NEWSಆರೋಗ್ಯ

2 ಕೋಟಿ ರೂ. ವೆಚ್ಚದಲ್ಲಿ ಪ್ರಯೋಗಾಲಯ ನಿರ್ಮಾಣ

ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ಮಡಿಕೇರಿ: ಕೊರೊನಾ ಸೋಂಕು ದೃಢಪಟ್ಟು ಗುಣಮುಖರಾಗಿ, ಮನೆಗೆ ತೆರಳಿದ್ದ ವ್ಯಕ್ತಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದು, ಆ ವ್ಯಕ್ತಿಯ ಗಂಟಲ ದ್ರವ, ರಕ್ತದ ಮಾದರಿಯನ್ನು ವೈದ್ಯರು ಪರೀಕ್ಷೆಗೆ ಕಳುಹಿಸಿದ್ದು, ಎರಡು ಮೂರು ದಿನದಲ್ಲಿ ವರದಿ ಬರಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ  ತಿಳಿಸಿದ್ದಾರೆ.

ನಗರದ ನೂತನ ಜಿ.ಪಂ.ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು ಜ್ವರದಿಂದ ಬಳಲುತ್ತಿರುವೆ ಎಂದು ಆ ವ್ಯಕ್ತಿ ಮತ್ತೆ ಜಿಲ್ಲೆಯ ಕೋವಿಡ್ 19 ಆಸ್ಪತ್ರೆಯ ಐಸೋಲೇಷನ್ ವಾರ್ಡ್‍ಗೆ ದಾಖಲಾಗಿದ್ದಾರೆ. ಸದ್ಯ ಆ ವ್ಯಕ್ತಿಯ ಗಂಟಲ ದ್ರವ, ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಸಾರ್ವಜನಿಕರು ಯಾವುದೇ ಆತಂಕ ಪಡುವುದು ಬೇಡ ಎಂದರು.

ಜಿಲ್ಲೆಯಲ್ಲಿ ಶೇ.80ರಷ್ಟು ಆಹಾರ ಧಾನ್ಯ ಪೂರೈಕೆ ಕಾರ್ಯ ಮುಗಿದಿದ್ದು, ಸದ್ಯದಲ್ಲಿಯೇ ಎಲ್ಲಾ ಸಾರ್ವಜನಿಕರಿಗೂ ಸಹ ಪಡಿತರ ವಿತರಿಸಲಾಗುವುದು ಎಂದು ತಿಳಿಸಿದರು.

ಕೊರೊನಾ ವೈರಸ್ ಪತ್ತೆ ಹಚ್ಚುವ ಸಲುವಾಗಿ ಮೈಸೂರಿಗೆ ಸೋಂಕಿತರ ಗಂಟಲು ದ್ರವ ಮತ್ತು ರಕ್ತದ ಮಾದರಿಯನ್ನು ಕಳುಹಿಸಲಾಗುತ್ತಿತ್ತು. ಇದರಿಂದ ವರದಿ ಬರುವುದು ತಡವಾಗುತ್ತಿದೆ. ಈ ನಿಟ್ಟಿನಲ್ಲಿ ಮೇ ಅಂತ್ಯದೊಳಗೆ 2 ಕೊಟಿ ರೂ. ವೆಚ್ಚದಲ್ಲಿ ಕೊರೊನಾ ವೈರಸ್ ಮಾದರಿ ಪತ್ತೆ ಹಚ್ಚುವ ಪ್ರಯೋಗಾಲಯವನ್ನು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ನಿರ್ಮಾಣ ಮಾಡಲಾಗುವುದು ಎಂದರು.

ಬಳಿಕ ಜಿಲ್ಲಾಡಳಿತ ವಶಕ್ಕೆ ಪಡೆದಿರುವ ನಗರದ ಅಶ್ವಿನಿ ಆಸ್ಪತ್ರೆಗೆ ಭೇಟಿ ನೀಡಿ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಬಗ್ಗೆ ಸಚಿವರು ಪರಿಶೀಲಿಸಿದರು.

ಶಾಸಕರಾದ ಕೆ.ಜಿ ಬೋಪಯ್ಯ, ಎಂ.ಪಿ.ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಸದಸ್ಯರಾದ ಸುನೀಲ್ ಸುಬ್ರಮಣಿ, ಜಿ.ಪಂ ಅಧ್ಯಕ್ಷರಾದ ಬಿ.ಎ.ಹರೀಶ್, ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಸುಮನ್ ಡಿ.ಪಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹ, ಉಪ ವಿಭಾಗಾಧಿಕಾರಿಗಳಾದ ಟಿ.ಜವರೇಗೌಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ಕೊಡಗು ವೈದ್ಯಕೀಯ ಸಂಸ್ಥೆಯ ನಿರ್ದೇಶಕರಾದ ಡಾ.ಕಾರ್ಯಪ್ಪ, ನಾನಾ ಇಲಾಖೆಯ ಅಧಿಕಾರಿಗಳು ಇತರರು ಇದ್ದರು.

ಲಾಕ್ ಡೌನ್ ಪರಿಣಾಮಗಳು ಏನೇ ಇದ್ದರೂ ಜಿಲ್ಲೆಯ ಜನತೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆಂದು ಸಚಿವರು ಶ್ಲಾಘಿಸಿದರಲ್ಲದೆ, ಮುಂದೆಯೂ ಇದೇ ರೀತಿ ಸಹಕಾರ ನೀಡುವ ಮೂಲಕ ಕೊರೋನಾ ಸೋಂಕು ಜಿಲ್ಲೆಗೆ ಬಾರದಂತೆ ಜಾಗ್ರತೆವಹಿಸುವಂತೆ ಮನವಿ ಮಾಡಿದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ