1ರಿಂದ 9ನೇ ತರಗತಿ ಮಕ್ಕಳಿಗೆ ಆಹಾರ ಧಾನ್ಯ ವಿತರಣೆ

ವಿಜಯಪಥ ಸಮಗ್ರ ಸುದ್ದಿ

ಬೀದರ್‌: ನೊವೆಲ್ ಕರೋನಾ ವೈರಸ್ ಕೋವಿಡ್-19 ವೈರಸ್ ಸೋಂಕು ತಡೆಗಟ್ಟಲು ಹಾಗೂ ನಿಯಂತ್ರಿಸಲು 1ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ರಜೆ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ, ಪ್ರಸ್ತುತ ರಜಾ ಅವಧಿಯಲ್ಲಿ ಕೂಡ ಮಧ್ಯಾಹ್ನದ ಬಿಸಿಊಟ ಒದಗಿಸಲು ಸರ್ಕಾರ ಆದೇಶಿಸಿದೆ.

vijayapatha.in - ವಿಜಯಪಥ.ಇನ್‌ ನಿಮಗೆ ವಿಶ್ವಾಸನೀಯ ಸುದ್ದಿಗಳನ್ನು ಪ್ರಸಾರ ಮಾಡುತ್ತಿದೆ ಎಂದು ಅನಿಸಿದರೆ ನಮಗೆ ಆರ್ಥಕವಾಗಿ ಬಲ ನೀಡಿ. ಇನ್ನಷ್ಟು ಸತ್ಯನಿಷ್ಠ ವರದಿಗಳನ್ನು ಮಾಡುವುದಕ್ಕೆ ಬೆಂಬಲ ನೀಡಿ.   ಕನಿಷ್ಠ 100 ರೂ. ಒಮ್ಮೆಗೆ ಹಾಕಿ. ನಮ್ಮನ್ನು ಪ್ರೋತ್ಸಾಹಿಸಿ. 

ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ಒದಗಿಸಲು ಪ್ರತಿ ಮಗುವಿಗೆ ದಿನವೊಂದಕ್ಕೆ ನಿಗದಿಯಾದ ಆಹಾರ ಪದಾರ್ಥದ ಪರಿಮಾಣದಂತೆ ಒಟ್ಟು 21 ದಿನಗಳಿಗೆ ಲೆಕ್ಕಾಚಾರ ಮಾಡಿ ಅಕ್ಕಿ ಮತ್ತು ತೊಗರಿ ಬೇಳೆ ಆಹಾರ ಪದಾರ್ಥಗಳನ್ನು ಒಂದೇ ಬಾರಿಗೆ ಆಯಾ ಮಕ್ಕಳ ಮನೆಗೆ ನೀಡಬೇಕು ಎಂದು ತಿಳಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಈ ಪ್ರಕ್ರಿಯೆ ಎಲ್ಲಾ ಜಿಲ್ಲೆಗಳ ಆಯಾ ಶಾಲೆಗಳಲ್ಲಿ ಹೇಗೆ ನಡೆಯುತ್ತಿದೆ?. ಮುಖ್ಯ ಶಿಕ್ಷಕರು ಮತ್ತು ಶಿಕ್ಷಕರು ಕಡ್ಡಾಯ ಹಾಜರಿದ್ದು ಆಹಾರ ಧಾನ್ಯ ವಿತರಣೆಗೆ ಕ್ರಮ ವಹಿಸುತ್ತಿದ್ದಾರೋ? ಇಲ್ಲವೋ? ಎಂಬುದರ ಬಗ್ಗೆ ಪರಿಶೀಲನೆ ನಡೆಸಲು ಜಿಲ್ಲಾ ಮಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿವಿಧ ಶಾಲೆಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

ಅದರಂತೆ ಬೀದರ ನೌಬಾದ್ ಪ್ರದೇಶದಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆ, ಹಿಮಾಲಯ  ಕಾನ್ವೆಂಟ್ ಪ್ರೈಮರಿ ಶಾಲೆ ಮತ್ತು ಅಲಿಯಾಬಾದ್ ಗ್ರಾಮದಲ್ಲಿ ಇರುವ ಸರ್ಕಾರಿ ಪ್ರಾಥಮಿಕ (ಕನ್ನಡ ಮತ್ತು ಉರ್ದು) ಶಾಲೆಗಳಿಗೆ ಭೇಟಿ ನೀಡಿದ ಸಿಇಒ ಜ್ಞಾನೇಂದ್ರ ಗಂಗವಾರ ಆಹಾರಧಾನ್ಯ ವಿತರಣೆಗೆ ನಡೆಯುತ್ತಿರುವ ಪ್ರಕ್ರಿಯೆ ಮತ್ತು ಮೇಲುಸ್ತುವಾರಿ ಕ್ರಮಗಳನ್ನು ಪರಿಶೀಲಿಸಿದರು.

ಪ್ರತಿ ಮಗುವಿಗೂ ಒಟ್ಟು 21 ದಿನಗಳ ಸಂಖ್ಯೆಗೆ ಅನುಗುಣವಾಗಿ ಸಮರ್ಪಕವಾಗಿ ತೂಕ ಮಾಡಿ ಆಹಾರ ಧಾನ್ಯಗಳನ್ನು ಸಣ್ಣ ಪ್ಯಾಕೇಟ್ ಬ್ಯಾಗ ಅಥವಾ ಚೀಲಗಳಲ್ಲಿ ಮನೆಮನೆಗೆ ಹೋಗಿ ವಿತರಿಸಬೇಕು. ಸಂಬಂಧಿಸಿದ ಸಿಆರ್ ಸಿ ಗಳು ಅವರ ಕ್ಲಸ್ಟರ್ ವ್ಯಾಪ್ತಿಯಲ್ಲಿ ಎಲ್ಲಾ ಶಾಲೆಗಳಿಂದ ವರ್ಗವಾರು ಆಹಾರ ಧಾನ್ಯಗಳು ವಿತರಿಸಿದ ಪಟ್ಟಿಯನ್ನು ತಾಪಂನ ಮದ್ಯಾಹ್ನ ಉಪಹಾರ ಯೋಜನೆಯ ಸಹಾಯಕ ನಿರ್ದೇಶಕರಿಗೆ ಸಲ್ಲಿಸಬೇಕು.

ಯಾವುದೇ ಕಾರಣಕ್ಕೆ ಕರೋನಾ ವೈರಸ್ ಹರಡದಂತೆ ದೇಶಾದ್ಯಂತ ನಿರ್ದೇಶಿಸಿರುವ ಎಚ್ಚರಿಕೆಯ ಎಲ್ಲ ಕ್ರಮಗಳನ್ನು ಪಾಲಿಸಬೇಕು. ಶಾಲಾ ಹಂತದಲ್ಲಿ ಪಾಲಕರ ಮತ್ತು ಗುಂಪುಗೊಳ್ಳುವ ಅವಕಾಶ ನೀಡಬಾರದು. ಮನೆಮನೆಗೆ ಹೋಗಿ ಧಾನ್ಯಗಳನ್ನು ವಿತರಿಸುವ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಮುಖ್ಯ ಶಿಕ್ಷಕರು, ತರಗತಿ ಶಿಕ್ಷಕರು ಮತ್ತು ಸಿಆರ್ ಪಿಗಳು ಈ ಬಗ್ಗೆ ಗಮನ ಹರಿಸಿ, ಅಹಾರ ಧಾನ್ಯಗಳ ವಿತರಣೆಯಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಬೇಕು ಎಂದು ಸಿಇಒ ತಿಳಿಸಿದರು. ಈ ವೇಳೆ ಮಧ್ಯಾಹ್ನ ಬಿಸಿಯೂಟ ಯೋಜನೆಯ ಅಧಿಕಾರಿ ಇನಾಯತ್ ಅಲಿ ಶಿಂಧೆ ಇದ್ದರು.

ಅಂಗನವಾಡಿಗೂ ಸಿಇ ಭೇಟಿ
ಸಿಇಒ ಗಂಗವಾರ  ನೌಬಾದ್ ಪ್ರದೇಶದಲ್ಲಿನ ಅಂಗನವಾಡಿಗಳಿಗೂ ಭೇಟಿ ನೀಡಿದರು. ಮಕ್ಕಳು ಗುಂಪಾಗಿ ಬರುವ ಕಾರಣ ಕೊರೊನಾ ವೈರಸ್ ಸೋಂಕು ಹರಡುವ ಕಾರಣದಿಂದ 1ರಿಂದ 9ನೇ ಮಕ್ಕಳಿಗೆ ಪ್ರಸ್ತುತ ರಜಾ ಅವಧಿಯಲ್ಲಿ ಮಧ್ಯಾಹ್ನದ ಉಪಾಹಾರದ ಆಹಾರ ಧಾನ್ಯಗಳನ್ನು ಒಂದೇ ಬಾರಿಗೆ ಮಕ್ಕಳ ಮನೆಗೆ ನೀಡುವ ಮಾದರಿಯಲ್ಲಿಯೇ ಅಂಗನವಾಡಿ ಮಕ್ಕಳಿಗೂ ಕೂಡ ಅವರ ಮನೆಗೆ ಆಹಾರ ಧಾನ್ಯಗಳ ವಿತರಣೆಗೆ ಕ್ರಮ ವಹಿಸಬೇಕು ಎಂದು ತಿಳಿಸಿದರು.

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು!