ಜೈಪುರ: ಉದಯೋನ್ಮುಖ ಪ್ರತಿಭೆಗಳಿಗೆ ದೊಡ್ಡ ವೇದಿಕೆಯಾಗಿರುವ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ (IPL 2025) ಈ ಬಾರಿ ಹೊಸ ಯುವಕರ ಆರ್ಭಟವೇ ಜೋರಾಗಿದೆ. ಆದ್ರೆ 14 ವರ್ಷದ ಬಾಲಕ ತಾನು ಪ್ರವೇಶಿಸಿದ ಚೊಚ್ಚಲ ಐಪಿಎಲ್ ಆವತ್ತಿಯಲ್ಲಿ ಸ್ಫೋಟಕ ಶತಕ ಬಾರಿಸುವ ಮೂಲಕ ಕ್ರಿಕೆಟ್ ದಿಗ್ಗಜರ ಹುಬ್ಬೇರಿಸುವಂತೆ ಮಾಡಿದ್ದಾನೆ.
ಇನ್ನು ಐಪಿಎಲ್ ಅಂದ್ರೆ ಸಿಕ್ಸರ್, ಬೌಂಡರಿಗಳ ಅಬ್ಬರ ಇದ್ದೇ ಇರುತ್ತೇ. ಕೆಲವೊಮ್ಮೆ ಬ್ಯಾಟ್ಸ್ಮೆನ್ಗಳು ಕಡಿಮೆ ಎಸೆತಗಳಲ್ಲಿ ಭಾರೀ ರನ್ಗಳಿಸಿ ಪಂದ್ಯದ ಗತಿಯನ್ನೇ ಬದಲಿಸುತ್ತಾರೆ. ಅಂತಾರಾಷ್ಟ್ರೀಯ ಮಟ್ಟದ ದಿಗ್ಗಜರೇ ಹೆಚ್ಚಾಗಿರುವ ಈ ಅಖಾಡದಲ್ಲಿ 14 ವರ್ಷದ ಬಾಲಕ ವೈಭವ್ ಸೂರ್ಯವಂಶಿ ಭರ್ಜರಿಯಾಗಿ ಮಿಂಚುತ್ತಿದ್ದಾರೆ.
ತನ್ನ ಚೊಚ್ಚಲ ಪಂದ್ಯದಲ್ಲೇ ಸಿಕ್ಸರ್ ಸಿಡಿಸುವ ಮೂಲಕ ಐಪಿಎಲ್ ವೃತ್ತಿ ಬದುಕು ಶುರು ಮಾಡಿದ ವೈಭವ್ ಸೂರ್ಯವಂಶಿ 3ನೇ ಪಂದ್ಯದಲ್ಲೇ ಸ್ಫೋಟಕ ಶತಕ ಸಿಡಿಸಿ ಇತಿಹಾಸ ಸೃಷ್ಟಿಸಿದ್ದಾರೆ.
ಗುಜರಾತ್ ಟೈಟಾನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ವೈಭವ್ ಕೇವಲ 17 ಎಸೆತಗಳಲ್ಲಿ 6 ಸಿಕ್ಸರ್, 3 ಬೌಂಡರಿ ಬಾರಿಸುವ ಮೂಲಕ ಸ್ಫೋಟಕ ಅರ್ಧಶತಕ ಸಿಡಿಸಿದ್ದರು. ಮುಂದಿನ 18 ಎಸೆತಗಳಲ್ಲಿ ಫಿಫ್ಟಿ ಬಾರಿಸುವ ಮೂಲಕ ಶತಕ ಪೂರೈಸಿದ್ದಾರೆ. ಒಟ್ಟು ತಾನು ಎದುರಿಸಿದ 38 ಎಸೆತಗಳಲ್ಲಿ 101 ರನ್ (11 ಸಿಕ್ಸರ್, 7 ಬೌಂಡರಿ) ಸಿಡಿಸಿ ಔಟಾದರು.
2ನೇ ಆಟಗಾರನೆಂಬ ದಾಖಲೆ: ಇಡೀ ಐಪಿಎಲ್ ಇತಿಹಾಸದಲ್ಲೇ ಅತಿ ವೇಗದ ಶತಕ ಸಿಡಿಸಿದ ಖ್ಯಾತಿ ಕ್ರಿಸ್ ಗೇಲ್ ಅವರ ಹೆಸರಿನಲ್ಲಿದೆ. ಇದೀಗ 35 ಎಸೆತಗಳಲ್ಲಿ ಶತಕ ಬಾರಿಸುವ ಮೂಲಕ ವೇಗದ ಶತಕ ಬಾರಿಸಿದ 2ನೇ ಆಟಗಾರ ಜತೆಗೆ ಈ ಸಾಧನೆ ಮಾಡಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಉಳಿದಂತೆ ಯೂಸೂಫ್ ಪಠಾಣ್ (37 ಎಸೆತ), ಡೇವಿಡ್ ಮಿಲ್ಲರ್ (38 ಎಸೆತ), ಟ್ರಾವಿಸ್ ಹೆಡ್ (39 ಎಸೆತ) ಕಡಿಮೆ ಎಸೆತಗಳಲ್ಲಿ ಶತಕ ಸಿಡಿಸಿದ ಟಾಪ್-5 ಆಟಗಾರರಾಗಿದ್ದಾರೆ.
ವೇಗದ ಫಿಫ್ಟಿ: ಇನ್ನೂ ವೈಭವ್ ಈ ಆವೃತ್ತಿಯಲ್ಲಿ ವೇಗದ ಅರ್ಧಶತಕ ಸಿಡಿಸಿದ ದಾಖಲೆ ಬರೆದಿದ್ದಾರೆ. ಜತೆಗೆ ಅತೀ ಕಡಿಮೆ ವಯಸ್ಸಿಗೆ ಈ ಸಾಧನೆ ಮಾಡಿದ ಮೊದಲಿಗನಾಗಿದ್ದಾರೆ.
ಇಡೀ ಐಪಿಎಲ್ನಲ್ಲೇ ಅತೀ ವೇಗದ ಅರ್ಧಶತಕ ಸಿಡಿಸಿದ ದಾಖಲೆ ಯಶಸ್ವಿ ಜೈಸ್ವಾಲ್ ಹೆಸರಲ್ಲಿದೆ. 2023ರ ಆವೃತ್ತಿಯಲ್ಲಿ ಜೈಸ್ವಾಲ್ ಕೆಕೆಆರ್ ವಿರುದ್ಧ ಕೇವಲ 13 ಎಸೆತಗಳಲ್ಲಿ ಫಿಫ್ಟಿ ಬಾರಿಸಿದ್ದರು. 2018ರಲ್ಲಿ ಕೆ.ಎಲ್ ರಾಹುಲ್, 2022ರಲ್ಲಿ ಪ್ಯಾಟ್ ಕಮ್ಮಿನ್ಸ್ (ಅಂದು ಕೆಕೆಆರ್) ಮುಂಬೈ ವಿರುದ್ಧ 14 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಕ್ರಮವಾಗಿ 2, 3ನೇ ಸ್ಥಾನಗಳಲ್ಲಿದ್ದಾರೆ.
- ಈ ಆವೃತ್ತಿಯಲ್ಲಿ ವೇಗದ ಫಿಫ್ಟಿ ಬಾರಿಸಿದ ಆಟಗಾರರು
ವೈಭವ್ (ರಾಜಸ್ಥಾನ್) – 50 ರನ್ – 17 ಎಸೆತ
ಪೂರನ್ (ಎಲ್ಎಸ್ಜಿ) – 50 ರನ್, 18 ಎಸೆತ
ಮಾರ್ಷ್ (ಎಲ್ಎಸ್ಜಿ) – 50 ರನ್, 21 ಎಸೆತ
ಹೆಡ್ (ಎಸ್ಆರ್ಹೆಚ್) – 50 ರನ್, 21 ಎಸೆತ
Related

You Might Also Like
BMTC: ಚಾಲಕ ಹುದ್ದೆಯಿಂದ ಚಾಲಕ ಕಂ ನಿರ್ವಾಹಕ ಹುದ್ದೆಗೆ ನಿಯೋಜಿಸಿದ್ದ ಆದೇಶ ಹಿಂಪಡೆಯಲು ಸಿಟಿಎಂ ಆದೇಶ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನಿಯಮ 17/1 ರ ಅಡಿಯಲ್ಲಿ ಚಾಲಕ ಹುದ್ದೆಯಿಂದ ಚಾಲಕ-ಕಂ-ನಿರ್ವಾಹಕ ಹುದ್ದೆಗೆ ನಿಯೋಜಿಸಿರುವ ಆದೇಶಗಳನ್ನು ಜುಲೈ 1ರಿಂದಲೇ ಹಂತ ಹಂತವಾಗಿ ಹಿಂಪಡೆದು...
ಕಾವೇರಿ ತಾಯಿಗೆ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಮಂಡ್ಯ: ಸೋತ ಗಿರಾಕಿಗಳು ಸರ್ಕಾರ ಬಿದ್ದೋಗತ್ತೆ ಎಂದು ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ. ನನ್ನ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಡುವಿನ ವಿಶ್ವಾಸ ಸರಿ ಇಲ್ಲ ಎಂದು ಬುರುಡೆ...
ವನಮಹೋತ್ಸವದಲ್ಲಿ ತ್ರಿಚಕ್ರ ವಾಹನ ವಿತರಣೆ, ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ
ಬೆಂಗಳೂರು ಗ್ರಾಮಾಂತ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವನಮಹೋತ್ಸವ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ವಿತರಣೆ ಹಾಗೂ ಸ್ವಚ್ಛತಾ ಕೆಲಸಕ್ಕಾಗಿ ನೂತನ ಆಟೋ ವಾಹನ ಮತ್ತು ಹಿಟಾಚಿ...
9 ಎಕರೆಯಲ್ಲಿ ಕೆಂಪೇಗೌಡರ ವಸ್ತು ಸಂಗ್ರಹಾಲಯ ನಿರ್ಮಾಣ: ಉಸ್ತುವಾರಿ ಸಚಿವ ಕೆಎಚ್ಎಂ
ನಾಡಪ್ರಭು ಕೆಂಪೇಗೌಡರ 516 ನೇ ಜಯಂತ್ಯೋತ್ಸವ ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಮೂಲ ಸ್ಥಳವಾದ ಆವತಿ ಗ್ರಾಮದ ಬಳಿ 9.10 ಎಕರೆ ಪ್ರದೇಶದಲ್ಲಿ ನಾಡಪ್ರಭು ಕೆಂಪೇಗೌಡರ ಜೀವನ ಚರಿತ್ರೆ,...
ಲೋಕಾಯುಕ್ತರು ರಾಜಿನಾಮೆ ನೀಡಬೇಕು, ಅಬಕಾರಿ ಸಚಿವರ ವಜಾಗೊಳಿಸಲು ಆಗ್ರಹಿಸಿ KRS ಪಕ್ಷದಿಂದ ಬೃಹತ್ ಪ್ರತಿಭಟನೆ
ಬೆಂಗಳೂರು: ಲೋಕಾಯುಕ್ತರು ರಾಜಿನಾಮೆ ನೀಡಲಿ, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರನ್ನು ವಜಾಗೊಳಿಸಿ, ನ್ಯಾಯಾಂಗದ ಉಸ್ತುವಾರಿಯಲ್ಲಿ ಸಿಬಿಐ ತನಿಖೆಗೆ ವಹಿಸಿ ಎಂದು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ...
ಸರ್ಕಾರ ಅತೀ ಶೀಘ್ರದಲ್ಲೇ ಸಾರಿಗೆ ನೌಕರರಿಗೆ ಕೊಟ್ಟ ಭರವಸೆ ಈಡೇರಿಸಲಿದೆ: ಡಿಸಿಎಂ ಡಿಕೆಶಿ
ಬೆಂಗಳೂರು: ಚುನಾವಣಾ ಪೂರ್ವ ಪ್ರಣಾಳಿಕೆ ಭರವಸೆಯಂತೆ ಸಾರಿಗೆ ನೌಕರರಿಗೆ ಸರ್ಕಾರಿ ನೌಕರರಂತೆ ಸಮಾನ ವೇತನ ನೀಡುವಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸಾರಿಗೆ ನೌಕರರ ಕೂಟದ ರಾಜ್ಯಾಧ್ಯಕ್ಷ...
KKRTC: ತನ್ನದಲ್ಲದ ಆಧಾರ್ ಕಾರ್ಡ್ ತೋರಿಸಿ ಟಿಕೆಟ್ ಕೇಳಿದ ಮಹಿಳೆ- ಪ್ರಶ್ನಿಸಿದ್ದಕ್ಕೆ ಪ್ರಜ್ಞೆ ತಪ್ಪುವವರೆಗೂ ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ ಸಂಬಂಧಿಕರು
ಕಲಬುರಗಿ: ಬೇರೆಯವರ ಆಧಾರ್ ಕಾರ್ಡ್ ತೋರಿಸಿ ಟಿಕೆಟ್ ಪಡೆದುಕೊಳ್ಳಲು ಮುಂದಾದ ಮಹಿಳೆಗೆ ಇದು ನಿಮ್ಮ ಆಧಾರ ಕಾರ್ಡ್ ಅಲ್ಲ ನಿಮ್ಮದನ್ನು ಕೊಡಿ ಎಂದು ನಿರ್ವಾಹಕರು ಹೇಳಿದ್ದಕ್ಕೆ ಮಹಿಳೆ...
KSRTC: ಟೈರ್ ಬ್ಲಾಸ್ಟಾಗಿ ಮನೆಗೆ ನುಗ್ಗಿದ ಬಸ್-10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ತಿಪಟೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಟೈರ್ ಬ್ಲಾಸ್ಟ್ ಆಗಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಮನೆಗೆ ಬಸ್ ನುಗ್ಗಿದ ಘಟನೆ ತಾಲೂಕಿನ ಸಿದ್ದಾಪುರ...
ಕ್ರೂರವಾಗಿ ಮಹಿಳೆ ಕೊಲೆಗೈದು ಮೂಟೆಕಟ್ಟಿ ಕಸದ ಲಾರಿಯಲ್ಲಿಟ್ಟ ಪಾಪಿಗಳು ಎಸ್ಕೇಪ್
ಬೆಂಗಳೂರು: ಅತ್ಯಾಚಾರ ಮಾಡಿದ ಬಳಿಕ ಮಹಿಳೆಯನ್ನು ಅತ್ಯಂತ ಕ್ರೂರವಾಗಿ ಕೊಲೆಗೈದು ಮೂಟೆಕಟ್ಟಿ ಕಸದ ಲಾರಿಯಲ್ಲಿಟ್ಟು ದುಷ್ಕರ್ಮಿಗಳು ಎಸ್ಕೇಪ್ ಆಗಿರುವ ಘಟನೆ ಚನ್ನಮ್ಮನಕೆರೆ ಠಾಣಾ ವ್ಯಾಪ್ತಿಯ ಸ್ಕೇಟಿಂಗ್ ಗ್ರೌಂಡ್...