NEWSಕೃಷಿನಮ್ಮಜಿಲ್ಲೆ

ಕೊಳವೆ ಬಾವಿಗೆ ಬಿದ್ದಿರುವ 2 ವರ್ಷದ ಸಾತ್ವಿಕ್ : ಬದುಕಿ ಬಾ ಕಂದ

ವಿಜಯಪಥ ಸಮಗ್ರ ಸುದ್ದಿ

ವಿಜಯಪುರ: ಇಂಡಿ ತಾಲೂಕಿನ ಲಚ್ಯಾನ ಗ್ರಾಮದ ತೋಟದಲ್ಲಿ ಆಟವಾಡುತ್ತಿದ್ದ ಕಂದ ಆಯತಪ್ಪಿ ಕೊಳವೆ ಬಾವಿಗೆ ಬಿದ್ದಿದೆ. 16 ಅಡಿಯ ಕೊಳವೆ ಬಾವಿಗೆ ಬಿದ್ದಿರುವ 2 ವರ್ಷದ ಸಾತ್ವಿಕ್​ಗಾಗಿ ರಾಜ್ಯಾದ್ಯಂತ ಜನರ ಮನ ಮಿಡಿಯುತ್ತಿದೆ.

ಅಗ್ನಿಶಾಮಕ ದಳ, ಪೊಲೀಸರು, ಆರೋಗ್ಯ ಇಲಾಖೆ ಸಿಬ್ಬಂದಿ ಸೇರಿದಂತೆ ಎಲ್ಲರೂ ರಾತ್ರಿ ಇಡೀ ಕಣ್ಣಿಗೆ ನಿದ್ದೆ ಇಲ್ಲದೇ ಸಾತ್ವಿಕ್​ನ ರಕ್ಷಣೆಯಲ್ಲಿ ತೊಡಗಿದ್ದಾರೆ. ಸದ್ಯ ಇದರ ನಡುವೆ ಕ್ಯಾಮೆರಾದಲ್ಲಿ ಕಂದನ ಕಾಲುಗಳು ಸೆರೆಯಾಗಿವೆ.

ಮಗುವಿಗೆ ಉಸಿರಾಟದ ಸಮಸ್ಯೆಯಾಗದಂತೆ ಅಧಿಕಾರಿಗಳು ನಿರಂತರವಾಗಿ ಆಕ್ಸಿಜನ್​ ಪೂರೈಕೆ ಮಾಡುತ್ತಿದ್ದಾರೆ. ಕಾರ್ಯಾಚರಣೆ ವೇಳೆ ಮಗುವಿನ ಮೇಲೆ ಮಣ್ಣು ಬಿದ್ದಿದೆ. ಎಲ್ಲವನ್ನೂ ಕ್ಯಾಮೆರಾ ಮೂಲಕ ನಿಗಾ ವಹಿಸಲಾಗಿದ್ದು, ಮಗುವಿನ ಚಲನವಲನ ಸೆರೆಯಾಗಿದೆ.

ಮಗುವಿನ ಎರಡು ಕಾಲುಗಳು ಕ್ಯಾಮೆರಾ ಕಣ್ಣಿಗೆ ಬಿದ್ದಿದ್ದು ಕಾಲುಗಳು ಅಲ್ಲಾಡುತ್ತಿವೆ. ಆದಷ್ಟು ಬೇಗ ಮಗು ಹೊರಗೆ ಬರಲೆಂದು ಕುಟುಂಬಸ್ಥರು ಸೇರಿ ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

ಬದುಕು ಸಾವಿನ ಮಧ್ಯೆ ಹೋರಾಡುತ್ತಿರುವ ಮಗುವಿನ ರಕ್ಷಣೆಗಾಗಿ ಕಾರ್ಯಚರಣೆ ಮುಂದುವರಿದಿದ್ದು, ರಕ್ಷಣಾ ಕಾರ್ಯದ ವೇಳೆ ಮಗುವಿನ ಮೇಲೆ ಮಣ್ಣು ಬಿದ್ದಿದೆ. ಕೊಳವೆ ಬಾವಿಯ 16 ಅಡಿಯಲ್ಲಿ ಮಗು ಸಿಲುಕಿದ್ದು, ಅಕ್ಕಪಕ್ಕದಲ್ಲಿ ಮಣ್ಣು ತೆರೆವುಗೊಳಿಸಿ ಮಗುವನ್ನ ಹೊರ ತರಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

Leave a Reply

error: Content is protected !!
LATEST
ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ ಚಿಕ್ಕಮಗಳೂರಲ್ಲಿ ಧಾರಾಕಾರ ಮಳೆ- ಬೆಂಗಳೂರಿಗೂ ಆಗಮಿಸಲಿದ್ದಾನೆ ವರುಣ