NEWSಆರೋಗ್ಯನಮ್ಮಜಿಲ್ಲೆ

ಅಂಧ ಕಲಾವಿದರಿಗೆ ಕಾರ್ಮಿಕ ಇಲಾಖೆಯಿಂದ ಅಗತ್ಯ ವಸ್ತುಗಳ ವಿತರಣೆ  

ವಿಜಯಪಥ ಸಮಗ್ರ ಸುದ್ದಿ

ತುಮಕೂರು: ತಾಲೂಕಿನ ಹೆಗ್ಗೆರೆ ಗ್ರಾಮದ ಭೈರವೇಶ್ವರ ಕಾಲೇಜಿನ ಬಳಿ ವಾಸವಿರುವ ಅಂಧ ಕಲಾವಿದರಿಗೆ ಇಂದು ಬೆಳಗ್ಗೆ ಕಾರ್ಮಿಕ ಇಲಾಖೆಯಿಂದ 25 ಕೆ.ಜಿ. ಅಕ್ಕಿ, ಸಕ್ಕರೆ, ಸೋಪು ಹಾಗೂ ಮತ್ತಿತರ ಅಗತ್ಯ ವಸ್ತುಗಳನ್ನು ವಿತರಣೆ ಮಾಡಲಾಯಿತು.

ಸೋಂಕು ಹರಡದಂತೆ ಜಾರಿಯಲ್ಲಿರುವ ಲಾಕ್‌ಡೌನ್ ಸಂದರ್ಭದಲ್ಲಿ ಆಹಾರಕ್ಕೆ ತೊಂದರೆಯಾಗಬಾರದೆನ್ನುವ ದೃಷ್ಟಿಯಿಂದ ಈ ಅಂಧ ಕಲಾವಿದರ ತಂಡಕ್ಕೆ  ಅಗತ್ಯ ವಸ್ತುಗಳನ್ನು ವಿತರಣೆ ಮಾಡಲಾಯಿತು. ಕಾರ್ಮಿಕ ಅಧಿಕಾರಿ ಸುಭಾಷ್ ಎಂ. ಆಲದಕಟ್ಟೆ, ಕಂದಾಯ ನಿರೀಕ್ಷಕರು ಮತ್ತಿತರರಿದ್ದರು.

ಕೊರೊನಾ ಯೋಧರಿಂದ ಆಹಾರ ಪೂರೈಕೆ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಭಾರತೀಯ ರೆಡ್‌ಕ್ರಾಸ್ ಸೊಸೈಟಿ ಹಾಗೂ ರಾಜ್ಯ ಕಾರ್ಮಿಕ ಅಧ್ಯಯನ ಸಂಸ್ಥೆ ಸಹಯೋಗದಲ್ಲಿ ರಚಿಸಲಾಗಿರುವ ಕೊರೊನಾ ಯೋಧರು (ಕೊರೊನಾ ವಾರಿಯರ್ಸ್) ಪ್ರತಿದಿನ ಬೆಳಗ್ಗೆ ಹಾಗೂ ಸಂಜೆ ಹೆಗ್ಗೆರೆಯ ಈ 5 ಮಂದಿ ಅಂಧ ಕಲಾವಿದರಾದ ವಿಜಯ್‌ಕುಮಾರ್, ಸುರೇಶ್, ಮಂಜುಳ, ಶಿವಮ್ಮ, ಶೈಲಜ ಅವರಿಗೆ   ಆಹಾರ ಪೂರೈಕೆ ಮಾಡುವ ಮೂಲಕ ಮಾನವೀಯತೆ ಮೆರೆಯುತ್ತಿದ್ದಾರೆ.

ನಂದನ್‌ಕುಮಾರ್, ಹೇಮಂತ್‌ಕುಮಾರ್, ಕುಮಾರಸ್ವಾಮಿ, ಗಿರೀಶ್ ಸೇರಿದಂತೆ 8 ಕೊರೊನಾ ಯೋಧರ ತಂಡವು ಬಾಳನಕಟ್ಟೆಯಲ್ಲಿರುವ ವೀರಶೈವ ಸಮಾಜದ ಕಲ್ಯಾಣ ಮಂಟಪದಲ್ಲಿ ತಯಾರಿಸಲಾಗುತ್ತಿರುವ ಆಹಾರವನ್ನು ಪ್ರತೀ ದಿನ ಅಂಧರಿಗೆ   ತಲುಪಿಸುವ ಕೆಲಸ ಮಾಡುವುದರೊಂದಿಗೆ    ಭೀಮಸಂದ್ರದಿಂದ ಮಲ್ಲಸಂದ್ರದವರೆಗೆ ಜೋಪಡಿಗಳಲ್ಲಿ ವಾಸಿಸುತ್ತಿರುವ 150 ಮಂದಿ ನಿರ್ಗತಿಕರು ಹಾಗೂ ಕಡುಬಡವರಿಗೂ ಆಹಾರ ಪೂರೈಕೆ ಮಾಡುತ್ತಿದ್ದಾರೆ.

ಹೆಗ್ಗೆರೆಯ ಅಂಧ ಕಲಾವಿದರ ತಂಡವು ಲಾಕ್‌ಡೌನ್‌ನಿಂದ ಆಹಾರ ಸಮಸ್ಯೆ ಎದುರಿಸುತ್ತಿದ್ದಾರೆಂದು   ಸಾಮಾಜಿಕ ಜಾಲತಾಣದ ಮೂಲಕ  ಮಾಹಿತಿ ತಿಳಿದ ಕೂಡಲೇ ಕಾರ್ಮಿಕ ಇಲಾಖೆ, ವಾರ್ತಾ ಇಲಾಖೆ, ಆಹಾರ ಇಲಾಖೆ ಅಧಿಕಾರಿಗಳು ಕೂಡಲೇ ಧಾವಿಸಿ ದಿನಸಿ ಪದಾರ್ಥ, ಮಾಸ್ಕ್‌ಗಳನ್ನು ವಿತರಿಸುವುದರೊಂದಿಗೆ ಕೊರೊನಾ ವೈರಸ್ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಅರಿವು ಮೂಡಿಸಿದರು.

ಗ್ರಾ.ಪಂ. ಅಧ್ಯಕ್ಷ ನಾಗರಾಜ್, ಸದಸ್ಯ ಭೋಜಣ್ಣ, ವಾರ್ತಾ ಇಲಾಖೆ ಆರ್. ರೂಪಕಲಾ, ಆನಂದ್, ಆಹಾರ ನಿರೀಕ್ಷಕ ಕಾಂತರಾಜಯ್ಯ, ಸ್ಥಳೀಯರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ