NEWSನಮ್ಮಜಿಲ್ಲೆ

170 ಲಕ್ಷ ರೂ. ವೆಚ್ಚದಲ್ಲಿ ಕುಡಿಯುವ ನೀರಿನ ಕಾಮಗಾರಿಗೆ ಅನುಮೋದನೆ 

96 ಕಾಮಗಾರಿಗಳಿಗೆ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಧ್ಯಕ್ಷತೆಯಲ್ಲಿ ಒಪ್ಪಿಗೆ

ವಿಜಯಪಥ ಸಮಗ್ರ ಸುದ್ದಿ

ರಾಮನಗರ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ಕೈಗೊಳ್ಳಲಾಗುವ 170 ಲಕ್ಷ ರೂ. ವೆಚ್ಚದಲ್ಲಿ 96 ಕಾಮಗಾರಿಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಇಕ್ರಂ  ಅಧ್ಯಕ್ಷತೆಯಲ್ಲಿ ಬುಧವಾರ ಜಿಪಂ ಸಭಾಂಗಣದಲ್ಲಿ ನಡೆದ ಜಿಲ್ಲಾ ನೀರು ಸರಬರಾಜು ಮತ್ತು ನೈರ್ಮಲ್ಯ ಮಿಷನ್ ಸಭೆಯಲ್ಲಿ ಅನುಮೋದನೆ ನೀಡಲಾಯಿತು.

ಬರಪೀಡಿತ ತಾಲೂಕುಗಳಿಗೆ ಮೊದಲ ಕಂತಿನಲ್ಲಿ 50 ಲಕ್ಷ ರೂ. ಹಾಗೂ ಎರಡನೇ ಕಂತಿನಲ್ಲಿ 25 ಲಕ್ಷ ರೂ. ನೀಡಲಾಗಿರುತ್ತದೆ. ಉಳಿದ ತಾಲೂಕುಗಳಿಗೆ ಎರಡು ಕಂತಿನಲ್ಲೂ ತಲಾ 10 ಲಕ್ಷ ರೂ. ನೀಡಲಾಗಿರುತ್ತದೆ.

ಮೊದಲ ಕಂತಿನಲ್ಲಿ ನೀಡಲಾಗಿರುವ ಅನುದಾನದಲ್ಲಿ ರಾಮನಗರ ತಾಲೂಕಿನಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ 26 ಕಾಮಗಾರಿಗಳನ್ನು, ಕನಕಪುರ ತಾಲೂಕಿನಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ 25 ಕಾಮಗಾರಿಗಳನ್ನು, ಮಾಗಡಿ ತಾಲೂಕಿನಲ್ಲಿ 10 ಲಕ್ಷ ರೂ. ವೆಚ್ಚದಲ್ಲಿ 5 ಕಾಮಗಾರಿಗಳನ್ನು, ಚನ್ನಪಟ್ಟಣ ತಾಲೂಕಿನಲ್ಲಿ 10 ಲಕ್ಷ ರೂ.ಗಳ ವೆಚ್ಚದಲ್ಲಿ 5 ಕಾಮಗಾರಿಗಳನ್ನು ಕೈಗೊಳ್ಳಲು ಅನುಮೋದನೆ ನೀಡಲಾಯಿತು.

ಎರಡನೇ ಕಂತಿನಲ್ಲಿ ನೀಡಲಾಗಿರುವ ಅನುದಾನದಲ್ಲಿ ರಾಮನಗರ ತಾಲ್ಲೂಕಿನಲ್ಲಿ 25 ಲಕ್ಷ ರೂ. ವೆಚ್ಚದಲ್ಲಿ 12 ಕಾಮಗಾರಿ, ಕನಕಪುರ ತಾಲೂಕಿನಲ್ಲಿ 25 ಲಕ್ಷ ರೂ. ವೆಚ್ಚದಲ್ಲಿ 13 ಕಾಮಗಾರಿ, ಮಾಗಡಿ ತಾಲೂಕಿನಲ್ಲಿ 10 ಲಕ್ಷ ರೂ. ವೆಚ್ಚದಲ್ಲಿ 5 ಕಾಮಗಾರಿ ಹಾಗೂ ಚನ್ನಪಟ್ಟಣ ತಾಲೂಕಿನಲ್ಲಿ 10 ಲಕ್ಷ ರೂ. ವೆಚ್ಚದಲ್ಲಿ 5 ಕಾಮಗಾರಿಗಳನ್ನು ಕೈಗೊಳ್ಳಲು ಅನುಮೋದನೆ ನೀಡಲಾಯಿತು.

ಜಿಪಂ ಉಪಕಾರ್ಯದರ್ಶಿ ಉಮೇಶ್, ಜಂಟಿ ಕೃಷಿ ನಿರ್ದೇಶಕ ಕೆ.ಎಚ್. ರವಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಸೋಮಸುಂದರ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿಯಂತರ  ಚಂದ್ರಹಾಸ್  ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ