ಬೆಂಗಳೂರು: ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಬಿಬಿಎಂಪಿ ವತಿಯಿಂದ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಗಣೇಶ ಮೂರ್ತಿಗಳ ವಿಸರ್ಜನೆಗಾಗಿ 41 ಕೆರೆ ಅಂಗಳದ ಶಾಶ್ವತ/ ತಾತ್ಕಾಲಿಕ ಕಲ್ಯಾಣಿಗಳು ಹಾಗೂ 489 ತಾತ್ಕಾಲಿಕ ಸಂಚಾರಿ ವಾಹನಗಳ ವ್ಯವಸ್ಥೆಯನ್ನು ಎಲ್ಲಾ ವಾರ್ಡ್ ಗಳಲ್ಲಿ ಮಾಡಿಕೊಳ್ಳಲಾಗಿದೆ.
ಗಣೇಶ ವಿಸರ್ಜನೆಗೆ ಸಂಬಂಧಿಸಿದಂತೆ ಮೇಲ್ವಿಚಾರಣೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನೋಡಲ್ ಅಧಿಕಾರಿಗಳನ್ನು ಸಹ ನಿಯೋಜಿಸಲಾಗಿದೆ. ಅದರ ಸಂಪೂರ್ಣ ವಿವರಗಳಿಗಾಗಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಅಥವಾ ಬಿಬಿಎಂಪಿ ವೆಬ್ ಸೈಟ್ಲಿಂಕ್ https://apps.bbmpgov.in/ganesh2025/ ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು.
ಪ್ರಮುಖ ಕಲ್ಯಾಣಿಗಳಲ್ಲಿ ಅಗತ್ಯ ವ್ಯವಸ್ಥೆ: ಪ್ರತಿ ವರ್ಷದಂತೆ ಬಿಬಿಎಂಪಿ ವ್ಯಾಪ್ತಿಯಲ್ಲಿನ ಕೆರೆಗಳಾದ ಸ್ಯಾಂಕಿಕೆರೆ, ಹಲಸೂರು ಕರೆ, ಯಡಿಯೂರು ಕೆರೆ ಹಾಗೂ ಹೆಬ್ಬಾಳ ಕೆರೆ ಹಾಗೂ ಇತರೆ ಕೆರೆಗಳ ಅಂಗಳದಲ್ಲಿರುವ ಕಲ್ಯಾಣಿಗಳಲ್ಲಿ ಗಣೇಶ ವಿಸರ್ಜನೆಗೆ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಕಲ್ಯಾಣಿಗಳ ಆವರಣದಲ್ಲಿ ವ್ಯವಸ್ಥಿತವಾಗಿ ಬ್ಯಾರಿಕೇಡಿಂಗ್ಗಳ ಅಳವಡಿಕೆ, ನುರಿತ ಈಜುಗಾರರ/ಜೀವ ರಕ್ಷಕರ ನಿಯೋಜನೆ, ಸಿಸಿಟಿವಿ ಅಳವಡಿಕೆ, ವಿದ್ಯುತ್ ದೀಪಗಳ ಸೌಲಭ್ಯ ಹಾಗೂ ಪೆಂಡಾಲ್ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.
ಇನ್ನು ಕಲ್ಯಾಣಿಗಳಲ್ಲಿ ಗಣೇಶ ವಿಸರ್ಜನೆ ಮಾಡಿದ ವೇಳೆ ಸಂಗ್ರಹವಾಗುವ ತ್ಯಾಜ್ಯವನ್ನು ಆಟೋ ಟಿಪ್ಪರ್ ಗಳ ಮೂಲಕ ವಿಲೇವಾರಿ ಮಾಡಲಾಗುತ್ತದೆ.
ಯಡಿಯೂರು ಕೆರೆ ಕಲ್ಯಾಣಿಯಲ್ಲಿ ವಿಸರ್ಜನೆಗೆ ವ್ಯವಸ್ಥೆ: ಯಡಿಯೂರು ಕೆರೆಯಲ್ಲಿ ಗಣೇಶ ವಿಸರ್ಜನೆಗಾಗಿ ಪ್ರತಿ ವರ್ಷದಂತೆ ಈ ವರ್ಷವೂ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಪೈಕಿ ದಿನಾಂಕ: 27-08-2025 ರಿಂದ 07-09-2025 ರವರೆಗೆ ಸಾರ್ವಜನಿಕರು ಪರಿಸರ ಸ್ನೇಹಿ ಅಥವಾ ಮಣ್ಣಿನಿಂದ ಮಾಡಿರುವ ಗಣೇಶ ಮೂರ್ತಿಗಳನ್ನು ಯಡಿಯೂರು ಕೆರೆಯಲ್ಲಿ ವಿಸರ್ಜನೆ ಮಾಡಲು ಅವಕಾಶ ಕಲ್ಪಿಸಲಾಗಿದೆ.
ಹಲಸೂರು ಕೆರೆ ಅಂಗಳದ ಕಲ್ಯಾಣಿ: ಹಲಸೂರು ಕೆರೆಯ ಕಲ್ಯಾಣಿಯಲ್ಲಿ 27-08-2025 ರಿಂದ 30-09-2025 ರವರೆಗೆ ಪರಿಸರ ಸ್ನೇಹಿ ಮೂರ್ತಿಗಳನ್ನು ಮಾತ್ರ ವಿಸರ್ಜನೆ ಮಾಡಲು ಅವಕಾಶ ಕಲ್ಪಿಸಲಾಗಿರುತ್ತದೆ. ಹಲಸೂರು ಕೆರೆಯ ಕಲ್ಯಾಣಿಯಲ್ಲಿ ಹೂಳೆತ್ತುವ ಕಾರ್ಯವನ್ನು 01-09-2025, 02-09-2025, 08-09-2025 ಹಾಗೂ 09-09-2025 ರಂದು ನಿರ್ವಹಿಸುವ ಕಾರಣ ಯಾವುದೇ ರೀತಿಯ ಮೂರ್ತಿ ವಿಸರ್ಜನೆಗೆ ಅವಕಾಶ ಇರುವುದಿಲ್ಲ.

ಹೆಬ್ಬಾಳ ಕೆರೆ ಅಂಗಳದ ಕಲ್ಯಾಣಿ: ಹೆಬ್ಬಾಳ ಕೆರೆ ಗಣೇಶ ಮೂರ್ತಿಗಳ ವಿಸರ್ಜನೆಗೆ 10-09-2025 ರವರೆಗೆ ಪರಿಸರ ಸ್ನೇಹಿ ಮೂರ್ತಿಗಳನ್ನು ಮಾತ್ರ ವಿಸರ್ಜನೆ ಮಾಡಲು ಅವಕಾಶ ಕಲ್ಪಿಸಲಾಗಿರುತ್ತದೆ.
ಸ್ಯಾಂಕಿ ಕೆರೆ ಅಂಗಳದ ಕಲ್ಯಾಣಿ: ಸ್ಯಾಂಕಿ ಕೆರೆ ಅಂಗಳದ ಕಲ್ಯಾಣಿ ಗಣೇಶ ಮೂರ್ತಿಗಳ ವಿಸರ್ಜನೆಗಾಗಿ 04-09-2025 ರವರೆಗೆ ಪರಿಸರ ಸ್ನೇಹಿ ಮೂರ್ತಿಗಳನ್ನು ಮಾತ್ರ ವಿಸರ್ಜನೆ ಮಾಡಲು ಅವಕಾಶ ಕಲ್ಪಿಸಲಾಗಿರುತ್ತದೆ.
Related


You Might Also Like
KKRTC: ಲಾರಿಗೆ ಡಿಕ್ಕಿ ಹೊಡೆಯುವುದ ತಪ್ಪಿಸಲು ಹೋಗಿ ರಸ್ತೆಬದಿ ಕಂದಕಕ್ಕೆ ನುಗ್ಗಿದ ಬಸ್- ತಪ್ಪಿದ ಭಾರಿ ಅನಾಹುತ
ವಿಭಾಗೀಯ ನಿಯಂತ್ರಣಾಧಿಕಾರಿಗಳ ಆದೇಶ ಪಾಲಿಸದ ಬೀದರ್ ಘಟಕ-1ರ ಡಿಎಂ ಬೀದರ್: ಎದುರಿಗೆ ಬಂದ ಲಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ...
BMTC: ಕರ್ತವ್ಯ ನಿರತ ಚಾಲಕರು ಮೊಬೈಲ್ ಬಳಸಿದರೆ ಗಂಭೀರ ಕೆಂಪು ಗುರುತಿನ ಪ್ರಕರಣ ದಾಖಲಿಸಿ- ತನಿಖಾ ಸಿಬ್ಬಂದಿಗೆ ಎಂಡಿ ಆದೇಶ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಚಾಲನಾ ಸಿಬ್ಬಂದಿಗಳು ಮಾರ್ಗದ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದಾಗ ಮೊಬೈಲ್ ಮತ್ತು ಡಿಜಿಟಲ್ ಗ್ಯಾಜೆಟ್ಸ್ (Bluetooth, Earphone ಇತ್ಯಾದಿಗಳನ್ನು ಬಳಸಿದರೆ ಅವರ...
ಕೆಐಎಡಿಬಿ: ಭೂ ಸ್ವಾಧೀನ ಕುರಿತು ಕೈಗಾರಿಕಾ ಮಂತ್ರಿ ಎಂ.ಬಿ.ಪಾಟೀಲ್ ರೈತರ ನಿಯೋಗದ ಜತೆ ಚರ್ಚೆ- ರಾಮಲಿಂಗಾರೆಡ್ಡಿ
ಆನೇಕಲ್: ತಾಲೂಕಿನ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿಯ ರೈತರ ನಿಯೋಗದ ಜತೆ ಇಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಮಂತ್ರಿ ಎಂ.ಬಿ.ಪಾಟೀಲ ಅವರನ್ನು ಭೇಟಿಯಾಗಿ ಪ್ರಸ್ತುತ...
KKRTC ನೌಕರ ನಿಧನ ಪ್ರಕರಣ: ಸಹೋದರನಿಗೆ ಅನುಕಂಪದ ಉದ್ಯೋಗ ಪಡೆಯುವ ಹಕ್ಕಿದೆ- ಹೈಕೋರ್ಟ್ ತೀರ್ಪು
ಬೆಂಗಳೂರು: ಸರ್ಕಾರಿ ನೌಕರನ ಪತ್ನಿ, ಪತಿಗಿಂತ ಮೊದಲೇ ನಿಧನರಾಗಿ ಆಕೆಗೆ ಮಕ್ಕಳಿರಲಿಲ್ಲದಿದ್ದಾಗ ಹಾಗೂ ಆನಂತರದಲ್ಲಿ ಸರ್ಕಾರಿ ನೌಕರನೂ ನಿಧನರಾದಾಗ ಅಂತಹ ಪ್ರಕರಣಗಳಲ್ಲಿ ನೌಕರನ ಸಹೋದರರಿಗೆ ಅನುಕಂಪದ ಆಧಾರದಲ್ಲಿ...
ದೇವನಹಳ್ಳಿ ಸರ್ಕಾರಿ ಶಾಲೆ ಕಿಟಕಿ ಛಾವಣಿ ಕುಸಿದು ವಿದ್ಯಾರ್ಥಿಗಳಿಗೆ ಗಾಯ ಪ್ರಕರಣ: ಆಯೋಗದ ಅಧ್ಯಕ್ಷ ನಾಗಣ್ಣಗೌಡ ಭೇಟಿ
ಗಾಯಗೊಂಡ ಮೂವರು ವಿದ್ಯಾರ್ಥಿಗಳ ಚಿಕಿತ್ಸಾ ವೆಚ್ಚ ಸರ್ಕಾರ ಭರಿಸಲಿದೆ ಬೆಂಗಳೂರು ಗ್ರಾಮಾಂತರ: ದೇವನಹಳ್ಳಿಯ ಕೋಟೆ ಬೀದಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಶಾಲೆ ಕಟ್ಟಡದ ಕಿಟಕಿ ಚಾವಣಿ...
NWKRTC: DA ಅರಿಯರ್ಸ್ ಬಗ್ಗೆ ಚರ್ಚಿಸಿ ಆದೇಶ ಮಾಡುವೆ-ಕೂಟದ ಪದಾಧಿಕಾರಿಗಳ ಜತೆ ವ್ಯವಸ್ಥಾಪಕ ನಿರ್ದೇಶಕರ ಚರ್ಚೆ
ಹುಬ್ಬಳ್ಳಿ: ಸಾರಿಗೆ ನೌಕರರ ಕೂಟದಿಂದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಲಯ ಮಟ್ಟದ ಕುಂದು ಕೊರತೆ ಬಗ್ಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಪ್ರಿಯಾಂಗಾ ಅವರ ಜತೆ...
ರಸ್ತೆ ಅಗೆದೆಡೆ ಪುನರ್ ಸ್ಥಾಪನೆ ಮಾಡುವ ವೇಳಾಪಟ್ಟಿ ಕೊಡಿ: ಆಡಳಿತಗಾರ ತುಷಾರ್ ಗಿರಿನಾಥ್
ಬೆಂಗಳೂರು: ನಗರದಲ್ಲಿ ಜಲಮಂಡಳಿ ವತಿಯಿಂದ ರಸ್ತೆ ಅಗೆದ ಭಾಗಗಳ ಪುನರ್ ಸ್ಥಾಪನೆ ಮಾಡುವ ವೇಳಾಪಟ್ಟಿ ನೀಡಲು ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಆಡಳಿತಗಾರರಾದ ತುಷಾರ್...
ಆ.28ರಂದು ಕನಿಷ್ಠ ಪಿಂಚಣಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ EPS ಪಿಂಚಣಿದಾರರ ಬೃಹತ್ ಪ್ರತಿಭಟನೆ
ಬೆಂಗಳೂರು: ಕೇಂದ್ರ ಸರ್ಕಾರ ಮುಸ್ಸಂಜೆಯ ಇಳಿವಯಸ್ಸಿನಲ್ಲಿರುವ ಪ್ರಬುದ್ಧ ಇಪಿಎಸ್-95 ನಿವೃತ್ತರು ಕಳೆದೊಂದು ದಶಕದಿಂದ ದೇಶಾದ್ಯಂತ ನಡೆಸಿದ ಹೋರಾಟಕ್ಕೆ ಯಾವುದೇ ಪ್ರತಿಫಲ ಕೊಡದೆ ಉದ್ಧಟತನದಿಂದ ನಡೆದುಕೊಳ್ಳುತ್ತಿರುವುದಕ್ಕೆ ಸಮಸ್ತ ನಿವೃತ್ತರು...
ನ್ಯೂಡೆಲ್ಲಿ: ವಿವಿಧ ಬೇಡಿಕೆಗಳ ಈಡೇರಿಸದ ಕೇಂದ್ರ ಸರ್ಕಾರದ ವಿರುದ್ಧ ಮತ್ತೆ ಸಮರ ಸಾರಿದ ದೇಶದ ಅನ್ನದಾತರು
ನ್ಯೂಡೆಲ್ಲಿ: ದೇಶದ ರೈತರ ಬೃಹತ್ ರ್ಯಾಲಿ ಸೋಮವಾರ ದೆಹಲಿಯಲ್ಲಿ ನಡೆದು ಜಂತರ್ ಮಂತರ್ನಲ್ಲಿ ಸಮಾವೇಶಗೊಂಡಿತು. ಸಂಯುಕ್ತ ಕಿಸಾನ್ ಮೋರ್ಚಾ ರಾಜಕೀಯತರ ಸಂಘಟನೆಯ ಕರೆಯ ಮೇರೆಗೆ ಸಹಸ್ರಾರು ರೈತರು...