CRIMENEWSನಮ್ಮರಾಜ್ಯಸಿನಿಪಥ

ಕಿರುತೆರೆಯ ನಟ, ನಟಿಯರೂ ಸೇರಿ 139 ಜನರಿಗೆ ಸೈಟ್‌ ಕೊಡಿಸುವುದಾಗಿ ಹೇಳಿ ಕೋಟಿ ಕೋಟಿ ರೂ. ಪಡೆದು ವಂಚನೆ: FIR ದಾಖಲು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಿರುತೆರೆಯ ನಟ, ನಟಿಯರೂ ಸೇರಿ 139 ಜನರಿಂದ ಲಕ್ಷ ಲಕ್ಷ ರೂಪಾಯಿ ಹಣ ಪಡೆದು ಸೈಟ್‌ ಕೊಡಿಸುವುದಾಗಿ ಹೇಳಿ ವಂಚನೆ ಮಾಡಿರುವ ಪ್ರಕರಣ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.

ಈ ಸಂಬಂಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಭಾವನಾ ಬೆಳಗೆರೆ ಅವರು ಬಿಲ್ಡರ್‌ ಸೇರಿದಂತೆ ಐವರ ವಿರುದ್ಧ ದೂರು ನೀಡಿದ್ದು, ಎಫ್‌ಐಆರ್‌ ದಾಖಲಾಗಿದೆ.

ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್‌ನ 139 ಸದಸ್ಯರಿಗೆ ಸೈಟು ಕೊಡಿಸುವುದಾಗಿ ಕಿಡಿಗೇಡಿಗಳು ವಂಚನೆ ಮಾಡಿದ್ದಾರೆ. ಈ ಕುರಿತು ಅಸೋಸಿಯೇಷನ್ ಸದಸ್ಯೆ ಭಾವನಾ ಬೆಳಗೆರೆ ಅವರು ನೀಡಿದ ದೂರಿನ ಮೇರೆಗೆ ಬಿಲ್ಡರ್ ಭಗೀರಥ, ಸಂಜೀವ್ ತಗಡೂರು, ಗುರುಪ್ರಸಾದ್, ರವೀಂದ್ರ, ಉಮಾಕಾಂತ್ ಎಂಬುವವರ ವಿರುದ್ಧ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.

ಕೆಟಿವಿಎನಲ್ಲಿ ಸೈಟ್‌ ಕಮಿಟಿ ಸದಸ್ಯನಾಗಿದ್ದ ಸಂಜೀವ್‌ ತಗಡೂರು, ಸದಸ್ಯರಿಗೆ ಸೈಟ್‌ ಕೊಡಿಸುವುದಾಗಿ ಬಿಲ್ಡರ್‌ ಜತೆಗೆ ವ್ಯವಹಾರ ಕುದುರಿಸಿದ್ದ. ತಾವರೆಕೆರೆ ಬಳಿ ಸೈಟ್‌ ಕೊಡಿಸುವುದಾಗಿ ಹೇಳಿ ಅಸೋಸಿಯೇಷನ್‌ ಸದಸ್ಯರಿಂದ ಲಕ್ಷ ಲಕ್ಷ ಹಣ ಪಡೆದಿದ್ದ.

ಆರ್.ಆರ್.ನಗರ ಉಪನೋಂದಣಾಧಿಕಾರಿ ಕಚೇರಿಯಲ್ಲಿ ಶುದ್ಧ ಕ್ರಯ ಸಹ ಮಾಡಿಸಲಾಗಿತ್ತು. ಆ ಬಳಿಕ ಖಾತೆ ಮಾಡಿಸಲು ಮೀನಮೇಷ ಎಣಿಸುತ್ತಿದ್ದ. ಈ ವೇಳೆ ಕೆಲ ಸದಸ್ಯರು ಖುದ್ಧಾಗಿ ಖಾತೆ ಮಾಡಿಸಲು ತೆರಳಿದಾಗ ತಾವು ವಂಚನೆಗೆ ಒಳಗಾಗಿರುವುದು ಬೆಳಕಿಗೆ ಬಂದಿದೆ.

ಒಟ್ಟು 1.6 ಕೋಟಿ ರೂ. ವಂಚನೆ ಮಾಡಲಾಗಿದೆ ಎಂದು ಅಸೋಸಿಯೇಷನ್‌ ಸದಸ್ಯರು ದೂರಿನಲ್ಲಿ ತಿಳಿಸಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದೆ.

Megha
the authorMegha

Leave a Reply

error: Content is protected !!
Latest news
ಬೇಕಾಬಿಟ್ಟಿ ಗ್ಯಾರಂಟಿಗಳ ಕೊಡುವುದರಿಂದ ದೇಶದ ಆರ್ಥಿಕತೆ ಮೇಲೆ ಪರಿಣಾಮ ಬೀರಲಿದೆ: ಸರ್ಕಾರಗಳಿಗೆ ಎಚ್ಚರಿಕೆ ನೀಡಿ ವಿತ್ತ... ಲಾರಿ ಓವರ್‌ಟೇಕ್‌ ಮಾಡುವ ವೇಳೆ ಚಾಲಕನ ನಿಯಂತ್ರ ಕಳೆದುಕೊಂಡ ಕಾರು ಪಲ್ಟಿ: ದಂಪತಿಗೆ ಗಂಭೀರ ಗಾಯ ಆಸ್ಪತ್ರೆಗೆ ದಾಖಲು ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ, ಆತಂಕಬೇಡ: ಸಿಎಂ ಶಿವಕುಮಾರ್‌ ಭರವಸೆ KSRTC ಕನಕಪುರ ಘಟಕದಲ್ಲಿ ಚಾಲಕನ ಮೇಲೆ ಹಲ್ಲೆ ಮಾಡಿದ ನಾಲ್ವರ ಅಮಾನತು ಸಿಎಂ ತವರಲ್ಲೇ KSRTC ಚಾಲನಕನ ಮೇಲೆ ಹಲ್ಲೆ, ಗೂಂಡಾ ವರ್ತನೆ: ಡಿಎಂ ಎದುರೇ ಘಟಕದಲ್ಲಿ ರೌಡಿಸಂ ನೌಕರನ ವಿರುದ್ಧ ಸಾಬೀತಾಗಿರುವ ದುರ್ನಡತೆಗೆ ಹೋಲಿಸಿದರೆ ಆತನ ವಜಾ ಮಾಡಿರುವುದು ಕಾನೂನುಬಾಹಿರ,ಅತ್ಯಂತ ಕಠಿಣ ಶಿಕ್ಷೆ: ಸು... ತಜ್ಞರ ಸಲಹೆ ಪಡೆದು ಪಾಲಿಕೆ ಆಯವ್ಯಯ ಅನುದಾನ ಬಳಕೆ : GBA ದಕ್ಷಿಣ ಆಯುಕ್ತ BMTC: ಜೂನ್‌ 18ರೊಳಗೆ ನಿವೃತ್ತ ನೌಕರರು ಏ-2018 ರಿಂದ ಜು-2018ರವರೆಗಿನ ತುಟ್ಟಿಭತ್ಯೆ ಪಡೆಯಲು ಬ್ಯಾಂಕ್‌ ಖಾತೆ ವಿವರ ... ಕುಡಿಯುವ ನೀರು ಸಮಸ್ಯೆ ಉಂಟಾದಲ್ಲಿ ಅಧಿಕಾರಿಗಳೇ ಹೊಣೆ: ಸಚಿವ ಖಂಡ್ರೆ ಎಚ್ಚರಿಕೆ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಶಿಕ್ಷಣವೊಂದೇ ಆಯುಧ: ನ್ಯಾ. ಶ್ರೀಶೈಲ್ ಭೀಮಸೇನ ಬಾಗಡಿ