರ್, ಜಿಲ್ಲಾಧಿಕಾರಿ ಅಭಿರಾಮ್.ಜಿ.ಶಂಕರ್, ಜಿಲ್ಲಾ ಪಂಚಾಯ್ ಸಿಇಓ ಪ್ರಶಾಂತ್ ಕುಮಾರ್ ಮಿಶ್ರ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ವಿ.ಸ್ನೇಹ ಇತರರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ