NEWSನಮ್ಮರಾಜ್ಯಸಿನಿಪಥ

ಫೆ.14ರ ವ್ಯಾಲೆಂಟೈನ್ಸ್ ಡೇಯಿಂದ 4ದಿನ ಮದ್ಯ ಮಾರಾಟ ನಿಷೇಧ: ಪ್ರೇಮಿಗಳಿಗೆ ನಿರಾಶೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಫೆಬ್ರವರಿ 14ರ ವ್ಯಾಲೆಂಟೈನ್ಸ್ ಡೇ ದಿನ ಪ್ರೇಮಿಗಳ ಪಾರ್ಟಿ, ಸೆಲೆಬ್ರೇಷನ್ ಜೋರಾಗಿರುತ್ತದೆ. ಆದರೆ ಸೆಲೆಬ್ರೇಷನ್ ಮೂಡ್ ನಲ್ಲಿದ್ದ ಪ್ರೇಮಿಗಳಿಗೆ ಈ ಬಾರಿ ನಿರಾಶೆ ಕಾದಿದ್ದು, ಮದ್ಯ ಸಿಗ್ತಿಲ್ಲ.

ಆದರೆ ಮದ್ಯ ಮಾರಾಟ ನಿಷೇಧಕ್ಕೆ ಹೋಟೆಲ್ ಅಸೋಸಿಯೇಷನ್‌ನಿಂದ ವಿರೋಧ ವ್ಯಕ್ತವಾಗಿದೆ. ಹೌದು! ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ವಿಧಾನಪರಿಷತ್ ಉಪಚುನಾವಣೆ ಹಿನ್ನೆಲೆ ವ್ಯಾಲೆಂಟೈನ್ಸ್ ಡೇ ಅಂದ್ರೆ ಫೆಬ್ರವರಿ 14ರ ಸಂಜೆ 5 ಗಂಟೆಯಿಂದ ಫೆಬ್ರವರಿ 17ರ ಬೆಳಗ್ಗೆ 6 ಗಂಟೆವರೆಗೆ ನಗರದ ಕೆಲವು ಭಾಗಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.

14, 15, 16 ಹಾಗೂ 20ನ್ನು ಡ್ರೈ ಡೇ ಅಂತ ಘೋಷಣೆ ಮಾಡಲಾಗಿದ್ದು, ಬೆಂಗಳೂರಿನಲ್ಲಿ ಫೆಬ್ರವರಿ 14ನ್ನು ವಿಜೃಂಭಣೆಯಿಂದ ಆಚರಿಸಲು ಸಿದ್ಧರಾಗಿದ್ದ ಯುವಜನತೆಗೆ ಇದರಿಂದ ನಿರಾಸೆಯಾಗಿದೆ.

ಪ್ರೇಮಿಗಳ ದಿನಕ್ಕಾಗಿ ವಿಶೇಷ ಸಿದ್ಧತೆಗಳನ್ನು ಮಾಡಿಕೊಂಡಿದ್ದ ರೆಸ್ಟೋರೆಂಟ್, ಪಬ್, ಬಾರ್‌ಗಳಲ್ಲಿ ಮದ್ಯ ಮಾರಾಟಕ್ಕೆ ನಿರ್ಬಂಧ ಹೇರಿದೆ. ಇದಕ್ಕೆ ಹೋಟೆಲ್ ಅಸೋಸಿಯೇಷನ್ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇಂಥ ವಿಶೇಷ ದಿನಗಳಲ್ಲಿ ನಮ್ಮ ಕೈ ಕಟ್ಟಿಹಾಕುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದೆ.

ಇನ್ನು ನಾಲ್ಕು ದಿನದ ಮದ್ಯ ಮಾರಾಟ ನಿಷೇಧದಿಂದ ಕಾರ್ಮಿಕರ ಸಂಬಳ, ಕಟ್ಟಡ ಬಾಡಿಗೆ ಮುಂತಾದ ಖರ್ಚುಗಳನ್ನು ನಿಭಾಯಿಸಲು ತೊಂದರೆಯಾಗಲಿದೆ. ಕೇವಲ 16 ಸಾವಿರ ಮತ ಚಲಾವಣೆಗೆ ಹೀಗೇಕೆ? ಚುನಾವಣೆಗೆ ನಾಲ್ಕು ದಿನ ಮದ್ಯ ಮಾರಾಟ ನಿಷೇಧದ ಆದೇಶವನ್ನು ಪುನರ್ ಪರಿಶೀಲನೆ ನಡೆಸಬೇಕೆಂದು ಬೆಂಗಳೂರು ಚುನಾವಣಾ ಅಧಿಕಾರಿಗಳಿಗೆ ಹೋಟೆಲ್ ಅಸೋಸಿಯೇಷನ್ ಪತ್ರ ಬರೆದು ಮನವಿ ಮಾಡಿದೆ.

ಒಟ್ಟಿನಲ್ಲಿ ವ್ಯಾಲೆಂಟೆನ್ಸ್ ಡೇ ಖುಷಿಯಲ್ಲಿದ್ದ ಮದ್ಯ ಪ್ರೇಮಿಗಳಿಗೆ ಹಾಗೂ ಆದಾಯದ ನಿರೀಕ್ಷೆಯಲ್ಲಿದ್ದ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ನಿರಾಶೆಯಾಗಿರೋದಂತೂ ನಂಬಲಾಗದಿದ್ದರೂ ಇದೇ ಸತ್ಯ.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...