NEWSಕೃಷಿನಮ್ಮಜಿಲ್ಲೆ

ಗೊರೂರು ಜಲಾಶಯದಿಂದ 25ಸಾವಿರ ಕ್ಯೂಸೆಕ್ಸ್ ನೀರು ಬಿಡುಗಡೆ: ಇಂಜಿನಿಯರ್ ಆನಂದ್

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಕೆ.ಆರ್.ಪೇಟೆ: ತಾಲೂಕಿನಲ್ಲಿ ಅಪಾಯ ಮಟ್ಟ ಮೀರಿ ಉಕ್ಕಿ ಹರಿಯುತ್ತಿರುವ ಹೇಮಾವತಿ ನದಿಗೆ ಇಳಿಯದಂತೆ ರೈತ ಬಾಂಧವರಿಗೆ ಎಕ್ಸಿಕ್ಯೂಟಿವ್ ಇಂಜಿನಿಯರ್ ಆನಂದ್ ಮನವಿ ಮಾಡಿದ್ದಾರೆ.

ಗೊರೂರು ಜಲಾಶಯವು ಭರ್ತಿ ಯಗುತ್ತಿರುವ ಹಿನ್ನೆಲೆಯಲ್ಲಿ ಹೇಮಾವತಿ ನದಿಗೆ 25ಸಾವಿರ ಕ್ಯೂಸೆಕ್ಸ್ ನೀರನ್ನು ನದಿಗೆ ಹರಿಯಬಿಡಲಾಗುತ್ತಿದ್ದು ಹೇಮಾವತಿ ನದಿಯು ಅಪಾಯ ಮಟ್ಟ ಮೀರಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ನದಿಯ ತಗ್ಗು ಪಾತ್ರದ ಜನರು ಎಚ್ಚರ ವಾಗಿರಬೇಕು ಎಂದು ಹೇಮಾವತಿ ಜಾಲಾಶಯ ಯೋಜನೆಯ ನಂಬರ್ 3ರ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಆನಂದ್ ಮನವಿ ಮಾಡಿದರು.

ಗದ್ದೆ ಹೊಸೂರು, ಚಿಕ್ಕ ಮಂದಗೆರೆ, ಶ್ರವಣೂರು, ಬಂಡಿಹೊಳೆ ಸೇರಿದಂತೆ ವಿವಿಧ ಗ್ರಾಮಗಳಿಗೆ ನೀರು ನುಗ್ಗಿದ್ದು, ನದಿಯು ಅಪಾಯ ಮಟ್ಟವನ್ನು ಮೀರಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರು ಎಚ್ಚರವಾಗಿರುವ ಜೊತೆಗೆ ನದಿಗೆ ಬಟ್ಟೆ ಒಗೆಯಲು, ದನಕರುಗಳಿಗೆ ನೀರು ಕುಡಿಸಲು ನದಿಗೆ ಇಳಿಯಬಾರದು ಎಂದು ಸೂಚನೆ ನೀಡಿದ್ದಾರೆ.

ಇನ್ನು ಗೊರೂರು ಜಲಾಶಯಕ್ಕೆ ಒಳ ಹರಿವು ಹೆಚ್ಚಾಗುತ್ತಿದ್ದು ನದಿಗೆ ಹರಿಯ ಬಿಡುವ ನೀರಿನ ಪ್ರಮಾಣ ಇನ್ನೂ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ರೈತ ಬಾಂಧವರು ಎಚ್ಚರವಾಗಿರಬೇಕು. ನದಿಯ ಪಾತ್ರದ ತಗ್ಗುಗಳಲ್ಲಿ ವಾಸವಾಗಿರುವ ಜನರು ಸುರಕ್ಷಿತ ಪ್ರದೇಶಕ್ಕೆ ತೆರಳಬೇಕು. ನದಿಗೆ ಇಳಿಯುವುದು, ದನಕರುಗಳನ್ನು ತೊಳೆಯಲು ನದಿಗೆ ಹೋಗುವುದು ಸೇರಿದಂತೆ ನದಿಯ ಪಾತ್ರದತ್ತ ತೆರಳ ಬಾರದು ಎಂದು ತಿಳಿಸಿ, ಎಚ್ಚರಿಕೆ ಸೂಚನಾ ಫಲಕಗಳನ್ನು ಹಾಕಿಸಿದ್ದಾರೆ.

ಹೇಮಾವತಿ ನದಿ ಪಾತ್ರದ ಹೇಮಗಿರಿ ಆಣೆಕಟ್ಟೆ ಹಾಗೂ ಮಂದಗೆರೆ ಅಣೆಕಟ್ಟೆಗೆ ಸರ್ಕಲ್ ಇನ್ಸ್ಪೆಕ್ಟರ್ ರೇವತಿ, ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಸತೀಶ್, ಪಿಡಿಒ ದಯಾಶಂಕರ್, ಎಇಇ ವಿಶ್ವನಾಥ್, ಸಹಾಯಕ ಎಂಜಿನಿಯರ್ ಗಳಾದ ನಾಯಕ್, ರಾಘವೇಂದ್ರ ಹಾಗೂ ಸಹಾಯಕ ಕಿರಿಯ ಇಂಜಿನಿಯರ್ ಗಳು ಹಾಗೂ ನೀರಾವರಿ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಡಾ.ಕೆ.ಆರ್.ನೀಲಕಂಠ, ಕೃಷ್ಣರಾಜಪೇಟೆ

Leave a Reply

error: Content is protected !!
LATEST
ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ