NEWSಕೃಷಿನಮ್ಮರಾಜ್ಯ

5ನೇ ದಿನಕ್ಕೆ ರೈತರ ಧರಣಿ : ಕಬ್ಬಿನ ಬೆಲೆ ನಿಗದಿಗಾಗಿ ಆದಿವಾಸಿಗಳ ವೇಷ ಧರಿಸಿ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಜಿಲ್ಲಾಧಿಕಾರಿ ಕಚೇರಿ ಮುಂದೆ ಕಬ್ಬು ಬೆಳೆಗಾರ ರೈತರು ನಾವು ಕಾಡು ಮನುಷ್ಯರಲ್ಲ ನ್ಯಾಯ ಕೊಡಿ ಎಂದು ವಿಭಿನ್ನವಾಗಿ ಶುಕ್ರವಾರ ಪ್ರತಿಭಟನೆ ಮಾಡಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ನಡೆಯುತ್ತಿರುವ ರೈತರ ಧರಣಿ ಐದನೇ ದಿನಕ್ಕೆ ಕಾಲಿಟ್ಟುದ್ದು, ಈ ವೇಳೆ ಕಬ್ಬಿನ ಎಫ್ ಆರ್ ಪಿ ಪುನರ್ ಪರಿಶೀಲನೆ ಮಾಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕಬ್ಬು ಬೆಳೆಗಾರ ರೈತರು ಕಾಡು ಜನರ ವೇಷ ಧರಿಸಿ ಜಿಲ್ಲಾಧಿಕಾರಿ ಕಚೇರಿಗೆ ನುಗ್ಗಲು ಯತ್ನಿಸಿದಾಗ ಪೊಲೀಸರು ತಡೆಗಟ್ಟಿದರು ಈ ವೇಳೆ ಮಾತಿನ ಚಕಮಕಿ ನಡೆಯಿತು.

ನಾವು ಜಿಲ್ಲಾಧಿಕಾರಿಯ ಕಚೇರಿ ಒಳಗೆ ಹೋಗುತ್ತಿರುವುದು ನೀವು ನಮ್ಮನ್ನು ಏಕೆ ತಡೆಯುತ್ತಿದ್ದೀರಿ ಕಾಡು ಜನರಂತೆ ವರ್ತಿಸುತ್ತಿರುವವರನ್ನು ನಮ್ಮ ಸಮಸ್ಯೆಗಳ ಬಗ್ಗೆ ಏನು ಕ್ರಮ ಕೈಗೊಂಡಿದ್ದೀರಿ ಎಂದು ಕೇಳಲು ಹೋಗುತ್ತಿರುವುದಾಗಿ ತಿಳಿಸಿದಾಗ ಪೊಲೀಸರು ಜಿಲ್ಲಾಧಿಕಾರಿಯವರು ಕಚೇರಿಯಲ್ಲಿ ಇಲ್ಲ ಬೇರೊಂದು ಸಭೆಯಲ್ಲಿ ಹೋಗಿರುತ್ತಾರೆ ಬಂದ ತಕ್ಷಣ ನಿಮ್ಮ ಧರಣಿ ನಿರತ ಸ್ಥಳಕ್ಕೆ ಕರೆ ತರುವುದಾಗಿ ಮನವೊಲಿಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ಕಳೆದ ಐದು ದಿನಗಳಿಂದ ವಿಭಿನ್ನ ರೀತಿಯ ಪ್ರತಿಭಟನೆ ನಡೆಸುತ್ತಿದ್ದರೂ ಜಿಲ್ಲಾಧಿಕಾರಿಗಳ ಮಾಹಿತಿಗೆ ಸೊಪ್ಪು ಹಾಕದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ರೈತರ ಸ್ವಾಭಿಮಾನವನ್ನು ಕೆರಳುಸುತ್ತಿದ್ದಾರೆ.

ರಾಜ್ಯದಲ್ಲಿ ಟನ್ ಕಬ್ಬಿಗೆ ಎಫ್ ಆರ್ ಪಿ ದರ 3050 ರೂ.ಗೆ ನಿಗದಿಗೊಳಿಸಲಾಗಿದೆ. ಆದರೆ ಇತರೆ ರಾಜ್ಯಗಳು 3500 ರಿಂದ 3800 ರೂ.ಗೂ ಹೆಚ್ಚು ದರ ನೀಡುತ್ತಿರುವಾಗ ರಾಜ್ಯ ಸರ್ಕಾರ ಮಾತ್ರ ಕಬ್ಬು ಬೆಳೆಗಾರರಿಗೆ ಮೋಸ ಮಾಡುತ್ತಿದೆ ಎಂದು ಪ್ರತಿಭಟನಾ ನಿರತ ರೈತರು ಕಿಡಿಕಾರಿದರು.

ಕಡಿಮೆ ದರ ನಿಗದಿಯಿಂದ ರಾಜ್ಯದ 30 ಲಕ್ಷಕ್ಕೂ ಹೆಚ್ಚು ಕಬ್ಬು ಬೆಳೆಗಾರರು ಅತಂತ್ರರಾಗಿದ್ದಾರೆ 40,000 ಕೋಟಿ ರೂ.ಗೂ ಹೆಚ್ಚು ವಹಿವಾಟು ನಡೆಸುವ ಕಬ್ಬು ಬೆಳೆಗಾರರಿಗಿಂತ ಸಕ್ಕರೆ ಕಾರ್ಖಾನೆಗಳ ಹಿತವೇ ಬಿಜೆಪಿ ಸರ್ಕಾರಕ್ಕೆ ಮುಖ್ಯವಾಗಿದೆ.

ಸಕ್ಕರೆ ಕಾರ್ಖಾನೆಗಳು ತೂಕ ಇಳುವರಿಯಲ್ಲಿ ಮೋಸ ಕಟಾವು ಮತ್ತು ಸಾಗಾಣಿಕೆ ವೆಚ್ಚದಲ್ಲಿ ಮೋಸ ಇದೆಲ್ಲಾ ವಂಚನೆಗಳನ್ನು ತಪ್ಪಿಸಲು ಕಾರ್ಖಾನೆ ಮತ್ತು ರೈತರ ನಡುವೆ ದ್ವಿಪಕ್ಷೀಯ ಒಪ್ಪಂದ ಪತ್ರ ಕಡ್ಡಾಯವಾಗಿ ಜಾರಿಯಾಗಬೇಕು ಎಂದು ಆಗ್ರಹಿಸಿದರು.

ಸರ್ಕಾರದ ಆದೇಶಗಳನ್ನು ಕಾರ್ಖಾನೆಗಳು ಉಲ್ಲಂಘನೆ ಮಾಡುತ್ತಿದ್ದರೂ ಜಿಲ್ಲಾಧಿಕಾರಿ ಇವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡುವ ಅಧಿಕಾರವಿದ್ದರೂ ಏಕೆ ಕ್ರಮವಹಿಸಿಲ್ಲ. ಜಿಲ್ಲಾಧಿಕಾರಿಗಳು ಜಾಣ ಕುರುಡರಂತೆ ವರ್ತಿಸುತ್ತಿರುವುದ ಯಾರದನ್ನು ಮೆಚ್ಚಿಸಲು ಎಂದು ಪ್ರತಿಭಟನಾಕಾರರು ಆಕೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್, ಜಿಲ್ಲಾಧ್ಯಕ್ಷ ಪಿ. ಸೋಮಶೇಖರ್, ಜಿಲ್ಲಾ ಪ್ರದಾನ ಕಾರ್ಯದರ್ಶಿ ಬರಡನಪುರ ನಾಗರಾಜ್, ಸಂಚಾಲಕ ಕೆಆರ್ಎಸ್ ರಾಮೇಗೌಡ, ತಾಲೂಕು ಅಧ್ಯಕ್ಷ ಲಕ್ಷ್ಮಿಪುರ ವೆಂಕಟೇಶ್, ತಾಲೂಕು ಪ್ರಧಾನ ಕಾರ್ಯದರ್ಶಿ ಡಿ.ಕಾಟೂರು ಮಹದೇವಸ್ವಾಮಿ, ಚುಂಚುರಾಯನಹುಂಡಿ ಮಂಜು.

ನಂಜುಂಡಸ್ವಾಮಿ, ಸಿದ್ದರಾಮ, ಬಸವರಾಜಪ್ಪ, ವರಕೂಡು ನಾಗೇಶ್, ತೆರಣಿಮುಂಟಿ ಸುರೇಶ್ ಶೆಟ್ಟಿ, ಸಾತಗಳ್ಳಿ ಬಸವರಾಜ್, ಪಿ ರಾಜು, ವಾಜಮಂಗಲ ಮಹದೇವು, ಸಾಕಮ್ಮ ಮಹಾ ಲಿಂಗನಾಯಕ ಸ್ವಾಮಿ,ರಾಜು, ಮಹಾದೇವಪ್ಪ ಹೊಸವಳಲು ರಮೇಶ್, ಬೈರೇಗೌಡ, ಷಡಕ್ಷರಿ, ಹೆಗ್ಗೂರು ರಂಗರಾಜು, ಶಿವರಾಮು, ಸಿ ಜವರಪ್ಪ, ನಾಗರಾಜು ಮುಂತಾದವರು ಇದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ