NEWSನಮ್ಮರಾಜ್ಯಶಿಕ್ಷಣ

ಪ್ರತಿ ಗ್ರಾಪಂ ಮಟ್ಟದಲ್ಲಿ ನಿರ್ಮಾಣವಾಗಿವೆ 101 ಸುಸಜ್ಜಿತ ಶಾಲೆಗಳು: ಸಚಿವ ಕೆಎಚ್‌ಎಂ

ವಿಜಯಪಥ ಸಮಗ್ರ ಸುದ್ದಿ

ದೇವನಹಳ್ಳಿ: 101 ಸುಸಜ್ಜಿತ ಶಾಲೆಗಳನ್ನು ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲೂ ನಿರ್ಮಾಣಮಾಡಿದ್ದು ಇದೇ ಏ.28 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದ್ದಾರೆ.

ತಾಲೂಕು ಪಂಚಾಯತಿ ಆವರಣದಲ್ಲಿ ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊರಚರಪಾಳ್ಯದ ಶತಮಾನೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಅಂದು ನಾನು ದೇವಸ್ಥಾನದಲ್ಲಿ ಕಲಿಕೆ ಆರಂಭಮಾಡಿ 1951 ರಲ್ಲಿ ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದೆ ಎಂದರು.

ಇನ್ನು ಶಿಕ್ಷಕರು ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಕೊಡುವುದಕ್ಕೆ ಹೆಚ್ಚಿನ ಗಮನವನ್ನು ಕೊಡಬೇಕು ಎಂದ ಅವರು, ಅ.2ರ ಮಹಾತ್ಮಗಾಂಧೀಜಿ ಯವರ ಜನ್ಮದಿನಾಚರಣೆಯಂದು ನಾವು ನಮ್ಮ ಸರ್ಕಾರದ ವತಿಯಿಂದ ಕರ್ನಾಟಕ ಪಬ್ಲಿಕ್ ಶಾಲೆಯನ್ನು ಆರಂಭಿಸಿ ಪ್ರತಿ ಗ್ರಾಮಪಂಚಾಯಿತಿ ಮಟ್ಟದಲ್ಲಿ 101 ಸುಸಜ್ಜಿತ ಶಾಲೆಗಳನ್ನು ಸಿಎಸ್ಆರ್ ಅನುದಾನದಡಿ ನಿರ್ಮಾಣಮಾಡಿದ್ದು ಇದೇ ತಿಂಗಳ 28 ರಂದು ಮುಖ್ಯಮಂತ್ರಿಗಳು ಉದ್ಘಾಟನೆ ಮಾಡಲಿದ್ದಾರೆ ಎಂದರು.

ಕೊರಚೆಪಾಳ್ಯದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವತಿಯಿಂದ ನಿರ್ಮಿಸಿದ್ದು ಶಾಲೆಯು ಸುಸಜ್ಜಿತ ವಾಗಿದೆ. ಇಲ್ಲಿ ಹೆಚ್ಚಿನ ಕಲಿಕಾ ಕೊಠಡಿಗಳು ಬೇಕಾಗಿರುವ ಹಿನ್ನೆಲೆಯಲ್ಲಿ ಈಗಾಗಲೇ ಮನವಿ ಸಲ್ಲಿಸಿದ್ದು ತಾಲೂಕು ಮತ್ತು ಜಿಲ್ಲಾಡಳಿತದ ವತಿಯಿಂದ ಚರ್ಚೆ ನಡೆಸಿ ಶೀಘ್ರದಲ್ಲೇ ತೀರ್ಮಾಣ ಮಾಡಲಾಗುವುದು ಎಂದರು.

ಕೇಂದ್ರ ಸರ್ಕಾರವು ರಾಷ್ಟ್ರೀಯ ನೂತನ ಶಿಕ್ಷಣ ನೀತಿ ರೂಪಿಸಿದ್ದು ಅದು ಸಂವಿಧಾನದ ಚೌಕಟ್ಟನಲ್ಲಿರದ ಕಾರಣ ಅದನ್ನು ಅಳವಡಿಸಲು ಸಾದ್ಯವಗಲಿಲ್ಲ. ವಿದ್ಯಾರ್ಥಿಗಳ ಕಲಿಕೆಯ ಹಿತದೃಷ್ಟಿಯಿಂದ ನಾವು ಮಕ್ಕಳ ಕಲಿಕೆಗೆ ಎಲ್ಲ ರೀತಿಯ ನೆರವನ್ನು ಕಲ್ಪಿಸಿ ಶಾಲೆಗಳ ಮೇಲ್ದರ್ಜೆಗೆ ಏರಿಸುವುದರೊಂದಿಗೆ ಕ್ರೀಡಾಂಗಣ, ಪ್ರಯೋಗಾಲಯ, ಗ್ರಂಥಾಲಯ, ಕುಡಿಯುವ ನೀರಿನ ಸೌಲಭ್ಯ ಮುಂತಾದ ವ್ಯವಸ್ಥೆಗಳನ್ನು ಕಲ್ಪಿಸಲಾಗುವುದು ಎಂದರು.

ಸಂಸದ ಕೆ.ಸುಧಾಕರ್, ಮಾಜಿ ಶಾಸಕ ಚಂದ್ರಪ್ಪ,ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ರಾಜಣ್ಣ, ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಜಗನ್ನಾಥ್, ಬಯ್ಯಪ್ಪಾ ಅದ್ಯಕ್ಷರಾದ ಶಾಂತಕುಮಾರ್, ಸದಸ್ಯರಾದ ಪ್ರಸನ್ನ ಕುಮಾರ್, ಹಿರಿಯ ವಿಧ್ಯಾರ್ಥಿಗಳು ಒಕ್ಕೂಟದ ರವಿಕುಮಾರ್, ಗಂಗಾದರಪ್ಪ,ಪುಟ್ಟ ಸ್ವಾಮಿ, ವೆಂಕಟೇಶ್,ಗೀತಾ ಚನ್ನಬಸಪ್ಪ,ವೇದಾವತಿ ಆಶಾ ಉಪಸ್ಥಿತರಿದ್ದರು.

Deva
the authorDeva

Leave a Reply

error: Content is protected !!
Latest news
ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್ ಚುನಾವಣೆವೇಳೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಶಾಸಕ ಶ್ರೀನಿವಾಸ್ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ