ಬೆಂಗಳೂರು: ಸ್ಯಾಂಡಲ್ವುಡ್ ನಟ ಧ್ರುವ ಸರ್ಜಾ ಅವರು ಸಿನಿಮಾ ಮಾಡುವುದಾಗಿ ನಂಬಿಸಿ 3.15 ಕೋಟಿ ರೂ. ಪಡೆದು ವಂಚಿಸಿದ್ದಾರೆ ಎಂಬ ಆರೋಪದಡಿ ಮುಂಬೈನ ಅಂಬೋಲಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ರಾಘವೇಂದ್ರ ಹೆಗ್ಗಡೆ ಎಂಬುವವರು ಧ್ರುವ ಸರ್ಜಾ ವಿರುದ್ಧ ದೂರು ನೀಡಿದ್ದು, ದೂರಿನಲ್ಲಿ ಸಿನಿಮಾ ಮಾಡುವುದಾಗಿ ನಮ್ಮಿಂದ 3.15 ಕೋಟಿ ರೂ. ಪಡೆದು ವಂಚಿಸಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.
ಧೃವ ಸರ್ಜಾ ಹಾಗೂ ರಾಘವೇಂದ್ರ ಹೆಗ್ಡೆ 2016ರಿಂದ 2018ರವರೆಗೆ ಜತೆಗೆ ಕೆಲಸ ಮಾಡಿದ್ದರು. ಧ್ರುವ ಸರ್ಜಾ ಅವರೇ ರಾಘವೇಂದ್ರ ಹೆಗ್ಡೆ ಭೇಟಿ ಮಾಡಿ ಸಿನಿಮಾ ಮಾಡುವುದಾಗಿ ಹೇಳಿದ್ದರು. ಸೋಲ್ಜರ್ ಎಂಬ ಸಿನಿಮಾ ಮಾಡುವುದಾಗಿ ಧ್ರುವ ಸರ್ಜಾ ಸ್ಕ್ರಿಪ್ಟ್ ಮಾಡಿದ್ದರು.
ಆದರೆ ಧ್ರುವ ಸರ್ಜಾ ಒಪಂದಕ್ಕೆ ಸಹಿ ಹಾಕುವ ಮೊದಲೇ 3.15 ಕೋಟಿ ರೂ. ಪಡೆದಿದ್ದಾರೆ ಎಂದು ಆರೋಪಿಸಿದ್ದು, ಅಲ್ಲದೆ ನಾನು ಹೆಚ್ಚಿನ ಬಡ್ಡಿಗೆ 3.15 ಕೋಟಿ ರೂ. ಸಾಲ ಪಡೆದು, ಧ್ರುವ ಸರ್ಜಾ ಒಡೆತನದ ಆರ್ಎಚ್ ಎಂಟರ್ಟೈನ್ಮೆಂಟ್ಗೆ ಹಣ ವರ್ಗಾವಣೆ ಮಾಡಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.
ಈ ಹಣ ಪಡೆದು ಅಪಾರ್ಟ್ಮೆಂಟ್ ಖರೀದಿ ಮಾಡಿರುವ ಧ್ರುವ ಸರ್ಜಾ, ಸಿನಿಮಾ ಮಾಡಿಕೊಡುವ ಭರವಸೆ ನೀಡಿದ್ದರು. 2019 ಫೆ.21ರಂದು ಒಪ್ಪಂದ ಆಗಿತ್ತು. ಆದರೆ ಈ ಹಣದ ವ್ಯವಹಾರವು ಒಪ್ಪಂದ ಮಾಡಿಕೊಳ್ಳುವ ಮುನ್ನವೇ ನಡೆದಿತ್ತು ಎಂದು ಆರೋಪಿಸಿ ಮುಂಬೈನ ಅಂಬೋಲಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಸದ್ಯ ದೂರಿನ ಆಧಾರದ ಮೇರೆಗೆ ಅಂಬೋಲಿ ಪೊಲೀಸರು ನಟ ಧ್ರುವ ಸರ್ಜಾ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.
Related

You Might Also Like
KSRTC: ಸರ್ಕಾರ ಸಾರಿಗೆ ನೌಕರರಿಗೆ 38 ತಿಂಗಳ ವೇತನ ಹೆಚ್ಚಳದ ಹಿಂಬಾಕಿ ಕೊಡಲೇ ಬೇಕು- ಏಕೆಂದರೆ ELಗೆ ಶೇ.15ರಷ್ಟು ಹೆಚ್ಚುವರಿ…!
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಮಾರ್ಚ್ 2023ರಲ್ಲಿ ಅಂದಿನ ಬಿಜೆಪಿ ಸರ್ಕಾರ 2020 ಜನವರಿ 1ರಿಂದ ಅನ್ವಯವಾಗುವಂತೆ ಘೋಷಣೆ ಮಾಡಿರುವ ಶೇ.15ರಷ್ಟು...
ಎಲ್ಲವೂ ಕೋರ್ಟ್ನಲ್ಲಿ ಇತ್ಯರ್ಥ ಆಗತ್ತೆ: 3.15 ಕೋಟಿ ರೂ. ವಂಚನೆ ಆರೋಪಕ್ಕೆ ಧ್ರುವ ಮ್ಯಾನೇಜರ್ ಸ್ಪಷ್ಟನೆ
ಬೆಂಗಳೂರು: ಸ್ಯಾಂಡಲ್ವುಡ್ ನಟ ಧ್ರುವ ಸರ್ಜಾ ವಿರುದ್ಧ ಈಗ 3.15 ಕೋಟಿ ರೂಪಾಯಿ ವಂಚನೆ ಆರೋಪ ಕೇಳಿ ಬಂದಿದೆ. 2016ರ ಜಗ್ಗು ದಾದ ಸಿನಿಮಾ ನಿರ್ದೇಶಕ ಹಾಗೂ...
ಕುಡಿದು ಠಾಣೆಗೆ ನುಗ್ಗಿ ಪೊಲೀಸರಿಗೇ ಅವಾಜ್ ಹಾಕಿ ಅಧಿಕಾರಿ ಸಹೋದರನ ರಂಪಾಟ
ಗದಗ: ಪೊಲೀಸ್ ಅಧಿಕಾರಿ ಸಹೋದರನೊಬ್ಬ ರಾತ್ರಿ ಕುಡಿದ ಮತ್ತಿನಲ್ಲಿ ಪೊಲೀಸ್ ಠಾಣೆಗೆ ನುಗ್ಗಿ, ಪೊಲೀಸರಿಗೆ ಅವಾಜ್ ಹಾಕಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ ಕಿರಿಕ್ ಮಾಡಿಕೊಂಡ ಘಟನೆ ಬೆಟಗೇರಿ ಪೊಲೀಸ್...
KSRTC ಬಸ್ ಚಾಲಕನ ಮೇಲೆ ಹಲ್ಲೆ ಮಾಡಿದ್ದ ಪೊಲೀಸ್ ಸಿಬ್ಬಂದಿ ಮಂಜುನಾಥ್ ಅಮಾನತು: ಎಸ್ಪಿ ಆದೇಶ
ಕೂಡ್ಲಿಗಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ಕರ್ತವ್ಯ ನಿರತ ಚಾಲಕನ ಮೇಲೆ ಮನಬಂದಂತೆ ಕೂಡ್ಲಿಗಿ ಪೊಲೀಸ್ ಸಿಬ್ಬಂದಿ ಮಂಜುನಾಥ್ ಚಪ್ಪಲಿಯಿಂದ ಹಲ್ಲೆ ಮಾಡಿದ್ದ. ಈ ಸಂಬಂಧ ಇಂದು...
ರಾತ್ರೋರಾತ್ರಿ ಡಾ.ವಿಷ್ಣುವರ್ಧನ್ ಸಮಾಧಿ ತೆರವು- ಅಭಿಮಾನಿಗಳ ಆಕ್ರೋಶ
ಬೆಂಗಳೂರು: ರಾತ್ರೋರಾತ್ರಿ ಅಭಿಮಾನಿಗಳ ವಿರೋಧದ ನಡುವೆಯೂ ಸಾಹಸಸಿಂಹ ಡಾ.ವಿಷ್ಣುವರ್ಧನ್ ಅವರ ಸಮಾಧಿಯನ್ನು ತೆರವುಗೊಳಿಸಿದ್ದು, ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಹೈಕೋರ್ಟ್ ಸೂಚನೆ ಮೇರೆಗೆ ಅಭಿಮಾನ್ ಸ್ಟುಡಿಯೋದಲ್ಲಿದ್ದ ಸಮಾಧಿಯನ್ನ ರಾತ್ರೋರಾತ್ರಿ...
ವೈ.ರಾಮಕೃಷ್ಣರ ಸೇವೆ-ಹೋರಾಟ ಇಂದಿಗೂ ಸ್ಮರಣೀಯ: ಸಚಿವ ಮುನಿಯಪ್ಪ
ಮೈಸೂರು: ಅನೇಕ ಕ್ಷೇತ್ರಗಳಲ್ಲಿ ತಮ್ಮದೇ ಆದಂತಹ ಛಾಪನ್ನು ವೈ.ರಾಮಕೃಷ್ಣ ಮೂಡಿಸಿದ್ದು, ಅವರ ಸೇವೆ ಮತ್ತು ಹೋರಾಟ ಇಂದಿಗೂ ಸಹ ಸ್ಮರಣೀಯವಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು...
ವಿಜಯಪಥ ವರದಿ ಪರಿಣಾಮ: ವರದಿ ಬಂದ ಅರ್ಥಗಂಟೆಯಲ್ಲಿ ಹಣ ಪಾವತಿ ಸಂಬಂಧ ಲೆಕ್ಕಾಧಿಕಾರಿಗೆ ಟಿಪ್ಪಣಿ ಬರೆದ ಡಿಸಿ
ವಿಜಯಪುರ: KKRTC ವಿಜಯಪುರ: ನಿವೃತ್ತ ನೌಕರನಿಗೆ 29ಲಕ್ಷ ಕೊಡುವಂತೆ ಹೈ ಕೋರ್ಟ್ ತೀರ್ಪು- ಈ ಆದೇಶವನ್ನೇ ಉಲ್ಲಂಘಿಸುತ್ತಿರುವ ಡಿಸಿ! ಎಂಬ ಶೀರ್ಷಿಕೆಯಡಿ ವಿಜಯಪಥ ದಲ್ಲಿ ವರದಿ ಬಂದ ಕೇವಲ...
ಲಾಲ್ಬಾಗ್: ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣರ ಜೀವನ ಚರಿತ್ರೆ ಫಲಪುಷ್ಪಗಳಲ್ಲಿ ಅನಾವರಣ
ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಲಾಲ್ಬಾಗ್ನಲ್ಲಿ ಆಯೋಜಿಸಿರುವ 218ನೇ ಫಲಪುಷ್ಪ ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು "ವೀರರಾಣಿ ಕಿತ್ತೂರು ಚೆನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಅವರ...