CrimeNEWSನಮ್ಮಜಿಲ್ಲೆ

4 ತಿಂಗಳ ಹಿಂದೆ ಬಸ್‌ನಲ್ಲಿ ಕಳವುಮಾಡಿದ್ದ ಕಳ್ಳರ ಹೆಡೆಮುರಿ ಕಟ್ಟಲು ಧೈರ್ಯ ತೋರಿದ KSRTC ಮಂಗಳೂರು ಘಟಕ-2 ಕಂಡಕ್ಟರ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಒಬ್ಬರ ಬ್ಯಾಗಿನಲ್ಲಿದ್ದ ಚಿನ್ನ ಹಾಗೂ ನಗದು ಕಳವು ಮಾಡಿದ್ದ ಆರೋಪಿಗಳು ಮತ್ತೆ ಅದೇ ಬಸ್‌ನಲ್ಲಿ ನಾಲ್ಕು ತಿಂಗಳ ಬಳಿಕ ಬಂದಾಗ ನಿರ್ವಾಹಕ ಅವರ ಗುರುತು ಪತ್ತೆ ಮಾಡಿ ನಿಗಮದ ಅಧಿಕಾರಿಗಳ ಮೂಲಕ ಪೊಲೀಸರಿಗೆ ಒಪ್ಪಿಸಿದ್ದಾರೆ.

ಇದೇ ನ.12ರಂದು ಬೆಂಗಳೂರಿನ ಕೆಂಪೇಗೌಡ ಬಸ್‌ ನಿಲ್ದಾಣದಲ್ಲಿ ಖದೀಮರನ್ನು ಪೊಲೀಸರಿಗೆ ಒಪ್ಪಿಸಿದ ನಿರ್ವಾಹಕರು ಬಸ್‌ನಲ್ಲಿ ಕಳ್ಳತನಕ್ಕೆ ಇಳಿದಿದ್ದ ಪೋಕರಿಗಳ ಹೆಡೆಮುರಿಕಟ್ಟುವಲ್ಲಿ ಧೈರ್ಯ ತೋರಿಸಿದ್ದಾರೆ.

ಘಟನೆ :ಜು. 10ರಂದು ಮಂಗಳೂರು 2ನೇ ಘಟಕದ ಬಸ್‌ ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿರುವಾಗ ಉಪ್ಪಿನಂಗಡಿಯ ಗಡಿಯಾರದ ಬಳಿ ಬಸ್‌ ನಿಲ್ಲಿಸಿದಾಗ ಇಬ್ಬರು ಇಳಿದು ಹೋಗಿದ್ದರು. ಸುಮಾರು ನಿಮಿಷಗಳ ಕಾಲ ಅವರಿಗಾಗಿ ಕಾದರೂ ಅವರ ಪತ್ತೆಯಾಗಿರಲಿಲ್ಲ. ಈ ಬಗ್ಗೆ ಘಟಕದ ಅಧಿಕಾರಿಗಳಿಗೆ ವಿಷಯ ಮುಟ್ಟಿಸಲಾಯಿತು. ಆ ಅಧಿಕಾರಿಗಳ ಸೂಚನೆಯಂತೆ ಬಳಿಕ ಬಸ್‌ ಹೊರಟಿತು.

ಸ್ವಲ್ಪ ದೂರ ಹೋದ ನಂತರ ಮಹಿಳೆ ಒಬ್ಬರ ಬ್ಯಾಗ್‌ನಲ್ಲಿ ಇದ್ದ ಚಿನ್ನಾಭರಣ ಮತ್ತು ನಗದು ಕಳುವಾಗಿರುವುದು ತಿಳಿಯಿತು. ಹೀಗಾಗಿ ಹಣ ಮತ್ತು ಒಡವೆ ಕಳವಾಗಿದ್ದರ ಬಗ್ಗೆ ಪುತ್ತೂರು ಹಾಗೂ ಬೆಂಗಳೂರಿನಲ್ಲಿ ಪೊಲೀಸರಿಗೆ ದೂರು ನೀಡಲಾಗಿತ್ತು.

ನ. 12ರಂದು ರಾತ್ರಿ 9.45ಕ್ಕೆ ಬೆಂಗಳೂರಿನ ಕೆಂಪೇಗೌಡ ಬಸ್‌ ನಿಲ್ದಾಣದಲ್ಲಿ ಮಂಗಳೂರಿಗೆ ತೆರಳಲು ಫ್ಲಾಟ್‌ ಫಾರಂನಲ್ಲಿ ಪ್ರಯಾಣಿಕರು ಹತ್ತಿದ್ದರು. ನಿರ್ವಾಹಕ ಅಶೋಕ್‌ ಜಾಧವ್‌ ಅವರು ಟ್ರಿಪ್‌ ಶೀಟ್‌ ಪರಿಶೀಲಿಸುತ್ತಿರುವಾಗ ಇಬ್ಬರು ಮೊದಲೇ ಬಂದು ಕುಳಿತಿದ್ದರು.

ಅನುಮಾನಗೊಂಡ ನಿರ್ವಾಹಕ, ಈ ಹಿಂದೆ ಅವರು ಬಂದಿದ್ದಾಗ ಕಳವಾದ ಬಗ್ಗೆ ನೆನಪು ಮಾಡಿಕೊಂಡರು. ಕೂಡಲೇ ಘಟಕಕ್ಕೆ ಮಾಹಿತಿ ನೀಡಿದ್ದರು. ಘಟಕದ ಸೂಚನೆಯಂತೆ ಪೊಲೀಸ್‌ ಇಲಾಖೆಗೆ ಮಾಹಿತಿ ನೀಡಿದ್ದರು. ಆ ಇಬ್ಬರು ಪ್ರಯಾಣಿಕರನ್ನು ಉಪ್ಪಾರಪೇಟೆ ಪೊಲೀಸ್‌ ಠಾಣೆಗೆ ಕರೆದೊಯ್ದು ವಿಚಾರಿಸಿದಾಗ ಕಳವು ಮಾಡಿದ್ದನ್ನು ಒಪ್ಪಿಕೊಂಡಿದ್ದಾರೆ.

ನಿರ್ವಾಹಕ ಅಶೋಕ್‌ ಜಾಧವ್‌ ಅವರ ಈ ಸಮಯಪ್ರಜ್ಞೆ ಕಳೆದ 4 ತಿಂಗಳ ಹಿಂದೆ ಕಳವಾಗಿದ್ದರ ಬಗ್ಗೆ ಮಾಹಿತಿ ಸಿಕ್ಕಿದಂತಾಯಿತು. ಹೀಗಾಗಿ ಸಮಯಪ್ರಜ್ಞೆ ಮೆರೆದ ಬಸ್‌ ನಿರ್ವಾಹಕರ ಕಾರ್ಯ ತತ್ಪರತೆಯನ್ನು ಕೆಎಸ್‌ಆರ್‌ಟಿಸಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ವಿ. ಅನ್ಬುಕುಮಾರ್ ಶ್ಲಾಘಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ