NEWSಕ್ರೀಡೆದೇಶ-ವಿದೇಶ

ಟಿ20 ಸರಣಿಯಲ್ಲಿ ಗಂಟೆಗೆ 156ಕಿ.ಮೀ. ವೇಗದಲ್ಲಿ ಬೌಲಿಂಗ್ ಮಾಡಿ ದಾಖಲೆ ಬರೆದ ಉಮ್ರಾನ್ ಮಲಿಕ್

ವಿಜಯಪಥ ಸಮಗ್ರ ಸುದ್ದಿ

ಗುವಾಹಟಿ: ಜಮ್ಮು-ಕಾಶ್ಮೀರ ಮೂಲದ ಬೌಲರ್ ಉಮ್ರಾನ್ ಮಲಿಕ್ ತನ್ನ ವೇಗದ ಬೌಲಿಂಗ್ ಮೂಲಕ ಐಪಿಎಲ್‍ನಲ್ಲಿ (IPL) ಮಿಂಚಿ ಬಳಿಕ ಟೀಂ ಇಂಡಿಯಾಗೆ ಎಂಟ್ರಿ ಕೊಟ್ಟ ಆಟಗಾರ. ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲಿ ಗಂಟೆಗೆ 156ಕಿ.ಮೀ ವೇಗದಲ್ಲಿ ಬೌಲಿಂಗ್ ಮಾಡುವ ಮೂಲಕ ದಾಖಲೆ ಬರೆದಿದ್ದಾರೆ.

ಟೀಂ ಇಂಡಿಯಾ ವೇಗಿ ಎಂದೆ ಕರೆಸಿಕೊಳ್ಳುವ ಉಮ್ರಾನ್ ಮಲಿಕ್ ಮಂಗಳವಾರ ಗುವಾಹಟಿಯಲ್ಲಿ ಶ್ರೀಲಂಕಾ ವಿರುದ್ಧ ನಡೆದ ಏಕದಿನ ಸರಣಿಯ ಮೊದಲ ಪಂದ್ಯದಲ್ಲೇ ಗಂಟೆಗೆ 156 ಕಿ.ಮೀ ವೇಗದಲ್ಲಿ ಬೌಲಿಂಗ್ ಮಾಡಿದ್ದಾರೆ. ಈ ಮೂಲಕ ಭಾರತ ವೇಗದ ಬೌಲರ್ ಎಂಬ ದಾಖಲೆ ಬರೆದಿದ್ದಾರೆ. ಶ್ರೀಲಂಕಾ ವಿರುದ್ಧ 14ನೇ ಓವರ್ ಎಸೆಯಲು ಬಂದ ಉಮ್ರಾನ್ ಮಲಿಕ್ ತನ್ನ ಸರದಿಯ ಎರಡನೇ ಓವರ್‌ನಲ್ಲಿ 156 ಕಿ.ಮೀ ವೇಗದ ಎಸೆತ ದಾಖಲಿಸಿದ್ದಾರೆ.

ಈ ಹಿಂದೆ ಗಂಟೆಗೆ 153.36 ಕಿ.ಮೀ ವೇಗದಲ್ಲಿ ಬೌಲಿಂಗ್ ಮಾಡಿದ್ದ ಜಸ್ಪ್ರೀತ್ ಬುಮ್ರಾ ಭಾರತದ ವೇಗದ ಬೌಲರ್ ಎಂಬ ದಾಖಲೆಯನ್ನು ಮಾಡಿದ್ದರು. ಇದೀಗ ಉಮ್ರಾನ್ ಮಲಿಕ್ ಆ ದಾಖಲೆಯನ್ನು ಪುಡಿಗಟ್ಟಿ ತಮ್ಮ ಹೆಸರಿನ ಹಿಂದೆ ನೂತನ ದಾಖಲೆ ಬರೆದು ಕ್ರಿಕೆಟ್‌ ಪ್ರೇಮೆಗಳ ಮನದಲ್ಲಿ ಹಚ್ಚಳಿಯದೆ ಉಳಿದಿದ್ದಾರೆ.

ಟೀಂ ಇಂಡಿಯಾ ವೇಗಿಗಳ ಪೈಕಿ ಮೊಹಮ್ಮದ್ ಶಮಿ ಅತಿ ವೇಗದ ಬೌಲಿಂಗ್‍ನಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಶಮಿ ಗಂಟೆಗೆ 153.3 ಕಿ.ಮೀ ವೇಗದಲ್ಲಿ ಬೌಲಿಂಗ್ ಮಾಡಿದ್ದಾರೆ. ನವದೀಪ್ ಸೈನಿ ಗಂಟೆಗೆ 152.85 ಕಿ.ಮೀ ವೇಗದಲ್ಲಿ ಬೌಲಿಂಗ್ ಮಾಡಿ ವೇಗದ ಬೌಲರ್‌ಗಳ ದಾಖಲೆಯ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದಿದ್ದಾರೆ.

ಶ್ರೀಲಂಕಾ ವಿರುದ್ಧ ಬ್ಯಾಟಿಂಗ್‍ನಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಶುಭಮನ್ ಗಿಲ್ ಮಿಂಚಿದರೆ, ಬೌಲಿಂಗ್‍ನಲ್ಲಿ ಉಮ್ರಾನ್ ಮಲಿಕ್, ಸಿರಾಜ್ ಭರ್ಜರಿ ಆಟ ಪ್ರದರ್ಶಿಸಿದರು. ಈ ಮೂಲಕ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ 1-0 ಮುನ್ನಡೆ ಕಾಯ್ದುಕೊಂಡಿದೆ.

ಇನ್ನು ಪಂದ್ಯದಲ್ಲಿ ವೇಗದ ಎಸೆತದ ದಾಖಲೆಯೊಂದಿಗೆ ಉಮ್ರಾನ್ ಮಲಿಕ್ 3 ವಿಕೆಟ್ ಪಡೆದು ಭಾರತದ 67 ರನ್‍ಗಳ ದೊಡ್ಡ ಮೊತ್ತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

Leave a Reply

error: Content is protected !!
LATEST
KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್ ದೆಹಲಿ ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಅತಿಶಿ: ಎಎಪಿ ನಾಯಕರ ಸಭೆಯಲ್ಲಿ ನಿರ್ಧಾರ BMTC 1500 ನಿವೃತ್ತ ನೌಕರರ ಗ್ರಾಚ್ಯುಟಿ, EL ಹಣ 400 ಕೋಟಿ ರೂ.ಬಾಕಿ: 16-18 ತಿಂಗಳಿನಿಂದ ಕೇಂದ್ರ ಕಚೇರಿಗೆ ಅಲೆದಾಟ!! ಸುಪ್ರೀಂ ಕೋರ್ಟ್ ಅಧಿಕೃತ  ಭಾಷೆ ಇಂಗ್ಲಿಷ್- ಹಿಂದಿಯಲ್ಲಿ ವಾದಕ್ಕೆ ಅನುಮತಿ ಇಲ್ಲ: ವಕೀಲರಿಗೆ ನೆನಪಿಸಿದ ಕೋರ್ಟ್‌ ಕೃಷಿ ಉತ್ಪನ್ನಗಳ ಬೆಂಬಲ ಬೆಲೆಗಿಂತ ಕಡಿಮೆ ದರಕ್ಕೆ ಖರೀದಿ ಮಾಡದಂತ ಕಟ್ಟುನಿಟ್ಟಿನ ಕಾನೂನು ಜಾರಿಗೆ ರೈತ ಮುಖಂಡರ ಆಗ್ರಹ KSRTC ಬಸ್‌ -ಕಾರು ನಡುವೆ ಅಪಘಾತ: ಅನಾರೋಗ್ಯದ ನಡುವೆ ಕಾರು ಚಲಾಯಿಸಿದ ಪತಿ ಮೃತ- ಪತ್ನಿ ಪ್ರಾಣಾಪಾಯದಿಂದ ಪಾರು