CRIMENEWSಸಿನಿಪಥ

ನಟ ಧ್ರುವ ಸರ್ಜಾ ವಿರುದ್ಧ 3.15 ಕೋಟಿ ರೂ. ವಂಚನೆ ಆರೋಪ: FIR ದಾಖಲು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಧ್ರುವ ಸರ್ಜಾ ಅವರು ಸಿನಿಮಾ ಮಾಡುವುದಾಗಿ ನಂಬಿಸಿ 3.15 ಕೋಟಿ ರೂ. ಪಡೆದು ವಂಚಿಸಿದ್ದಾರೆ ಎಂಬ ಆರೋಪದಡಿ ಮುಂಬೈನ ಅಂಬೋಲಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ರಾಘವೇಂದ್ರ ಹೆಗ್ಗಡೆ ಎಂಬುವವರು ಧ್ರುವ ಸರ್ಜಾ ವಿರುದ್ಧ ದೂರು ನೀಡಿದ್ದು, ದೂರಿನಲ್ಲಿ ಸಿನಿಮಾ ಮಾಡುವುದಾಗಿ ನಮ್ಮಿಂದ 3.15 ಕೋಟಿ ರೂ. ಪಡೆದು ವಂಚಿಸಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.

ಧೃವ ಸರ್ಜಾ ಹಾಗೂ ರಾಘವೇಂದ್ರ ಹೆಗ್ಡೆ 2016ರಿಂದ 2018ರವರೆಗೆ ಜತೆಗೆ ಕೆಲಸ ಮಾಡಿದ್ದರು. ಧ್ರುವ ಸರ್ಜಾ ಅವರೇ ರಾಘವೇಂದ್ರ ಹೆಗ್ಡೆ ಭೇಟಿ ಮಾಡಿ ಸಿನಿಮಾ ಮಾಡುವುದಾಗಿ ಹೇಳಿದ್ದರು. ಸೋಲ್ಜರ್ ಎಂಬ ಸಿನಿಮಾ ಮಾಡುವುದಾಗಿ ಧ್ರುವ ಸರ್ಜಾ ಸ್ಕ್ರಿಪ್ಟ್ ಮಾಡಿದ್ದರು.

ಆದರೆ ಧ್ರುವ ಸರ್ಜಾ ಒಪಂದಕ್ಕೆ ಸಹಿ ಹಾಕುವ ಮೊದಲೇ 3.15 ಕೋಟಿ ರೂ. ಪಡೆದಿದ್ದಾರೆ ಎಂದು ಆರೋಪಿಸಿದ್ದು, ಅಲ್ಲದೆ ನಾನು ಹೆಚ್ಚಿನ ಬಡ್ಡಿಗೆ 3.15 ಕೋಟಿ ರೂ. ಸಾಲ ಪಡೆದು, ಧ್ರುವ ಸರ್ಜಾ ಒಡೆತನದ ಆರ್‌ಎಚ್ ಎಂಟರ್ಟೈನ್ಮೆಂಟ್‌ಗೆ ಹಣ ವರ್ಗಾವಣೆ ಮಾಡಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.

ಈ ಹಣ ಪಡೆದು ಅಪಾರ್ಟ್ಮೆಂಟ್ ಖರೀದಿ ಮಾಡಿರುವ ಧ್ರುವ ಸರ್ಜಾ, ಸಿನಿಮಾ ಮಾಡಿಕೊಡುವ ಭರವಸೆ ನೀಡಿದ್ದರು. 2019 ಫೆ.21ರಂದು ಒಪ್ಪಂದ ಆಗಿತ್ತು. ಆದರೆ ಈ ಹಣದ ವ್ಯವಹಾರವು ಒಪ್ಪಂದ ಮಾಡಿಕೊಳ್ಳುವ ಮುನ್ನವೇ ನಡೆದಿತ್ತು ಎಂದು ಆರೋಪಿಸಿ ಮುಂಬೈನ ಅಂಬೋಲಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಸದ್ಯ ದೂರಿನ ಆಧಾರದ ಮೇರೆಗೆ ಅಂಬೋಲಿ ಪೊಲೀಸರು ನಟ ಧ್ರುವ ಸರ್ಜಾ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

Megha
the authorMegha

Leave a Reply

error: Content is protected !!
Latest news
ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ: ಶೇ.84ರಷ್ಟು ವಿದ್ಯಾರ್ಥಿಗಳು ಪಾಸ್‌ ಮೊದಲ ದಿನದ ಸಾರಿಗೆ ನೌಕರರ ಪಾದಯಾತ್ರೆ ಯಶಸ್ವಿ, ನಾಳೆ ಬೆಳಗ್ಗೆ 6 ಗಂಟೆಯಿಂದ ಮುಂದುವರಿಕೆ KSRTC: ಇಂದು ಸಾರಿಗೆ ಸಚಿವರ ಭೇಟಿಯಾದ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳು KSRTC: ಸಾರಿಗೆ ನೌಕರರ ಪಾದಯಾತ್ರೆ ಯಶಸ್ವಿಗಾಗಿ ಬೇರೆ ಸಂಘಟನೆಗಳೂ ಸಾಥ್‌! ಆಟೋ ಗ್ಯಾಸ್ ಕೊರತೆ - ವದಂತಿಗಳಿಗೆ ಕಿವಿಗೊಡಬೇಡಿ - ಸಾರ್ವಜನಿಕರಿಗೆ ಕರೆ ಚಿತ್ರದುರ್ಗ: ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಸಾರಿಗೆ ನೌಕರರ ಪಾದಯಾತ್ರೆ ಆರಂಭ ಮುಳ್ಳಯ್ಯನಗಿರಿಗೆ ಪ್ರವಾಸಕ್ಕೆ ಬಂದಿದ್ದ 16 ವರ್ಷದ ವಿದ್ಯಾರ್ಥಿನಿ ನಾಪತ್ತೆ