NEWSನಮ್ಮರಾಜ್ಯ

232ಕ್ಕೇರಿದ ಕೊರೊನಾ ಸೋಂಕಿತರ ಸಂಖ್ಯೆ

ಶೂನ್ಯದಲ್ಲಿದ್ದ ವಿಜಯಪುರ ಜಿಲ್ಲೆಯಲ್ಲಿ ಒಂದೇದಿನ ಆರು ಮಂದಿಯಲ್ಲಿ ಸೋಂಕು ದೃಢ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಭಾನುವಾರ (ಏ.12) 16 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ, ಅದರಲ್ಲಿ , ಶೂನ್ಯದಲ್ಲಿದ್ದ ವಿಜಯಪುರದಲ್ಲೇ 6, ಮೈಸೂರಿನಲ್ಲಿ  ಒಂದು ದೃಢಪಟ್ಟಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 232 ಕ್ಕೆ ಏರಿದೆ.

ನ್ಯೂಡೆಲ್ಲಿಯ ನಿಜಾಮುದ್ದೀನ್ ಧರ್ಮಸಭೆಗೆ ಹೋಗಿ ಬಂದಿದ್ದ ತಬ್ಲಿಘಿಗಳು ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಸೋಂಕು ಹಬ್ಬಿಸಿದ್ದರು. 1,300 ಮಂದಿ ಪೈಕಿ ನಿನ್ನೆಯವರೆಗೂ 55 ಮಂದಿಗೆ ಸೋಂಕು ತಗುಲಿತ್ತು. ಆ ಸಂಖ್ಯೆ ಈಗ  ಹೆಚ್ಚಾಗಿದೆ.

ಇಂದು ಬೆಳಕಿಗೆ ಬಂದ 16 ಸೋಂಕಿತರ ಪೈಕಿ 6 ಮಂದಿಗೆ ಜಮಾತ್ ನಂಟಿದೆ. ಕೊರೊನಾಗೆ ಬಲಿಯಾದ ಕಲಬುರಗಿಯ ವೃದ್ಧ(ರೋಗಿ ನಂಬರ್ 177)ನ ಕುಟುಂಬದಲ್ಲಿ ಮತ್ತೆ ಸೋಂಕು ಕಾಣಿಸಿಕೊಂಡಿದೆ.

ಇದನ್ನೂ ಓದಿರಿ ಇಂದು ಮೈಸೂರಿನಲ್ಲಿ ಮತ್ತೆ 5 ದೃಢ, 214ಕ್ಕೆ ಏರಿದ ಕೊರೊನಾ ಸೋಂಕಿತರ ಸಂಖ್ಯೆ

ಮೃತ ವೃದ್ಧನ ಸೊಸೆಗೆ ಕೊರೊನಾ ಪಾಸಿಟಿವ್ ಬಂದಿದೆ. ಅಲ್ಲದೇ, ಬಹಮನಿ ಆಸ್ಪತ್ರೆಯಲ್ಲಿದ್ದಾಗ ವೃದ್ಧನನ್ನು ನೋಡಿಕೊಂಡಿದ್ದ ಆಯಾಗೂ ಸೋಂಕು ವ್ಯಾಪಿಸಿದೆ. ಬೆಳಗಾವಿಯ ನಾಲ್ವರಿಗೂ ಕೂಡ ಜಮಾತ್ ನಂಟು ಇರುವುದು ಖಚಿತಪಟ್ಟಿದೆ.

ಇಂದಿನ ಪ್ರಕರಣ

* ರೋಗಿ ನಂ.220 – ಕಲಬುರಗಿಯ 24 ವರ್ಷದ ಮಹಿಳೆ – ಕೇಸ್ ನಂ.177ರ ಸೊಸೆ
* ರೋಗಿ ನಂ.222 – ಕಲಬುರಗಿಯ 38 ವರ್ಷದ ಮಹಿಳೆ – ಕೇಸ್ ನಂ.177ರ ಸಂಪರ್ಕ – ಆಸ್ಪತ್ರೆ ಆಯಾ

* ರೋಗಿ ನಂ.223 – ಬೆಳಗಾವಿಯ ರಾಯಭಾಗದ 19 ವರ್ಷದ ಯುವಕ – ಕೇಸ್ ನಂ.150ರ ಸಂಪರ್ಕ

* ರೋಗಿ ನಂ.224 – ಬೆಳಗಾವಿಯ ಹಿರೇಬಾಗೇವಾಡಿಯ 38 ವರ್ಷದ ಪುರುಷ – ಕೇಸ್ ನಂ.128ರ ಸಂಪರ್ಕ

* ರೋಗಿ ನಂ.225 – ಬೆಳಗಾವಿಯ ರಾಯಭಾಗದ 55 ವರ್ಷದ ಪುರುಷ – ಕೇಸ್ ನಂ.150ರ ಸಂಪರ್ಕ

* ರೋಗಿ ನಂ.226 – ಬೆಳಗಾವಿಯ ರಾಯಭಾಗದ 25 ವರ್ಷದ ಯುವಕ – ಕೇಸ್ ನಂ.150ರ ಸಂಪರ್ಕ

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ