NEWSನಮ್ಮರಾಜ್ಯ

232ಕ್ಕೇರಿದ ಕೊರೊನಾ ಸೋಂಕಿತರ ಸಂಖ್ಯೆ

ಶೂನ್ಯದಲ್ಲಿದ್ದ ವಿಜಯಪುರ ಜಿಲ್ಲೆಯಲ್ಲಿ ಒಂದೇದಿನ ಆರು ಮಂದಿಯಲ್ಲಿ ಸೋಂಕು ದೃಢ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಭಾನುವಾರ (ಏ.12) 16 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ, ಅದರಲ್ಲಿ , ಶೂನ್ಯದಲ್ಲಿದ್ದ ವಿಜಯಪುರದಲ್ಲೇ 6, ಮೈಸೂರಿನಲ್ಲಿ  ಒಂದು ದೃಢಪಟ್ಟಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 232 ಕ್ಕೆ ಏರಿದೆ.

ನ್ಯೂಡೆಲ್ಲಿಯ ನಿಜಾಮುದ್ದೀನ್ ಧರ್ಮಸಭೆಗೆ ಹೋಗಿ ಬಂದಿದ್ದ ತಬ್ಲಿಘಿಗಳು ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಸೋಂಕು ಹಬ್ಬಿಸಿದ್ದರು. 1,300 ಮಂದಿ ಪೈಕಿ ನಿನ್ನೆಯವರೆಗೂ 55 ಮಂದಿಗೆ ಸೋಂಕು ತಗುಲಿತ್ತು. ಆ ಸಂಖ್ಯೆ ಈಗ  ಹೆಚ್ಚಾಗಿದೆ.

ಇಂದು ಬೆಳಕಿಗೆ ಬಂದ 16 ಸೋಂಕಿತರ ಪೈಕಿ 6 ಮಂದಿಗೆ ಜಮಾತ್ ನಂಟಿದೆ. ಕೊರೊನಾಗೆ ಬಲಿಯಾದ ಕಲಬುರಗಿಯ ವೃದ್ಧ(ರೋಗಿ ನಂಬರ್ 177)ನ ಕುಟುಂಬದಲ್ಲಿ ಮತ್ತೆ ಸೋಂಕು ಕಾಣಿಸಿಕೊಂಡಿದೆ.

ಇದನ್ನೂ ಓದಿರಿ ಇಂದು ಮೈಸೂರಿನಲ್ಲಿ ಮತ್ತೆ 5 ದೃಢ, 214ಕ್ಕೆ ಏರಿದ ಕೊರೊನಾ ಸೋಂಕಿತರ ಸಂಖ್ಯೆ

ಮೃತ ವೃದ್ಧನ ಸೊಸೆಗೆ ಕೊರೊನಾ ಪಾಸಿಟಿವ್ ಬಂದಿದೆ. ಅಲ್ಲದೇ, ಬಹಮನಿ ಆಸ್ಪತ್ರೆಯಲ್ಲಿದ್ದಾಗ ವೃದ್ಧನನ್ನು ನೋಡಿಕೊಂಡಿದ್ದ ಆಯಾಗೂ ಸೋಂಕು ವ್ಯಾಪಿಸಿದೆ. ಬೆಳಗಾವಿಯ ನಾಲ್ವರಿಗೂ ಕೂಡ ಜಮಾತ್ ನಂಟು ಇರುವುದು ಖಚಿತಪಟ್ಟಿದೆ.

ಇಂದಿನ ಪ್ರಕರಣ

* ರೋಗಿ ನಂ.220 – ಕಲಬುರಗಿಯ 24 ವರ್ಷದ ಮಹಿಳೆ – ಕೇಸ್ ನಂ.177ರ ಸೊಸೆ
* ರೋಗಿ ನಂ.222 – ಕಲಬುರಗಿಯ 38 ವರ್ಷದ ಮಹಿಳೆ – ಕೇಸ್ ನಂ.177ರ ಸಂಪರ್ಕ – ಆಸ್ಪತ್ರೆ ಆಯಾ

* ರೋಗಿ ನಂ.223 – ಬೆಳಗಾವಿಯ ರಾಯಭಾಗದ 19 ವರ್ಷದ ಯುವಕ – ಕೇಸ್ ನಂ.150ರ ಸಂಪರ್ಕ

* ರೋಗಿ ನಂ.224 – ಬೆಳಗಾವಿಯ ಹಿರೇಬಾಗೇವಾಡಿಯ 38 ವರ್ಷದ ಪುರುಷ – ಕೇಸ್ ನಂ.128ರ ಸಂಪರ್ಕ

* ರೋಗಿ ನಂ.225 – ಬೆಳಗಾವಿಯ ರಾಯಭಾಗದ 55 ವರ್ಷದ ಪುರುಷ – ಕೇಸ್ ನಂ.150ರ ಸಂಪರ್ಕ

* ರೋಗಿ ನಂ.226 – ಬೆಳಗಾವಿಯ ರಾಯಭಾಗದ 25 ವರ್ಷದ ಯುವಕ – ಕೇಸ್ ನಂ.150ರ ಸಂಪರ್ಕ

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ ನಿರಂತರ ಮಳೆ- BBMP ಎಲ್ಲ ಅಧಿಕಾರಿಗಳು ಸನ್ನದ್ಧರಾಗಿ: ತುಷಾರ್ ಗಿರಿನಾಥ್