NEWSಉದ್ಯೋಗದೇಶ-ವಿದೇಶನಮ್ಮರಾಜ್ಯ

160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ

ವಿಜಯಪಥ ಸಮಗ್ರ ಸುದ್ದಿ
  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ- 2024ರ ಸೆ. 21. ಅರ್ಜಿ ಸಲ್ಲಿಸಲು ಕೊನೆ ದಿನಾಂಕ- 2024ರ ಅ.  21

ನ್ಯೂಡೆಲ್ಲಿ: ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ (ತಾಂತ್ರಿಕ) ಹುದ್ದೆಗಳಿಗೆ ಭಾರತ ಸರ್ಕಾರ ಅರ್ಜಿಗಳನ್ನು ಆಹ್ವಾನಿಸಿದೆ.

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಬಿಡುಗಡೆಗೊಂಡಿರುವ ಅಧಿಕೃತ ಅಧಿಸೂಚನೆಯನ್ನು ಗಮನಿಸಿ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಸೆಕ್ರೆಟರಿಯೇಟ್‌ನಲ್ಲಿ ಗ್ರೂಪ್ ಬಿ, ಗೆಜೆಟೆಡ್ ಅಲ್ಲದ ವರ್ಗದಲ್ಲಿನ ಖಾಲಿ ಹುದ್ದೆಗಳನ್ನು ಸದ್ಯಕ್ಕೆ ಭರ್ತಿ ಮಾಡಲಾಗುತ್ತಿದೆ. ಹೀಗಾಗಿ ಅಧಿಸೂಚನೆಯಲ್ಲಿ ನೀಡಲಾಗಿರುವ ಎಲ್ಲ ವಿವರಗಳನ್ನು ಅಭ್ಯರ್ಥಿಗಳು ಸರಿಯಾಗಿ ಮನನ ಮಾಡಿಕೊಳ್ಳಬೇಕು.

ವಯೋಮಿತಿ, ವಿದ್ಯಾರ್ಹತೆ, ಆಯ್ಕೆ ಪ್ರಕ್ರಿಯೆ, ಅರ್ಜಿ ಶುಲ್ಕ ಸೇರಿದಂತೆ ಇತರೆ ಮಾಹಿತಿಯನ್ನು ಇಲ್ಲಿ ನೀಡಲಾಗಿದ್ದು ಆಸಕ್ತರು ಸರಿಯಾಗಿ ಗಮನಿಸಿ ಹುದ್ದೆಗಳಿಗೆ ಅಪ್ಲೇ ಮಾಡಿ. ಈ ಹುದ್ದೆಗೆ ಸಂಬಂಧಿಸಿದ ಲಿಂಕ್ ಹಾಗೂ ದಿನಾಂಕಗಳ ವಿವರವನ್ನು ಕೆಳಗೆ ನೀಡಲಾಗಿದೆ. ಹುದ್ದೆಯ ಫಾರ್ಮ್​ ಡೌನ್​​ಲೋಡ್ ಮಾಡಿಕೊಂಡು ಅದನ್ನು ಇಲಾಖೆಗೆ ಕಳುಹಿಸಬೇಕು.

ವೇತನ: ತಿಂಗಳಿಗೆ ಸಂಬಳ- 95,000 ರೂಪಾಯಿ. ಹುದ್ದೆಯ ಹೆಸರು- ಡೆಪ್ಯೂಟಿ ಫೀಲ್ಡ್ ಆಫೀಸರ್ (ಟೆಕ್ನಿಕಲ್). ಒಟ್ಟು ಪೋಸ್ಟ್​ಗಳು- 160. ಉದ್ಯೋಗದ ಸ್ಥಳ- ದೆಹಲಿ.

ವಯಸ್ಸಿನ ಮಿತಿ: 30 ವರ್ಷದ ಒಳಗಿನ ಅಭ್ಯರ್ಥಿಗಳಿಗೆ ಅವಕಾಶ. ಇನ್ನು ಎಸ್​​ಸಿ, ಎಸ್​ಟಿ, ಒಬಿಸಿ ಸರ್ಕಾರಿ ಅಧಿಕಾರಿಗಳು, ಮಾಜಿ ಸೈನಿಕರಿಗೆ ವಯೋಮಿತಿ ಸಡಿಲಿಕೆ ಇದೆ.

ವಿದ್ಯಾರ್ಹತೆ: ಇಂಜಿನಿಯರಿಂಗ್ ಅಥವಾ ಟೆಕ್ನಾಲಜಿಯಲ್ಲಿ ಪದವಿ ಪೂರ್ಣ ಆಗಿರಬೇಕು ಅಥವಾ ವಿಜ್ಞಾನ ವಿಭಾಗದಲ್ಲಿ ಮಾಸ್ಟರ್ ಡಿಗ್ರಿ . GATE ಅಲ್ಲಿ ಪಡೆದ ಅಂಕಗಳನ್ನು ಮುಖ್ಯವಾಗಿ ಪರಿಗಣಿಸಲಾಗುತ್ತದೆ.

ಆಯ್ಕೆ ಪ್ರಕ್ರಿಯೆ ಹೇಗೆ ನಡೆಯುತ್ತದೆ..?: ಅಭ್ಯರ್ಥಿಗಳ ಮೆರಿಟ್ ಲಿಸ್ಟ್ ಸಿದ್ಧಪಡಿಸಲಾಗುತ್ತದೆ. ಬಳಿಕ ಸಂದರ್ಶನ ಏರ್ಪಡಿಸಲಾಗುತ್ತದೆ. ಅರ್ಜಿಯಲ್ಲಿ ಸಂದರ್ಶನದ ಸ್ಥಳ ಅಭ್ಯರ್ಥಿಗಳೇ ನಿರ್ಧರಿಸಬೇಕು. GATE ಅಲ್ಲಿ ಪಡೆದ ಅಂಕಗಳು ಹಾಗೂ ಸಂದರ್ಶನದಲ್ಲಿನ ಪರ್ಫಾಮೆನ್ಸ್​ ನೋಡಿ ಆಯ್ಕೆ ಮಾಡಲಾಗುತ್ತದೆ.

ಫಾರ್ಮ್​ ಜೊತೆ ಯಾವ್ಯಾವ ದಾಖಲೆಗಳನ್ನು ನೀಡಬೇಕು..?: ಅರ್ಜಿಯನ್ನು ಸಂಪೂರ್ಣವಾಗಿ ಭರ್ತಿ ಮಾಡಬೇಕು. SSLC, ಸೆಕೆಂಡ್ ಪಿಯುಸಿ, ಪದವಿ ಅಂಕ ಪಟ್ಟಿಗಳು. GATE ಅಲ್ಲಿ ಪಡೆದ ಅಂಕ ಪಟ್ಟಿ. ಜಾತಿ ಪ್ರಮಾಣಪತ್ರ. ಎಲ್ಲಿಯಾದರೂ ಕೆಲಸ ಮಾಡುತ್ತಿದ್ದರೇ ಎನ್​​ಒಸಿ ಕೊಡಬಹುದು. ಮಾಜಿ ಸೈನಿಕ ಆಗಿದ್ದರೇ ಸರ್ಟಿಫಿಕೆಟ್. ಇತ್ತೀಚಿನ 2 ಪಾಸ್​​ಪೋರ್ಟ್​ ಫೋಟೋಗಳು.

ಅರ್ಜಿ ಫಾರ್ಮ್‌ಗಾಗಿ ಈ ಲಿಂಕ್​ಗೆ ಭೇಟಿ ನೀಡಿ-https://drive.google.com/file/d/1f8jIBTktisgg4D38HnpGpl1F_bNBR0gG/view   ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ- ಸೆಪ್ಟೆಂಬರ್ 21. ಅರ್ಜಿ ಸಲ್ಲಿಸಲು ಕೊನೆ ದಿನಾಂಕ- ಅಕ್ಟೋಬರ್ 21.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು