NEWSನಮ್ಮರಾಜ್ಯಶಿಕ್ಷಣ-

1ರಿಂದ 8ನೇ ತರಗತಿಗಳ ಆರಂಭಕ್ಕೂ ಚಿಂತನೆ: ಶಿಕ್ಷಣ ಸಚಿವ ನಾಗೇಶ್

ವಿಜಯಪಥ ಸಮಗ್ರ ಸುದ್ದಿ

ಚಿತ್ರದುರ್ಗ: 9, 10 ಹಾಗೂ ಪಿಯುಸಿ ತರಗತಿಯನ್ನು ಕೋವಿಡ್ ಕಾರ್ಯಪಡೆ, ಮಕ್ಕಳ ತಜ್ಞರು ಹಾಗೂ ತಾಂತ್ರಿಕ ಸಮಿತಿ ವರದಿ ಆಧರಿಸಿ ಆರಂಭಿಸಲಾಗುತ್ತಿದ್ದು, ಇದರಲ್ಲಿ ಯಶಸ್ವಿಯಾದರೇ 1 ರಿಂದ 8 ನೇ ತರಗತಿಗಳನ್ನು ಮುಂದಿನ ದಿನಗಳಲ್ಲಿ ಆರಂಭಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಪೋಷಕರು ಹಾಗೂ ಮಕ್ಕಳ ಧೈರ್ಯ ನೋಡಿ ಶಾಲೆ ತೆರೆಯಲಾಗುತ್ತಿದೆ. ಈಗಾಗಲೇ ಕೋವಿಡ್ -19 ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದ್ದು, ಮಕ್ಕಳ ಮನವೊಲಿಸಲು ಶಿಕ್ಷಕರಿಗೆ ತಿಳಿಸಲಾಗಿದೆ ಎಂದರು.

ಶೇ.30 ರಿಂದ 40 ರಷ್ಟು ಮಕ್ಕಳು ಆನ್ ಲೈನ್ ಶಿಕ್ಷಣದಿಂದ ವಂಚಿತರಾಗಿದ್ದಾರೆ ಎಂದು ಸಮೀಕ್ಷೆಯಿಂದ ತಿಳಿದು ಬಂದಿದೆ. ಆದರೂ ಯಾವುದೇ ಕಾರಣಕ್ಕೂ ಬಲವಂತವಾಗಿ ಮಕ್ಕಳನ್ನು ಶಾಲೆಗೆ ಕರೆತರುವಂತಿಲ್ಲ. ಒಂದು ವೇಳೆ ಪೋಷಕರು ಇದಕ್ಕೆ ಸಹಮತನೀಡದಿದ್ದರೇ, ಆನ್ ಲೈನ್ ತರಗತಿ ಮೂಲಕ ಅವರಿಗೆ ಅಭ್ಯಾಸ ಮುಂದುವರಿಯುವುದು. ಈ ಕುರಿತು ಯಾರೂ ಕೂಡ ಆತಂಕಕ್ಕೆ ಒಳಗಾಗುವುದು ಬೇಡ ಎಂದರು.

ತರಗತಿಗೆ ಹಾಜರಾದ ವಿದ್ಯಾರ್ಥಿಗಳಲ್ಲಿ ಒಂದು ವೇಳೆ ಕೋವಿಡ್ ದೃಢಪಟ್ಟರೇ ಒಂದು ವಾರಗಳ ಕಾಲ ಶಾಲೆ ಮುಚ್ಚಲಾಗುವುದು. ನಂತರ ಸಂಪೂರ್ಣ ಸ್ಯಾನಿಟೈಸ್ ಮಾಡಿ ಮತ್ತೆ ಶಾಲೆ ಆರಂಭಿಸಲಾಗುವುದು ಎಂದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು