ವಾಷಿಂಗ್ಟನ್: ಅಮೆರಿಕದ ಹೊರಗಡೆ ತಯಾರಾದ ಚಲನಚಿತ್ರಗಳ ಮೇಲೆ ಶೇ. 100ರಷ್ಟು ಸುಂಕ ವಿಧಿಸಲಾಗುವುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಲ್ಲಿಂದು ಘೋಷಣೆ ಮಾಡಿದ್ದಾರೆ.
ಚಲನಚಿತ್ರ ಉದ್ಯಮವನ್ನು ರಕ್ಷಿಸಲು ಮತ್ತು ಸ್ಥಳೀಯ ಉದ್ಯೋಗ ಸೃಷ್ಟಿ ಉತ್ತೇಜಿಸುವ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಟ್ರಂಪ್ ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.
ಅಮೆರಿಕದ ಮಾರುಕಟ್ಟೆಯಲ್ಲಿ ವಿದೇಶಿ ಚಿತ್ರಗಳು ಕಡಿಮೆ ವೆಚ್ಚದಲ್ಲಿ ಸ್ಪರ್ಧಿಸುವುದರಿಂದ, ಇದು ಸ್ಥಳೀಯ ನಿರ್ಮಾಪಕರಿಗೆ ಸವಾಲಾಗಿ ಪರಿಣಮಿಸುತ್ತದೆ. ಇದರ ಜತೆಗೆ, ಸಾಂಸ್ಕೃತಿಕ ಮೌಲ್ಯಗಳು ಮತ್ತು ರಾಷ್ಟ್ರೀಯ ಗುರುತಿನ ಮೇಲೆ ವಿದೇಶಿ ಚಿತ್ರಗಳ ಪ್ರಭಾವ ಹೆಚ್ಚಾಗುತ್ತಿದ್ದು, ಇದನ್ನು ಕಡಿಮೆ ಮಾಡುವ ಉದ್ದೇಶದಿಂದ ಈ ಘೊಷಣೆ ಮಾಡಲಾಗಿದೆ ಎಂದು ತಿಳಿಸಿದರು.
ಸದ್ಯ ಈ ಘೋಷಣೆಯು ಚಲನಚಿತ್ರ ಉದ್ಯಮದಲ್ಲಿ ತೀವ್ರ ಚರ್ಚೆಯಾಗುತ್ತಿದ್ದು, ವಿಶ್ವದ ಇತರ ದೇಶಗಳಿಂದ, ವಿಶೇಷವಾಗಿ ಭಾರತ, ಚೀನಾ ಮತ್ತು ಯುರೋಪ್ನಿಂದ ತಯಾರಾದ ಚಿತ್ರಗಳು ಅಮೆರಿಕದಲ್ಲಿ ಜನಪ್ರಿಯವಾಗಿವೆ. ಈ ಸುಂಕ ನೀತಿಯಿಂದಾಗಿ ವಿದೇಶಿ ಸಿನಿಮಾಗಳ ಬೆಲೆ ಗಣನೀಯವಾಗಿ ಹೆಚ್ಚಾಗಬಹುದು. ಇದರಿಂದ ಅವುಗಳ ಮಾರುಕಟ್ಟೆ ಸಾಮರ್ಥ್ಯ ಕಡಿಮೆಯಾಗುವ ಸಾಧ್ಯತೆಯಿದೆ.
ಈ ಕ್ರಮವು ಅಂತಾರಾಷ್ಟ್ರೀಯ ವಾಣಿಜ್ಯ ಸಂಬಂಧಗಳ ಮೇಲೆಯೂ ಪರಿಣಾಮ ಬೀರಬಹುದು. ಭಾರತದ ಬಾಲಿವುಡ್ ಚಿತ್ರಗಳು ಅಮೆರಿಕದಲ್ಲಿ ಗಮನಾರ್ಹ ಪ್ರೇಕ್ಷಕರನ್ನು ಹೊಂದಿದ್ದು, ಈ ಸುಂಕವು ಭಾರತೀಯ ನಿರ್ಮಾಪಕರಿಗೆ ಹೊಸ ಸವಾಲುಗಳನ್ನು ಸೃಷ್ಟಿಸಬಹುದು. ಇದಕ್ಕೆ ಪ್ರತಿಯಾಗಿ ಕೆಲವು ದೇಶಗಳು ಅಮೆರಿಕದ ಚಿತ್ರಗಳಿಗೆ ತಮ್ಮದೇ ಆದ ಪ್ರತಿ ಸುಂಕಗಳನ್ನು ವಿಧಿಸುವ ಸಾಧ್ಯತೆಯಿದೆ.
ಟ್ರಂಪ್ ಅವರ ಈ ನಿರ್ಧಾರದ ಕುರಿತು ಸ್ಪಷ್ಟನೆ ಬೇಕಾಗಿದ್ದು, ಈ ಸುಂಕ ಯಾವಾಗಿನಿಂದ ಜಾರಿಗೆ ಬರಲಿದೆ ಮತ್ತು ಯಾವ ರೀತಿಯ ಚಿತ್ರಗಳಿಗೆ ಇದು ಅನ್ವಯವಾಗಲಿದೆ ಎಂಬುದು ಇನ್ನಷ್ಟೆ ತಿಳಿದು ಬರಬೇಕಿದೆ. ಇದಕ್ಕೂ ಮುನ್ನ ಟ್ರಂಪ್ ಭಾರತ ಸೇರಿ ಹಲವು ದೇಶಗಳ ಮೇಲೆ ಸುಂಕ ಸಮರ ನಡೆಸಿದ್ದರು.
Related

You Might Also Like
BMTC: ಚಾಲಕ ಹುದ್ದೆಯಿಂದ ಚಾಲಕ ಕಂ ನಿರ್ವಾಹಕ ಹುದ್ದೆಗೆ ನಿಯೋಜಿಸಿದ್ದ ಆದೇಶ ಹಿಂಪಡೆಯಲು ಸಿಟಿಎಂ ಆದೇಶ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನಿಯಮ 17/1 ರ ಅಡಿಯಲ್ಲಿ ಚಾಲಕ ಹುದ್ದೆಯಿಂದ ಚಾಲಕ-ಕಂ-ನಿರ್ವಾಹಕ ಹುದ್ದೆಗೆ ನಿಯೋಜಿಸಿರುವ ಆದೇಶಗಳನ್ನು ಜುಲೈ 1ರಿಂದಲೇ ಹಂತ ಹಂತವಾಗಿ ಹಿಂಪಡೆದು...
ಕಾವೇರಿ ತಾಯಿಗೆ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಮಂಡ್ಯ: ಸೋತ ಗಿರಾಕಿಗಳು ಸರ್ಕಾರ ಬಿದ್ದೋಗತ್ತೆ ಎಂದು ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ. ನನ್ನ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಡುವಿನ ವಿಶ್ವಾಸ ಸರಿ ಇಲ್ಲ ಎಂದು ಬುರುಡೆ...
ವನಮಹೋತ್ಸವದಲ್ಲಿ ತ್ರಿಚಕ್ರ ವಾಹನ ವಿತರಣೆ, ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ
ಬೆಂಗಳೂರು ಗ್ರಾಮಾಂತ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವನಮಹೋತ್ಸವ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ವಿತರಣೆ ಹಾಗೂ ಸ್ವಚ್ಛತಾ ಕೆಲಸಕ್ಕಾಗಿ ನೂತನ ಆಟೋ ವಾಹನ ಮತ್ತು ಹಿಟಾಚಿ...
9 ಎಕರೆಯಲ್ಲಿ ಕೆಂಪೇಗೌಡರ ವಸ್ತು ಸಂಗ್ರಹಾಲಯ ನಿರ್ಮಾಣ: ಉಸ್ತುವಾರಿ ಸಚಿವ ಕೆಎಚ್ಎಂ
ನಾಡಪ್ರಭು ಕೆಂಪೇಗೌಡರ 516 ನೇ ಜಯಂತ್ಯೋತ್ಸವ ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಮೂಲ ಸ್ಥಳವಾದ ಆವತಿ ಗ್ರಾಮದ ಬಳಿ 9.10 ಎಕರೆ ಪ್ರದೇಶದಲ್ಲಿ ನಾಡಪ್ರಭು ಕೆಂಪೇಗೌಡರ ಜೀವನ ಚರಿತ್ರೆ,...
ಲೋಕಾಯುಕ್ತರು ರಾಜಿನಾಮೆ ನೀಡಬೇಕು, ಅಬಕಾರಿ ಸಚಿವರ ವಜಾಗೊಳಿಸಲು ಆಗ್ರಹಿಸಿ KRS ಪಕ್ಷದಿಂದ ಬೃಹತ್ ಪ್ರತಿಭಟನೆ
ಬೆಂಗಳೂರು: ಲೋಕಾಯುಕ್ತರು ರಾಜಿನಾಮೆ ನೀಡಲಿ, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರನ್ನು ವಜಾಗೊಳಿಸಿ, ನ್ಯಾಯಾಂಗದ ಉಸ್ತುವಾರಿಯಲ್ಲಿ ಸಿಬಿಐ ತನಿಖೆಗೆ ವಹಿಸಿ ಎಂದು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ...
ಸರ್ಕಾರ ಅತೀ ಶೀಘ್ರದಲ್ಲೇ ಸಾರಿಗೆ ನೌಕರರಿಗೆ ಕೊಟ್ಟ ಭರವಸೆ ಈಡೇರಿಸಲಿದೆ: ಡಿಸಿಎಂ ಡಿಕೆಶಿ
ಬೆಂಗಳೂರು: ಚುನಾವಣಾ ಪೂರ್ವ ಪ್ರಣಾಳಿಕೆ ಭರವಸೆಯಂತೆ ಸಾರಿಗೆ ನೌಕರರಿಗೆ ಸರ್ಕಾರಿ ನೌಕರರಂತೆ ಸಮಾನ ವೇತನ ನೀಡುವಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸಾರಿಗೆ ನೌಕರರ ಕೂಟದ ರಾಜ್ಯಾಧ್ಯಕ್ಷ...
KKRTC: ತನ್ನದಲ್ಲದ ಆಧಾರ್ ಕಾರ್ಡ್ ತೋರಿಸಿ ಟಿಕೆಟ್ ಕೇಳಿದ ಮಹಿಳೆ- ಪ್ರಶ್ನಿಸಿದ್ದಕ್ಕೆ ಪ್ರಜ್ಞೆ ತಪ್ಪುವವರೆಗೂ ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ ಸಂಬಂಧಿಕರು
ಕಲಬುರಗಿ: ಬೇರೆಯವರ ಆಧಾರ್ ಕಾರ್ಡ್ ತೋರಿಸಿ ಟಿಕೆಟ್ ಪಡೆದುಕೊಳ್ಳಲು ಮುಂದಾದ ಮಹಿಳೆಗೆ ಇದು ನಿಮ್ಮ ಆಧಾರ ಕಾರ್ಡ್ ಅಲ್ಲ ನಿಮ್ಮದನ್ನು ಕೊಡಿ ಎಂದು ನಿರ್ವಾಹಕರು ಹೇಳಿದ್ದಕ್ಕೆ ಮಹಿಳೆ...
KSRTC: ಟೈರ್ ಬ್ಲಾಸ್ಟಾಗಿ ಮನೆಗೆ ನುಗ್ಗಿದ ಬಸ್-10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ತಿಪಟೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಟೈರ್ ಬ್ಲಾಸ್ಟ್ ಆಗಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಮನೆಗೆ ಬಸ್ ನುಗ್ಗಿದ ಘಟನೆ ತಾಲೂಕಿನ ಸಿದ್ದಾಪುರ...
ಕ್ರೂರವಾಗಿ ಮಹಿಳೆ ಕೊಲೆಗೈದು ಮೂಟೆಕಟ್ಟಿ ಕಸದ ಲಾರಿಯಲ್ಲಿಟ್ಟ ಪಾಪಿಗಳು ಎಸ್ಕೇಪ್
ಬೆಂಗಳೂರು: ಅತ್ಯಾಚಾರ ಮಾಡಿದ ಬಳಿಕ ಮಹಿಳೆಯನ್ನು ಅತ್ಯಂತ ಕ್ರೂರವಾಗಿ ಕೊಲೆಗೈದು ಮೂಟೆಕಟ್ಟಿ ಕಸದ ಲಾರಿಯಲ್ಲಿಟ್ಟು ದುಷ್ಕರ್ಮಿಗಳು ಎಸ್ಕೇಪ್ ಆಗಿರುವ ಘಟನೆ ಚನ್ನಮ್ಮನಕೆರೆ ಠಾಣಾ ವ್ಯಾಪ್ತಿಯ ಸ್ಕೇಟಿಂಗ್ ಗ್ರೌಂಡ್...