ಜೈಪುರ: ಉದಯೋನ್ಮುಖ ಪ್ರತಿಭೆಗಳಿಗೆ ದೊಡ್ಡ ವೇದಿಕೆಯಾಗಿರುವ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ (IPL 2025) ಈ ಬಾರಿ ಹೊಸ ಯುವಕರ ಆರ್ಭಟವೇ ಜೋರಾಗಿದೆ. ಆದ್ರೆ 14 ವರ್ಷದ ಬಾಲಕ ತಾನು ಪ್ರವೇಶಿಸಿದ ಚೊಚ್ಚಲ ಐಪಿಎಲ್ ಆವತ್ತಿಯಲ್ಲಿ ಸ್ಫೋಟಕ ಶತಕ ಬಾರಿಸುವ ಮೂಲಕ ಕ್ರಿಕೆಟ್ ದಿಗ್ಗಜರ ಹುಬ್ಬೇರಿಸುವಂತೆ ಮಾಡಿದ್ದಾನೆ.
ಇನ್ನು ಐಪಿಎಲ್ ಅಂದ್ರೆ ಸಿಕ್ಸರ್, ಬೌಂಡರಿಗಳ ಅಬ್ಬರ ಇದ್ದೇ ಇರುತ್ತೇ. ಕೆಲವೊಮ್ಮೆ ಬ್ಯಾಟ್ಸ್ಮೆನ್ಗಳು ಕಡಿಮೆ ಎಸೆತಗಳಲ್ಲಿ ಭಾರೀ ರನ್ಗಳಿಸಿ ಪಂದ್ಯದ ಗತಿಯನ್ನೇ ಬದಲಿಸುತ್ತಾರೆ. ಅಂತಾರಾಷ್ಟ್ರೀಯ ಮಟ್ಟದ ದಿಗ್ಗಜರೇ ಹೆಚ್ಚಾಗಿರುವ ಈ ಅಖಾಡದಲ್ಲಿ 14 ವರ್ಷದ ಬಾಲಕ ವೈಭವ್ ಸೂರ್ಯವಂಶಿ ಭರ್ಜರಿಯಾಗಿ ಮಿಂಚುತ್ತಿದ್ದಾರೆ.
ತನ್ನ ಚೊಚ್ಚಲ ಪಂದ್ಯದಲ್ಲೇ ಸಿಕ್ಸರ್ ಸಿಡಿಸುವ ಮೂಲಕ ಐಪಿಎಲ್ ವೃತ್ತಿ ಬದುಕು ಶುರು ಮಾಡಿದ ವೈಭವ್ ಸೂರ್ಯವಂಶಿ 3ನೇ ಪಂದ್ಯದಲ್ಲೇ ಸ್ಫೋಟಕ ಶತಕ ಸಿಡಿಸಿ ಇತಿಹಾಸ ಸೃಷ್ಟಿಸಿದ್ದಾರೆ.
ಗುಜರಾತ್ ಟೈಟಾನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ವೈಭವ್ ಕೇವಲ 17 ಎಸೆತಗಳಲ್ಲಿ 6 ಸಿಕ್ಸರ್, 3 ಬೌಂಡರಿ ಬಾರಿಸುವ ಮೂಲಕ ಸ್ಫೋಟಕ ಅರ್ಧಶತಕ ಸಿಡಿಸಿದ್ದರು. ಮುಂದಿನ 18 ಎಸೆತಗಳಲ್ಲಿ ಫಿಫ್ಟಿ ಬಾರಿಸುವ ಮೂಲಕ ಶತಕ ಪೂರೈಸಿದ್ದಾರೆ. ಒಟ್ಟು ತಾನು ಎದುರಿಸಿದ 38 ಎಸೆತಗಳಲ್ಲಿ 101 ರನ್ (11 ಸಿಕ್ಸರ್, 7 ಬೌಂಡರಿ) ಸಿಡಿಸಿ ಔಟಾದರು.
2ನೇ ಆಟಗಾರನೆಂಬ ದಾಖಲೆ: ಇಡೀ ಐಪಿಎಲ್ ಇತಿಹಾಸದಲ್ಲೇ ಅತಿ ವೇಗದ ಶತಕ ಸಿಡಿಸಿದ ಖ್ಯಾತಿ ಕ್ರಿಸ್ ಗೇಲ್ ಅವರ ಹೆಸರಿನಲ್ಲಿದೆ. ಇದೀಗ 35 ಎಸೆತಗಳಲ್ಲಿ ಶತಕ ಬಾರಿಸುವ ಮೂಲಕ ವೇಗದ ಶತಕ ಬಾರಿಸಿದ 2ನೇ ಆಟಗಾರ ಜತೆಗೆ ಈ ಸಾಧನೆ ಮಾಡಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಉಳಿದಂತೆ ಯೂಸೂಫ್ ಪಠಾಣ್ (37 ಎಸೆತ), ಡೇವಿಡ್ ಮಿಲ್ಲರ್ (38 ಎಸೆತ), ಟ್ರಾವಿಸ್ ಹೆಡ್ (39 ಎಸೆತ) ಕಡಿಮೆ ಎಸೆತಗಳಲ್ಲಿ ಶತಕ ಸಿಡಿಸಿದ ಟಾಪ್-5 ಆಟಗಾರರಾಗಿದ್ದಾರೆ.
ವೇಗದ ಫಿಫ್ಟಿ: ಇನ್ನೂ ವೈಭವ್ ಈ ಆವೃತ್ತಿಯಲ್ಲಿ ವೇಗದ ಅರ್ಧಶತಕ ಸಿಡಿಸಿದ ದಾಖಲೆ ಬರೆದಿದ್ದಾರೆ. ಜತೆಗೆ ಅತೀ ಕಡಿಮೆ ವಯಸ್ಸಿಗೆ ಈ ಸಾಧನೆ ಮಾಡಿದ ಮೊದಲಿಗನಾಗಿದ್ದಾರೆ.

ಇಡೀ ಐಪಿಎಲ್ನಲ್ಲೇ ಅತೀ ವೇಗದ ಅರ್ಧಶತಕ ಸಿಡಿಸಿದ ದಾಖಲೆ ಯಶಸ್ವಿ ಜೈಸ್ವಾಲ್ ಹೆಸರಲ್ಲಿದೆ. 2023ರ ಆವೃತ್ತಿಯಲ್ಲಿ ಜೈಸ್ವಾಲ್ ಕೆಕೆಆರ್ ವಿರುದ್ಧ ಕೇವಲ 13 ಎಸೆತಗಳಲ್ಲಿ ಫಿಫ್ಟಿ ಬಾರಿಸಿದ್ದರು. 2018ರಲ್ಲಿ ಕೆ.ಎಲ್ ರಾಹುಲ್, 2022ರಲ್ಲಿ ಪ್ಯಾಟ್ ಕಮ್ಮಿನ್ಸ್ (ಅಂದು ಕೆಕೆಆರ್) ಮುಂಬೈ ವಿರುದ್ಧ 14 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಕ್ರಮವಾಗಿ 2, 3ನೇ ಸ್ಥಾನಗಳಲ್ಲಿದ್ದಾರೆ.
- ಈ ಆವೃತ್ತಿಯಲ್ಲಿ ವೇಗದ ಫಿಫ್ಟಿ ಬಾರಿಸಿದ ಆಟಗಾರರು
ವೈಭವ್ (ರಾಜಸ್ಥಾನ್) – 50 ರನ್ – 17 ಎಸೆತ
ಪೂರನ್ (ಎಲ್ಎಸ್ಜಿ) – 50 ರನ್, 18 ಎಸೆತ
ಮಾರ್ಷ್ (ಎಲ್ಎಸ್ಜಿ) – 50 ರನ್, 21 ಎಸೆತ
ಹೆಡ್ (ಎಸ್ಆರ್ಹೆಚ್) – 50 ರನ್, 21 ಎಸೆತ
Related


You Might Also Like
ಬೆಳ್ಳಂಬೆಳಗ್ಗೆ ಅನಿರೀಕ್ಷಿತ ಭೇಟಿ ನೀಡಿ ಹಾಜರಾತಿ ಪರಿಶೀಲಿಸಿದ ಆಯುಕ್ತರು: ಪೌರ ಕಾರ್ಮಿಕರ ಮೇಲ್ವಿಚಾರಕರಿಬ್ಬರ ಮೇಲೆ ಕ್ರಮ
ಬೆಂಗಳೂರು: ಸರ್ವಜ್ಞನಗರ ಕ್ಷೇತ್ರದ ಬಾಣಸವಾಡಿಯ ಬಿಎಸ್ಎನ್ಎಲ್ ಮಸ್ಟರಿಂಗ್ ಪಾಯಿಂಟ್ (ಭುವನಗಿರಿ ಪಾರ್ಕ್) ನಲ್ಲಿ ಇಂದು ಮುಂಜಾನೆ ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್...
ನಾಡಹಬ್ಬ ದಸರಾಗೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ ಅಧಿಕೃತವಾಗಿ ಆಹ್ವಾನಿಸಿದ ಜಿಲ್ಲಾ ಉಸ್ತುವಾರಿ ಸಚಿವ HCM
ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ ಮಹದೇವಪ್ಪ ಅಧಿಕೃತವಾಗಿ ಆಹ್ವಾನಿಸಿದರು. ಇದೇ ಸೆ.22 ರಂದು ಪ್ರಾರಂಭವಾಗಲಿರುವ...
ಮೊಸಳೆಹೊಸಳ್ಳಿ ದುರಂತ: ಮೃತರ ಮನೆಗಳಿಗೆ ವ್ಹೀಲ್ ಚೇರ್ನಲ್ಲೇ ತೆರಳಿ ಸಾಂತ್ವನ ಹೇಳಿದ ಮಾಜಿ ಪ್ರಧಾನಿ ಎಚ್ಡಿಡಿ
ಹಾಸನ: ಜಿಲ್ಲೆಯ ಮೊಸಳೆಹೊಸಳ್ಳಿಯಲ್ಲಿ ಮೊನ್ನೆ ನಡೆದ ಅಪಘಾತ ಪ್ರಕರಣ ನಿಜಕ್ಕೂ ಘನಘೋರ. ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಚಂದನ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಈ ಮೂಲಕ...
ಸಾಲಬಾಧೆ-ಗಂಡ, ಇಬ್ಬರು ಮಕ್ಕಳು ಸೇರಿ ನಾಲ್ವರು ಆತ್ಮಹತ್ಯೆಗೆ ಯತ್ನ ಮೂವರು ಮೃತ: ಸಾವು ಬದುಕಿನ ನಡುವೆ ತಾಯಿ ಸೆಣಸಾಟ
ಹೊಸಕೋಟೆ: ಸಾಲಬಾಧೆ ತಾಳಲಾರದೇ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಈ ಪೈಕಿ ಮೂವರು ಮೃತಪಟ್ಟಿರುವ ಘಟನೆ ತಾಲೂಕಿನ ಗೊಣಕನಹಳ್ಳಿಯಲ್ಲಿ ಗ್ರಾಮದಲ್ಲಿ ನಡೆದಿದೆ. ಗಂಡ, ಇಬ್ಬರು ಮಕ್ಕಳನ್ನು...
KSRTC ಹಾಸನ: ಸತ್ಯ ಮರೆಮಾಚಿದ ತನಿಖಾ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಮುಂದಾದ ಡಿಸಿ
ಹಾಸನ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಹಾಸನ ವಿಭಾಗದ ತನಿಖಾ ಸಿಬ್ಬಂದಿ ಸತ್ಯ ಮರೆಮಾಚಲು ಬಾಡಿ ಕ್ಯಾಮರಾ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಕೆಲವೊಂದು ಸಮಯದಲ್ಲಿ ಹ್ಯಾಂಗ್...
KSRTC ಹಾಸನ: ತನಿಖಾಧಿಕಾರಿಗಳ ಬಾಡಿ ಕ್ಯಾಮೆರಾದ ವಿಡಿಯೋ ರೆಕಾರ್ಡಿಂಗ್ ಕೊಡಲು ವಿಫಲ- ಆರೋಪ ಪತ್ರ ಜಾರಿ ಮಾಡಿದ ಡಿಸಿ
ಹಾಸನ: ಸಾರಿಗೆ ಸಂಸ್ಥೆಯ ಮಾರ್ಗ ತನಿಖಾಧಿಕಾರಿಗಳು ಬಾಡಿ ಕ್ಯಾಮೆರಾವನ್ನು ಹಾಕಿಕೊಂಡು ತನಿಖೆ ಮಾಡದ ಪರಿಣಾಮ ಮಾಹಿತಿ ಆಯೋಗದಲ್ಲಿ ಪ್ರಕರಣ ದಾಖಲು ಮಾಡಿದ ನೌಕರನಿಗೆ ವಿಡಿಯೋ ರೆಕಾರ್ಡಿಂಗ್ ಕೊಡಲು...
ಮೆಜೆಸ್ಟಿಕ್ BMTC: ಟೀ ಚೆನ್ನಾಗಿರುವುದಿಲ್ಲ ಬೇರೆ ಅಂಗಡಿಗೆ ಹೋಗೋಣ ಎಂದಿದ್ದಕ್ಕೆ ಚಾಲಕನ ಮೇಲೆ ಹಲ್ಲೆ- ಆರೋಪಿ ಬಂಧನ
ಬೆಂಗಳೂರು: ಈ ಅಂಗಡಿಯಲ್ಲಿ ಬೇಡ ಇಲ್ಲಿ ಟೀ ಚೆನ್ನಾಗಿರುವುದಿಲ್ಲ ಎಂದು ಹೇಳಿ ಅಲ್ಲಿಯೇ ಪಕ್ಕದಲ್ಲಿದ್ದ ಟೀ ಅಂಗಡಿಗೆ ಹೋಗೋಣ ಎಂದು ಸಹೋದ್ಯೋಗಿಗೆ ಹೇಳಿದ್ದಕ್ಕೆ ಕುಪಿತನಾದ ಟೀ ಮಾರುವ...
KRSTC: ಅನ್ಯಮಾರ್ಗದಲ್ಲಿ ಹೋಗಲು ಮಹಿಳಾ ಕಂಡಕ್ಟರನ್ನು ರಾತ್ರಿ ಅರ್ಧದಲ್ಲೇ ಇಳಿಸಿಹೋದ ಸಹೋದ್ಯೋಗಿಗಳು…!
ಸಾರಿಗೆ ಚಾಲನಾ ಸಿಬ್ಬಂದಿಗಳಲ್ಲಿ ಒಬ್ಬರಿಗೊಬ್ಬರು ಆಗುವುದಿಲ್ಲ ಎಂಬುದಕ್ಕೆ ಇದು ಮತ್ತೊಂದು ನಿದರ್ಶನ ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಬಹುತೇಕ ಎಲ್ಲ ಚಾಲನಾ ಸಿಬ್ಬಂದಿಗಳಲ್ಲಿ...
ಸೆ.22ರಿಂದ ಅ.7ರವರೆಗೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಇದೇ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರವರೆಗೆ ಹೊಸದಾಗಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ಎಲ್ಲರೂ...