NEWSನಮ್ಮಜಿಲ್ಲೆನಮ್ಮರಾಜ್ಯ

4 ವರ್ಷಕ್ಕೊಮ್ಮೆ ಚೌಕಾಸಿ ನಡೆಸುವ ಬದಲು 7ನೇ ವೇತನ ಆಯೋಗ ಜಾರಿಮಾಡಿ: ನೌಕರರ ಸೇನೆ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಾರಿಗೆ ನೌಕರರ ವೇತನ ಹೆಚ್ಚಳಕ್ಕಾಗಿ ನಾಲ್ಕು ವರ್ಷಕ್ಕೊಮ್ಮೆ ಸರ್ಕಾರದೊಂದಿಗೆ ಚೌಕಾಸಿ ನಡೆಸುವ ಬದಲು ಅವರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಸೇನೆ ಆಗ್ರಹಿಸಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಅಧಿಕಾರಿಗಳು/ನೌಕರರ ವೇತನ ಹೆಚ್ಚಳಕ್ಕಾಗಿ ಡಿ.31ರಂದು ಚೌಕಾಸಿಗಾಗಿ ನಡೆಸುವ ಮುಷ್ಕರಕ್ಕೆ ಬೆಂಬಲವಿಲ್ಲ ಎಂದು ಗುರುವಾರ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸೇನೆಯ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದರು.

ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ತಿಳಿಸಿರುವಂತೆ ಸಾರಿಗೆ ನೌಕರರಿಗೂ 7ನೇ ವೇತನ ಆಯೋಗ ಜಾರಿ ಮಾಡಬೇಕು. 2020ರ ಜ.1ರಿಂದ ಶೇ.15 ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿಯನ್ನು ಒಂದೇ ಕಂತಿನಲ್ಲಿ ಪಾವತಿ ಮಾಡಬೇಕು ಎಂದು ಒತ್ತಾಯಿಸಿದರು.

ಸಾರಿಗೆ ನಿಗಮಗಳಿಗೆ ಖಾಸಗಿ ಎಲೆಕ್ಟ್ರಿಕ್‌ ಬಸ್ ಒದಗಿಸುವುದನ್ನು ನಿಲ್ಲಿಸಬೇಕು ಎಲೆಕ್ಟ್ರಿಕ್‌ ಬಸ್‌ಗಳನ್ನು ಖರೀದಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಖಾಸಗಿ ಕಂಪನಿಗಳಿಗೆ ಸಬ್ಸಿಡಿ ಒದಗಿಸುವ ಬದಲು ನಿಗಮಗಳಿಗೇ ನೀಡಬೇಕು ಎಂದು ಆಗ್ರಹಿಸಿದರು.

ಇನ್ನು ಸಾರಿಗೆ ನಿಗಮಗಳು ಖರೀದಿಸುತ್ತಿರುವ ಡೀಸೆಲ್ ವಾಹನಗಳ ಬದಲಿಗೆ ಎಲೆಕ್ಟ್ರಿಕ್‌ ವಾಹನಗಳನ್ನು ಖರೀದಿಸಬೇಕು. 2021ರ ಮುಷ್ಕರದಲ್ಲಿ ಭಾಗಿಯಾದ ಕಾರಣಕ್ಕೆ ವಜಾ ಮಾಡಿದವರನ್ನು ಮತ್ತೆ ಕೆಲಸಕ್ಕೆ ತೆಗೆದುಕೊಳ್ಳಬೇಕು. ವರ್ಗಾವಣೆ ಮಾಡಿದವರನ್ನು ಮೂಲ ಸ್ಥಳಕ್ಕೆ ಮತ್ತೆ ವರ್ಗಾಯಿಸಬೇಕು ಎಂದು ಒತ್ತಾಯಿಸಿದರು.

ಕೆಲಸದಿಂದ ವಜಾಗೊಂಡು, ಆತ್ಮಹತ್ಯೆ ಮಾಡಿಕೊಂಡವರ, ಇನ್ನಿತರ ಕಾರಣಗಳಿಂದ ಮೃತರಾದ ನೌಕರರ ಕುಟುಂಬದ ಸದಸ್ಯೆರಿಗೆ ಅನುಕಂಪದ ಆಧಾರದಲ್ಲಿ ಕೆಲಸ ನೀಡಬೇಕು, ಸುಳ್ಳು ಮೊಕದ್ದಮೆಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ನಿಗಮಗಳ ಕರ್ತವ್ಯ ನಿರ್ವಹಿಸುತ್ತಿರುವ ಚಾಲನಾ ಸಿಬ್ಬಂದಿಯ ಪರವಾನಗಿ ನವೀಕರಣಗಳನ್ನು ಮಾಡಿಸುವ ಜವಾಬ್ದಾರಿ ಸಂಸ್ಥೆಯದಾಗಬೇಕು. ಟಿಸಿ, ಎಟಿಐ, ಟಿಐ ಮತ್ತು ಎಟಿಎಸ್ ಅಧಿಕಾರಿ ಸಿಬ್ಬಂದಿಗೆ 8 ಗಂಟೆಗಳ ಕರ್ತವ್ಯ ಸಮಯವನ್ನು ನಿಗದಿಪಡಿಸಿ, ಹೆಚ್ಚುವರಿ ಕೆಲಸಕ್ಕೆ ಅಧಿಕ ವೇತನ ನೀಡಬೇಕು ಎಂದು ತಾಕೀತು ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಸೇನೆ ಅಧ್ಯಕ್ಷೆ ಜಮೀಲ ಬಿ. ಕಾರ್ಯಾಧ್ಯಕ್ಷ ಯೋಗೇಶ ಸಿ.ಎಚ್. ಸಂಘಟನಾ ಕಾರ್ಯದರ್ಶಿ ಜಗನ್ನಾಥ ಕೆ.ಕೆ. ಭಾಗವಹಿಸಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ