NEWSಆರೋಗ್ಯನಮ್ಮಜಿಲ್ಲೆ

ಸೀಲ್‍ಡೌನ್ ಏರಿಯಾಗಳಲ್ಲಿ ಆಂಬುಲೆನ್ಸ್ ಬಳಸಿ ಜ್ವರ ತಪಾಸಣೆ

ದಿನಸಿ ಸಾಮಗ್ರಿ ಕಿಟ್ ವಿತರಿಸಿದ ಆರೋಗ್ಯ ಸಚಿವ ಬಿ. ಶ್ರೀರಾಮುಲು ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ಚಿತ್ರದುರ್ಗ: ಕೋವಿಡ್-19 ಸೋಂಕು ಮುಕ್ತ ರಾಜ್ಯವನ್ನಾಗಿಸಲು ರಾಜ್ಯದ ಡೇಂಜರ್ ಜೋನ್ ಹಾಗೂ ಕಂಟೈನ್ಮೆಂಟ್ ಏರಿಯಾಗಳಲ್ಲಿ 108 ಆ್ಯಂಬುಲೆನ್ಸ್ ಬಳಸಿಕೊಂಡು, ಫೀವರ್ ಕ್ಲಿನಿಕ್‍ಗಳಲ್ಲಿ ಜ್ವರ ತಪಾಸಣೆ ಮಾಡಲು ಯೋಜಿಸಲಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಹೇಳಿದರು.

 ಮೊಳಕಾಲ್ಮೂರು ಪಟ್ಟಣದ ಪಟ್ಟಣ ಪಂಚಾಯತ್ ಕಚೇರಿ ಆವರಣದಲ್ಲಿ ಆಶಾ ಕಾರ್ಯಕರ್ತೆಯರು ಹಾಗೂ ಪೌರಕಾರ್ಮಿಕರಿಗೆ ನಿತ್ಯ ಬಳಕೆಯ ದಿನಸಿ ಸಾಮಗ್ರಿ ಕಿಟ್ ವಿತರಿಸಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ರಾಜ್ಯದಲ್ಲಿ ಲಾಕ್‍ಡೌನ್ ಅವಧಿಯನ್ನು ವಿಸ್ತರಣೆ ಮಾಡಬೇಕೋ, ಸಡಿಲಿಕೆ ಮಾಡಬೇಕೋ ಎನ್ನುವ ಬಗ್ಗೆ ಸರ್ಕಾರ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಕೇಂದ್ರ ಸರ್ಕಾರದ ನಿರ್ಧಾರವನ್ನು ಗಮನಿಸಿದ ಬಳಿಕವೇ ಮೇ. 03 ರ ಬಳಿಕ ರಾಜ್ಯದಲ್ಲಿ ಲಾಕ್‍ಡೌನ್ ವಿಸ್ತರಣೆ ಅಥವಾ ಸಡಿಲಿಕೆ ಕುರಿತಂತೆ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಕೋವಿಡ್-19 ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಕೇಂದ್ರ ಸರ್ಕಾರದ ನಿರ್ದೇಶನದಂತೆ ಮೇ 3 ರವರೆಗೆ ಲಾಕ್‍ಡೌನ್ ಜಾರಿಗೊಳಿಸಲಾಗಿದೆ. ಸದ್ಯದ ಸನ್ನಿವೇಶದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡುವ ಪ್ರಶ್ನೆಯೇ ಇಲ್ಲ.  ಸೀಲ್‍ಡೌನ್ ಮಾಡಿರುವ ಹಾಗೂ ಕಂಟೈನ್ಮೆಂಟ್ ಪ್ರದೇಶವೆಂದು ಗುರುತಿಸಲಾಗಿರುವ ಕಡೆಗಳಲ್ಲಿ ಎಲ್ಲರಿಗೂ ಜ್ವರ ತಪಾಸಣೆ ಮಾಡಲು ನಿರ್ಧರಿಸಲಾಗಿದ್ದು, ಇದಕ್ಕಾಗಿ 108 ಆಂಬುಲೆನ್ಸ್ ಬಳಕೆ ಮಾಡಲಾಗುವುದು ಎಂದು ತಿಳಿಸಿದರು.

ಆಶಾ ಕಾರ್ಯಕರ್ತೆಯರು ಅಥವಾ ವೈದ್ಯರ ಮೇಲೆ ಹಲ್ಲೆ ಮಾಡಿದಲ್ಲಿ ಅಂತಹವರಿಗೆ 2 ಲಕ್ಷ ರೂ. ದಂಡ, 2 ವರ್ಷ ಜೈಲು ಶಿಕ್ಷೆ ನೀಡಬಹುದಾದ ವಿಶೇಷ ಕಾಯ್ದೆ ರೂಪಿಸಲಾಗಿದೆ.  ರಾಜ್ಯದಲ್ಲಿ ಆಶಾ ಕಾರ್ಯಕರ್ತೆಯರು ಹಾಗೂ ವೈದ್ಯರು ಮತ್ತು ಆರೊಗ್ಯ ಇಲಾಖೆ ಸಿಬ್ಬಂದಿ ಸೇವಾ ವೈಖರಿ ಶ್ಲಾಘನೀಯವಾಗಿದೆ. ಜೀವದ ಹಂಗು ತೊರೆದು ಶ್ರಮ ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು ಹಾಗೂ ವೈದ್ಯ ಸಿಬ್ಬಂದಿ ಹಿತ ಕಾಯಲು ಸರ್ಕಾರ ಬದ್ಧವಾಗಿದೆ ಎಂದರು.

ಮೊಳಕಾಲ್ಮೂರು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಕಾಂತರಾಜ್, ತಹಸಿಲ್ದಾರ್ ಬಸವರಾಜ್ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ