NEWSನಮ್ಮಜಿಲ್ಲೆನಮ್ಮರಾಜ್ಯ

BMTC ನೌಕರರಿಗೆ ₹1.50 ಕೋಟಿ ರೂ. ಅಪಘಾತ ಪರಿಹಾರ- ಜ.26ರಿಂದಲೇ ಜಾರಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ನಿಗಮದ ಅಧಿಕಾರಿಗಳು/ನೌಕರರು ಅಪಘಾತದಿಂದ ಅಸುನೀಗಿದರೆ ಅವರ ಅವಲಂಬಿತರಿಗೆ ಬರೋಬ್ಬರಿ 1.50 ಕೋಟಿ ರೂಪಾಯಿ ಅಪಘಾತ ಪರಿಹಾರ ನೀಡುವ ಯೋಜನೆ ಭಾನುವಾರದಿಂದ (ಜ.26) ಜಾರಿಗೆಯಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಕೆಎಸ್​ಆರ್​​ಟಿಸಿ ನೌಕರರು ಅಪಘಾತದಲ್ಲಿ ಮೃತಪಟ್ಟರೆ ಅವರ ಕುಟುಂಬದವರಿಗೆ 1 ಕೋಟಿ ರೂಪಾಯಿ ಅಪಘಾತ ಪರಿಹಾರ ನೀಡಲಾಗುತ್ತಿತ್ತು. ಆದರೆ ಬಿಎಂಟಿಸಿಯ ನೌಕರರು ಅಪಘಾತದಲ್ಲಿ ಮೃತಪಟ್ಟರೆ ಅವರ ಅವಲಂಬಿತರಿಗೆ 50 ಲಕ್ಷ ರೂಪಾಯಿ ಮಾತ್ರ ಪರಿಹಾರ ನೀಡಲಾಗುತ್ತಿತ್ತು.

ಈ ಪರಿಹಾರದಲ್ಲಿ ತಾರತಮ್ಯತೆ ಇದೆ ಎಂದು ನಿಮ್ಮ ವಿಜಯಪಥ ಸೇರಿದಂತೆ ಕೆಲ ಮಾಧ್ಯಮಗಳಲ್ಲೂ ಸುದ್ದಿ ಬಿತ್ತರವಾಗಿತ್ತು. ಈ ಎಲ್ಲವುಗಳನ್ನು ಮನಗಂಡು ನಾವು ಇದೀಗ ಬಿಎಂಟಿಸಿ ನೌಕರರಿಗೆ 1.50 ಕೋಟಿ ರೂಪಾಯಿ ಅಪಘಾತ ವಿಮೆ ನೀಡಲು ಸಂಸ್ಥೆಯಿಂದ ತೀರ್ಮಾನ ತೆಗೆದುಕೊಂಡಿದ್ದೇವೆ. ಮುಂದೆ ಇದು ಉಳಿದ ಸಾರಿಗೆಯ ಮೂರು ನಿಗಮಗಳಿಗೂ ಅನ್ವಯವಾಗುವ ನಿಟ್ಟಿನಲ್ಲೂ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಇನ್ನು ದೇಶದಲ್ಲಿ ಯಾವುದೇ ಸರ್ಕಾರಿ ನೌಕರರಿಗೂ ಈ ಸೌಲಭ್ಯವಿಲ್ಲ, ಸೇನೆಯಲ್ಲಿ ಸೇವೆ ಸಲ್ಲಿಸುವ ಯೋಧರು‌ ಕೂಡ ಪ್ರಾಣ ಕಳೆದುಕೊಂಡರೆ ಅವರ ಕುಟುಂಬದವರಿಗೆ 60 ಲಕ್ಷ ರೂಪಾಯಿ ನೀಡಲಾಗುತ್ತದೆ. ಆದರೆ, ಬಿಎಂಟಿಸಿ ನೌಕರರು ಅಪಘಾತದಲ್ಲಿ ಅಸುನೀಗಿದರೆ ಅವರಿಗೆ ಒಂದೂವರೆ ಕೋಟಿ ರೂ. ನೀಡಲಾಗುತ್ತದೆ. ಇದು ನೌಕರರ ಅವಲಂಭಿತರ ಆರ್ಥಿಕ ಸಮಸ್ಯೆ ನೀಗಿಸಲಿದೆ ಎಂದರು.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಸೂಚನೆ ಮೇರೆಗೆ ಈ ವಿಮೆ ಸೌಲಭ್ಯ ಜಾರಿ ಮಾಡಲಾಗಿದ್ದು, ಬಿಎಂಟಿಸಿ‌ಯ 28 ಸಾವಿರ ನೌಕರರ ಕುಟುಂಬಗಳಿಗೆ ಈ ವಿಮಾ ಸೌಲಭ್ಯ ದೊರೆಯಲಿದೆ. ಬಿಎಂಟಿಸಿಯ ನೌಕರರು ಕರ್ತವ್ಯದಲ್ಲಿರುವಾಗ ಅಥವಾ ಇಲ್ಲದಿದ್ದಾಗಲೂ ಸಂಭವಿಸುವ ಅಪಘಾತಕ್ಕೂ1.50 ಕೋಟಿ ರೂಪಾಯಿ ಪರಿಹಾರ ಸಿಗುತ್ತದೆ ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರಾಮಚಂದ್ರನ್‌ ತಿಳಿಸಿದ್ದಾರೆ.

ಸಹಜ ಸಾವಿನ ಪರಿಹಾರದ 3 ಲಕ್ಷದಿಂದ 10 ಲಕ್ಷಕ್ಕೆ ಹೆಚ್ಚಳ: ಬಿಎಂಟಿಸಿ ಸಿಬ್ಬಂದಿ ಸಹಜವಾಗಿ ಸಾವನ್ನಪ್ಪಿದರೆ 10 ಲಕ್ಷ ರೂಪಾಯಿ ಪರಿಹಾರ ನೀಡಲಾಗುತ್ತದೆ. ಈ ಹಿಂದೆ ಮೂರು ಲಕ್ಷ ರೂಪಾಯಿ ಪರಿಹಾರ ನೀಡಲಾಗುತ್ತಿತ್ತು. ಒಟ್ಟಿನಲ್ಲಿ ಹಗಲು ರಾತ್ರಿ ತಮ್ಮ ಪ್ರಾಣದ ಹಂಗು ತೊರೆದು ಡ್ಯೂಟಿ ಮಾಡುವ ಚಾಲಕ, ನಿರ್ವಾಹಕರು ಅಪಘಾತದಲ್ಲಿ ಮೃತಪಟ್ಟರೆ ಅವರ ಕುಟುಂಬಕ್ಕೆ ಒಂದೂವರೆ ಕೋಟಿ ರುಪಾಯಿ ಪರಿಹಾರ ನೀಡಲು ಮುಂದಾಗಿರುವುದು ಒಳ್ಳೆಯ ಬೆಳವಣಿಗೆ ಎಂದು ಸಾರಿಗೆ ನೌಕರರ ಎಲ್ಲ ಸಂಘಟನೆಗಳ ಮುಖಂಡರು ಶ್ಲಾಘಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ