NEWSನಮ್ಮರಾಜ್ಯ

3 ನ್ಯಾಯ ಬೆಲೆ ಅಂಗಡಿಗಳ ಪರವಾನಗಿ ರದ್ದು

ಪಡಿತರ ವಿತರಣೆಯಲ್ಲಿ ಅಕ್ರಮ ಹಿನ್ನೆಲೆ ಕ್ರಮ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ನಗರದಲ್ಲಿ ಪಡಿತರ ಆಹಾರ ವಿತರಣೆಯಲ್ಲಿ ಲೋಪ ಕಂಡುಬಂದಿದ್ದು, ಕರ್ನಾಟಕ  ರಾಜ್ಯ ಆಹಾರ ಆಯೋಗದಿಂದ ಅನಿರೀಕ್ಷಿತ ಭೇಟಿ ನೀಡಿ  ತಪಾಸಣೆ ನಡೆಸಿ ನಗರದ ಮೂರು ನ್ಯಾಯ ಬೆಲೆ ಅಂಗಡಿಗಳ ಪರವಾನಗಿಗಳನ್ನು ರದ್ದು ಪಡಿಸಲು ಸೂಚನೆ ನೀಡಲಾಗಿದೆ ಎಂದು ಕರ್ನಾಟಕ  ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ. ಕೃಷ್ಣಮೂರ್ತಿ ತಿಳಿಸಿದ್ದಾರೆ.

ಕೊರೊನಾ ವೈರಾಣು ಸೋಂಕು ಹರಡುವುದನ್ನು ತಡೆಯಲು ಕೇಂದ್ರ ಸರ್ಕಾರ ಘೋಷಿಸಿರುವ ಲಾಕ್‍ಡೌನ್ ಹಿನ್ನೆಲೆಯಲ್ಲಿ ಏಪ್ರಿಲ್ ಮತ್ತು ಮೇ ಮಾಹೆಯ ಪಡಿತರವನ್ನು ಒಮ್ಮೆಲೆ ನೀಡಲು ಆದೇಶಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪಡಿತರ ವಿತರಣೆ ಹಾಗೂ ದಾಸ್ತಾನು ಮಳಿಗೆಯಲ್ಲಿ ವ್ಯವಸ್ಥೆ ಬಗ್ಗೆ ತಪಾಸಣೆ ಕೈಗೊಳ್ಳಲಾಯಿತು ಎಂದು ಮಾಹಿತಿ ನೀಡಿದರು.

ನಿಗದಿತ ಪ್ರಮಾಣಕ್ಕಿಂತ ಕಡಿಮೆ ಪಡಿತರ ವಿತರಣೆ ಮಾಡಿರುವ ಹಿನ್ನೆಲೆಯಲ್ಲಿ ಶಿವಾಜಿನಗರದ ಸತ್ಯ ಬಳಕೆದಾರರ ಸಹಕಾರ ಸಂಘ ನಡೆಸುತ್ತಿರುವ ಎಸ್.ಆರ್. 33 ಮತ್ತು  32 ಪಡಿತರ ವಿತರಣಾ ಕೇಂದ್ರಗಳು ಹಾಗೂ ಸ್ಯಾಪಿಂಗ್ ರಸ್ತೆಯಲ್ಲಿರುವ ಎಸ್.ಆರ್. 21 ಪಡಿತರ ವಿತರಣಾ ಕೇಂದ್ರಗಳನ್ನು ಮುಚ್ಚಿ ಅಮಾನತಿನಲ್ಲಿಡಲು ಆಹಾರ ಇಲಾಖೆಯ ಉಪನಿರ್ದೇಶಕ ನಾಗಭೂಷಣ್ ಅವರಿಗೆ ಸೂಚಿಸಿದರು. ತಪಾಸಣೆಯಲ್ಲಿ ಆಹಾರ ಆಯೋಗದ ಸದಸ್ಯ ಎಚ್.ವಿ. ಶಿವಶಂಕರ್ ಉಪಸ್ಥಿತರಿದ್ದರು.

ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದ್ದವರಿಗೂ ಪಡಿತರ ವಿತರಣೆ: ರಾಜ್ಯದ್ಯಂತ ಲಾಕ್‍ಡೌನ್ ಜಾರಿಯಲ್ಲಿ ಇರುವ ಹಿನ್ನೆಲೆಯಲ್ಲಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದ್ದವರಿಗೂ ಪಡಿತರ ವಿತರಣೆ  ಮಾಡುವ ಮಹತ್ವದ ನಿರ್ಣಯವನ್ನು ರಾಜ್ಯ ಸಚಿವ ಸಂಪುಟ ಇಲ್ಲಿ ಇಂದು ಕೈಗೊಂಡಿದೆ.

ರಾಜ್ಯ ಸಚಿವ ಸಂಪುಟ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯವನ್ನು ಸಚಿವ ಜೆ ಸಿ ಮಾಧುಸ್ವಾಮಿ ಪ್ರಕಟಿಸಿದರು.

ಬಡವರ ಕಷ್ಟ-ಸಂಕಷ್ಟಗಳತ್ತ ಸ್ಪಂದಿಸುವತ್ತ ಕೈಗೊಂಡಿರುವ ಈ ದಿಟ್ಟ ನಿರ್ಧಾರದಂತೆ ಪಡಿತರ ಚೀಟಿ ಹೊಂದಿರುವವರಿಗೆ ಮಾತ್ರವಲ್ಲದೆ, ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದ್ದವರಿಗೂ, ಮುಂದಿನ ಎರಡು ತಿಂಗಳ ಅವಧಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಪಡಿತರ ವಿತರಿಸಲು ಸಂಪುಟ ತೀರ್ಮಾನಿಸಿದೆ. ಆದರೆ, ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿ, ಅರ್ಜಿಯು ತಿರಸ್ಕøತಗೊಂಡಿದ್ದರೆ ಈ ಸೌಲಭ್ಯ ದೊರೆಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...