CrimeNEWSನಮ್ಮಜಿಲ್ಲೆ

5ಜನ ಅಧಿಕಾರಿಗಳ ತಂಡದಿಂದ ಅಕ್ರಮವಾಗಿ ಒಂದುಗಿಡ ಗಾಂಜಾ ಬೆಳೆದ ರೈತನ ಬಂಧನ

ವಿಜಯಪಥ ಸಮಗ್ರ ಸುದ್ದಿ

ಹನೂರು: ಕೊತ್ತಂಬರಿ ಸೊಪ್ಪು ಬೆಳೆಯ ಜತೆಗೆ ಒಂದು ಗಾಂಜಾ ಗಿಡವನ್ನು ಬೆಳೆದಿದ್ದ ರೈತನೊಬ್ಬನನ್ನು ಅಬಕಾರಿ ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.

ಹನುಮೇಗೌಡ (40) ಬಂಧಿತ ಆರೋಪಿ ರೈತ. ಈತ ಕೊತ್ತಂಬರಿ ಸೊಪ್ಪು ಬೆಳೆಯ ಜತೆಗೆ ಒಂದು ಗಾಂಜಾ ಗಿಡವನ್ನು ಬೆಳೆದಿದ್ದಾನೆ ಎಂಬ ಖಚಿತ ಮಾಹಿತಿ ಮೇರೆಗೆ ಅಬಕಾರಿ ಪೊಲೀಸ್ ಇನ್ಸಪೇಕ್ಟರ್ ಸುನೀಲ್ ನೇತೃತ್ವದ 5 ಸಿಬ್ಬಂದಿಯೊಳಗೊಂಡ ತಂಡ ಚಿಕ್ಕಮಾಲಾಪುರ ಗ್ರಾಮದ ಸರೋಜಮ್ಮ ಕೋಂ ಲೇಟ್ ಬಸವಣ್ಣ ಎಂಬುವವರಿಗೆ ಸೇರಿದ ಜಮೀನಿಗೆ ಭೇಟಿ ನೀಡಿದ ವೇಳೆ ಒಂದು ಗಿಡ ಗಾಂಜಾ ಬೆಳೆದಿರುವುದು ದೃಢಪಟ್ಟಿದೆ.

ಈ ಹಿನ್ನೆಲೆಯಲ್ಲಿ ರೈತ ಹನುಮೇಗೌಡನನ್ನು ಬಂಧಿಸಿದ ತಂಡ ಜಮೀನಿನಲ್ಲಿ 1.3 ಮೀಟರ್ ( 4.3 ಅಡಿ ) ಎತ್ತರದ ಒಂದು ಗಾಂಜಾ ಗಿಡ ( 348 ಗ್ರಾಂ ) ವನ್ನು ವಶಕ್ಕೆ ಪಡೆದಿದ್ದಾರೆ.

ಸದ್ಯ ಆರೋಪಿ ಹನುಮೇಗೌಡನನ್ನು ಬಂಧಿಸಿ ಎನ್‌ಡಿಪಿಎಸ್ ಕಾಯ್ದೆಯಡಿ ಮೊಕದ್ದಮೆ ದಾಖಲಿಸಿ, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾರ್ಯಚರಣೆಯಲ್ಲಿ ಅಬಕಾರಿ ಉಪ ನಿರೀಕ್ಷಕರಾದ ಸಿದ್ದಯ್ಯ, ಅಬಕಾರಿ ಪೇದೆಗಳಾದ ಸಿದ್ದರಾಜು ಬಿ., ರಮೇಶ ಎಂ. ಹಾಗೂ ಪ್ರದೀಪ್‌ಕುಮಾರ್ ಕೆ. ಭಾಗವಹಿಸಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ